AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಅಯ್ಯಯ್ಯೋ.. ಫೈನಲ್ ಪಂದ್ಯಕ್ಕೆ ಐರೆನ್ ಲೆಗ್ ಅಂಪೈರ್ಸ್..! ಫ್ಯಾನ್ಸ್ ಆತಂಕ

IND vs SA, T20 World Cup 2024: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಐಸಿಸಿ ಅಧಿಕಾರಿಗಳನ್ನು ನೇಮಿಸಿದೆ. ಅದರಂತೆ ನ್ಯೂಜಿಲೆಂಡ್‌ನ ಕ್ರಿಸ್ ಗಫ್ನಿ ಮತ್ತು ಇಂಗ್ಲೆಂಡ್‌ನ ರಿಚರ್ಡ್ ಇಲ್ಲಿಂಗ್‌ವರ್ತ್ ಫೈನಲ್ ಪಂದ್ಯದಲ್ಲಿ ಆನ್-ಫೀಲ್ಡ್ ಅಂಪೈರ್‌ಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಂಪೈರ್ ರಿಚರ್ಡ್ ಕೆಟಲ್‌ಬರೋ ಅವರನ್ನು ಮೂರನೇ ಅಂಪೈರ್ ಆಗಿ ನೇಮಿಸಲಾಗಿದೆ. ಆಸ್ಟ್ರೇಲಿಯಾದ ರಾಡ್ ಟಕರ್ ನಾಲ್ಕನೇ ಅಂಪೈರ್ ಆಗಿ ಆಯ್ಕೆಯಾಗಿದ್ದಾರೆ.

IND vs SA: ಅಯ್ಯಯ್ಯೋ.. ಫೈನಲ್ ಪಂದ್ಯಕ್ಕೆ ಐರೆನ್ ಲೆಗ್ ಅಂಪೈರ್ಸ್..! ಫ್ಯಾನ್ಸ್ ಆತಂಕ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Jun 28, 2024 | 5:53 PM

Share

2024 ರ ಟಿ20 ವಿಶ್ವಕಪ್‌ನ ಫೈನಲ್‌ಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಜೂನ್ 29 ರಂದು ಶನಿವಾರ ನಡೆಯಲಿರುವ ಬ್ಲಾಕ್‌ಬಸ್ಟರ್ ಪ್ರಶಸ್ತಿ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಲಿವೆ. ಕೆನ್ಸಿಂಗ್ಟನ್ ಓವಲ್ ಮೈದಾನವು ಎರಡು ಅಜೇಯ ತಂಡಗಳ ನಡುವಿನ ಮುಖಾಮುಖಿಗೆ ಸಾಕ್ಷಿಯಾಗಲಿದೆ. ದಕ್ಷಿಣ ಆಫ್ರಿಕಾ ತಂಡ ಟಿ20 ವಿಶ್ವಕಪ್‌ ಪ್ರಶಸ್ತಿ ಗೆಲ್ಲಲು ಮೊದಲ ಬಾರಿಗೆ ಮೈದಾನಕ್ಕಿಳಿಯಲಿದ್ದರೆ, 11 ವರ್ಷಗಳಿಂದ ಕಾಡುತ್ತಿರುವ ಐಸಿಸಿ ಟ್ರೋಫಿ ಬರ ನೀಗಿಸಲು ಟೀಂ ಇಂಡಿಯಾ ಕಣ್ಣಿಟ್ಟಿದೆ. ಇನ್ನು ಈ ಪ್ರಶಸ್ತಿ ಪಂದ್ಯಕ್ಕೆ ಐಸಿಸಿ ಪಂದ್ಯ ದ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪಂದ್ಯದ ಅಧಿಕಾರಿಗಳಿವರು

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಐಸಿಸಿ ಅಧಿಕಾರಿಗಳನ್ನು ನೇಮಿಸಿದೆ. ಅದರಂತೆ ನ್ಯೂಜಿಲೆಂಡ್‌ನ ಕ್ರಿಸ್ ಗಫ್ನಿ ಮತ್ತು ಇಂಗ್ಲೆಂಡ್‌ನ ರಿಚರ್ಡ್ ಇಲ್ಲಿಂಗ್‌ವರ್ತ್ ಫೈನಲ್ ಪಂದ್ಯದಲ್ಲಿ ಆನ್-ಫೀಲ್ಡ್ ಅಂಪೈರ್‌ಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಂಪೈರ್ ರಿಚರ್ಡ್ ಕೆಟಲ್‌ಬರೋ ಅವರನ್ನು ಮೂರನೇ ಅಂಪೈರ್ ಆಗಿ ನೇಮಿಸಲಾಗಿದೆ. ಆಸ್ಟ್ರೇಲಿಯಾದ ರಾಡ್ ಟಕರ್ ನಾಲ್ಕನೇ ಅಂಪೈರ್ ಆಗಿ ಆಯ್ಕೆಯಾಗಿದ್ದಾರೆ.

ಟೀಂ ಇಂಡಿಯಾ ಫ್ಯಾನ್ಸ್​ಗೆ ಭಯ ಏಕೆ?

ರಿಚರ್ಡ್ ಕೆಟಲ್‌ಬರೋ ಮತ್ತು ರಿಚರ್ಡ್ ಇಲ್ಲಿಂಗ್‌ವರ್ತ್, ಆ ಇಬ್ಬರೂ ಫೈನಲ್ ಪಂದ್ಯಕ್ಕೆ ಅಂಪೈರ್​ಗಳಾಗಿರುವುದು ಅಭಿಮಾನಿಗಳಿಗೆ ಹಾಗೂ ತಂಡಕ್ಕೆ ಆತಂಕವನ್ನುಂಟು ಮಾಡಿದೆ. ಇದಕ್ಕೆ ಕಾರಣವೂ ಇದ್ದು, ರಿಚರ್ಡ್ ಕೆಟಲ್‌ಬರೋ ಅಂಪೈರಿಂಗ್ ಮಾಡಿದ ಎಲ್ಲಾ 6 ನಾಕೌಟ್ ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋಲನ್ನು ಎದುರಿಸಿದೆ. ಇದರಲ್ಲಿ 2014ರ ಟಿ20 ವಿಶ್ವಕಪ್ ಫೈನಲ್, 2016ರ ಟಿ20 ವಿಶ್ವಕಪ್ ಸೆಮಿಫೈನಲ್, 2015ರ ವಿಶ್ವಕಪ್ ಸೆಮಿಫೈನಲ್, 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್, 2019ರ ವಿಶ್ವಕಪ್ ಸೆಮಿಫೈನಲ್ ಮತ್ತು 2023ರ ವಿಶ್ವಕಪ್ ಫೈನಲ್ ಸೇರಿವೆ.

ಇನ್ನು ರಿಚರ್ಡ್ ಇಲ್ಲಿಂಗ್‌ವರ್ತ್ ಬಗ್ಗೆ ಹೇಳಬೆಕೆಂದರೆ ಈ ಬಾರಿಯ ಟಿ20 ವಿಶ್ವಕಪ್​ಗೂ ಮೊದಲು, ಇಲ್ಲಿಂಗ್‌ವರ್ತ್ ಅಂಪೈರ್ ಆಗಿದ್ದ ಪ್ರಮುಖ ಪಂದ್ಯಗಳಲ್ಲಿ ಭಾರತ ಸೋತಿದೆ. ಅದರಲ್ಲಿ 2019 ರ ವಿಶ್ವಕಪ್‌ ಸೆಮಿಫೈನಲ್, 2021 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಫ್ ಫೈನಲ್ ಹಾಗೂ 2023 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಫ್ ಫೈನಲ್ ಪಂದ್ಯಗಳು ಸೇರಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Fri, 28 June 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ