AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ರೋಹಿತ್- ಗಿಲ್ ಅಬ್ಬರ; ಮೊದಲ 10 ಓವರ್​ಗಳಲ್ಲಿ 91 ರನ್ ಚಚ್ಚಿದ ಭಾರತ..!

IND vs SA, ICC World Cup 2023: ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಮೊದಲ 10 ಓವರ್​ಗಳಲ್ಲೇ ತನ್ನ ಪವರ್ ತೋರಿ ಬರೋಬ್ಬರಿ 91 ರನ್ ಕಲೆಹಾಕಿದೆ. ಈ ಮೂಲಕ ಇತರ ಎದುರಾಳಿ ತಂಡಗಳೆದುರು ಮಾರಕ ಬೌಲಿಂಗ್ ಮೂಲಕ ಅಬ್ಬರಿಸುತ್ತಿದ್ದ ಆಫ್ರಿಕಾ ಬೌಲರ್​ಗಳಿಗೆ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಆರಂಭದಲ್ಲೇ ಕಡಿವಾಣ ಹಾಕಿದ್ದಾರೆ.

IND vs SA: ರೋಹಿತ್- ಗಿಲ್ ಅಬ್ಬರ; ಮೊದಲ 10 ಓವರ್​ಗಳಲ್ಲಿ 91 ರನ್ ಚಚ್ಚಿದ ಭಾರತ..!
ಶುಭ್​ಮನ್ ಗಿಲ್, ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on:Nov 05, 2023 | 3:14 PM

Share

ಏಕದಿನ ವಿಶ್ವಕಪ್‌ನ (ICC World Cup 2023) 37 ನೇ ಪಂದ್ಯದಲ್ಲಿ ಇಂದು ಅಗ್ರ 2 ತಂಡಗಳಾದ ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ (India vs South Africa) ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಮೊದಲ 10 ಓವರ್​ಗಳಲ್ಲೇ ತನ್ನ ಪವರ್ ತೋರಿ ಬರೋಬ್ಬರಿ 91 ರನ್ ಕಲೆಹಾಕಿದೆ. ಈ ಮೂಲಕ ಇತರ ಎದುರಾಳಿ ತಂಡಗಳೆದುರು ಮಾರಕ ಬೌಲಿಂಗ್ ಮೂಲಕ ಅಬ್ಬರಿಸುತ್ತಿದ್ದ ಆಫ್ರಿಕಾ ಬೌಲರ್​ಗಳಿಗೆ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಶುಭ್​ಮನ್ ಗಿಲ್ (Shubman Gill) ಆರಂಭದಲ್ಲೇ ಕಡಿವಾಣ ಹಾಕಿದ್ದಾರೆ. ಆದರೆ ಆರಂಭಿಕರಿಬ್ಬರ ವಿಕೆಟ್ ಪತನವಾಗಿರುವುದು ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.

62 ರನ್​ಗಳ ಜೊತೆಯಾಟ

ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್​ಗೆ ಈ ಇಬ್ಬರು 62 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಆರಂಭದಿಂದಲೂ ತಮ್ಮ ಸ್ಫೋಟಕ ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮಾ, ಬೌಂಡರಿ ಮೂಲಕ ತಮ್ಮ ಖಾತೆ ತೆರೆದರು. ಎರಡನೇ ಓವರ್​ನಲ್ಲಿ ದಾಳಿಗಿಳಿದ ಯಾನ್ಸನ್​ಗೂ ಉತ್ತಮ ಆರಂಭ ಸಿಗಲಿಲ್ಲ ಈ ಓವರ್​ನಲ್ಲಿ ಒಟ್ಟು 18 ರನ್ ಬಂದವು.

IND vs SA: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಉಭಯ ತಂಡಗಳು ಹೀಗಿವೆ

ಮೊದಲ ಓವರ್​ನಿಂದಲೇ ಅಬ್ಬರ

ಇಲ್ಲಿಗೆ ನಿಲ್ಲದ ರೋಹಿತ್ ಹಾಗೂ ಗಿಲ್ ಮೂರನೇ ಓವರ್​ನಲ್ಲೂ 8 ರನ್ ಕಲೆಹಾಕಿದರು. ಹೀಗಾಗಿ ಮೊದಲ ಐದು ಓವರ್​ಗಳಲ್ಲಿ ಟೀಂ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ ಬರೋಬ್ಬರಿ 61 ರನ್ ಕಲೆಹಾಕಿತು. ಇದರಲ್ಲಿ ನಾಯಕ ರೋಹಿತ್ ಶರ್ಮಾ ಅವರದ್ದೇ ಸಿಂಹಪಾಲು. ಆದರೆ 7ನೇ ಓವರ್​ನಲ್ಲಿ ದಾಳಿಗಿಳಿದ ಕಗಿಸೋ ರಬಾಡ ಟೀಂ ಇಂಡಿಯಾಕ್ಕೆ ಮೊದಲ ಶಾಕ್ ನೀಡಿದರು.

40 ರನ್​ಗಳಿಗೆ ವಿಕೆಟ್ ಒಪ್ಪಿಸಿದ ರೋಹಿತ್

ಕೇವಲ 24 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 40 ರನ್ ಬಾರಿಸಿದ್ದ ನಾಯಕ ರೋಹಿತ್ ರಬಾಡ ಅವರ ಬೌಲಿಂಗ್​ನಲ್ಲಿ ಬವುಮಾಗೆ ಕ್ಯಾಚಿತ್ತು ಔಟಾದರು. ಈ ಮೂಲಕ ರೋಹಿತ್ ಅವರ ಸ್ಫೋಟಕ ಇನ್ನಿಂಗ್ಸ್ ಅಂತ್ಯವಾಯಿತು. ಆ ಬಳಿಕ ಕೊಹ್ಲಿ ಜೊತೆಯಾದ ಗಿಲ್ ಕೂಡ ತಂಡದ ಮೊತ್ತವನ್ನು ಹೆಚ್ಚಿಸುವ ಬರದಲ್ಲಿ ಕೇಶವ್ ಮಹಾರಾಜ್​ಗೆ ಬಲಿಯಾಗಿದ್ದಾರೆ.

ಕೊಹ್ಲಿ- ಶ್ರೇಯಸ್ ಮೇಲೆ ಜವಬ್ದಾರಿ

ಗಿಲ್ ತಮ್ಮ ಇನ್ನಿಂಗ್ಸ್​ನಲ್ಲಿ 24 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 23 ರನ್ ಸಿಡಿಸಿ ಮಹಾರಾಜ ಬೌಲಿಂಗ್​ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಪ್ರಸ್ತುತ ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ 2 ವಿಕೆಟ್ ಕಳೆದುಕೊಂಡು 105 ರನ್ ಕಲೆಹಾಕಿದೆ. ಈಗಾಗಲೇ ಭಾರತದ ಇನ್ನಿಂಗ್ಸ್​ನ 15 ಓವರ್​ಗಳು ಮುಗಿದಿವೆ. ಸದ್ಯ ಕೊಹ್ಲಿ ಹಾಗೂ ಶ್ರೇಯಸ್ ಟೀಂ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸುತ್ತಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Sun, 5 November 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!