AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ರೋಹಿತ್- ಗಿಲ್ ಅಬ್ಬರ; ಮೊದಲ 10 ಓವರ್​ಗಳಲ್ಲಿ 91 ರನ್ ಚಚ್ಚಿದ ಭಾರತ..!

IND vs SA, ICC World Cup 2023: ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಮೊದಲ 10 ಓವರ್​ಗಳಲ್ಲೇ ತನ್ನ ಪವರ್ ತೋರಿ ಬರೋಬ್ಬರಿ 91 ರನ್ ಕಲೆಹಾಕಿದೆ. ಈ ಮೂಲಕ ಇತರ ಎದುರಾಳಿ ತಂಡಗಳೆದುರು ಮಾರಕ ಬೌಲಿಂಗ್ ಮೂಲಕ ಅಬ್ಬರಿಸುತ್ತಿದ್ದ ಆಫ್ರಿಕಾ ಬೌಲರ್​ಗಳಿಗೆ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಆರಂಭದಲ್ಲೇ ಕಡಿವಾಣ ಹಾಕಿದ್ದಾರೆ.

IND vs SA: ರೋಹಿತ್- ಗಿಲ್ ಅಬ್ಬರ; ಮೊದಲ 10 ಓವರ್​ಗಳಲ್ಲಿ 91 ರನ್ ಚಚ್ಚಿದ ಭಾರತ..!
ಶುಭ್​ಮನ್ ಗಿಲ್, ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on:Nov 05, 2023 | 3:14 PM

Share

ಏಕದಿನ ವಿಶ್ವಕಪ್‌ನ (ICC World Cup 2023) 37 ನೇ ಪಂದ್ಯದಲ್ಲಿ ಇಂದು ಅಗ್ರ 2 ತಂಡಗಳಾದ ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ (India vs South Africa) ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ಮೊದಲ 10 ಓವರ್​ಗಳಲ್ಲೇ ತನ್ನ ಪವರ್ ತೋರಿ ಬರೋಬ್ಬರಿ 91 ರನ್ ಕಲೆಹಾಕಿದೆ. ಈ ಮೂಲಕ ಇತರ ಎದುರಾಳಿ ತಂಡಗಳೆದುರು ಮಾರಕ ಬೌಲಿಂಗ್ ಮೂಲಕ ಅಬ್ಬರಿಸುತ್ತಿದ್ದ ಆಫ್ರಿಕಾ ಬೌಲರ್​ಗಳಿಗೆ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಶುಭ್​ಮನ್ ಗಿಲ್ (Shubman Gill) ಆರಂಭದಲ್ಲೇ ಕಡಿವಾಣ ಹಾಕಿದ್ದಾರೆ. ಆದರೆ ಆರಂಭಿಕರಿಬ್ಬರ ವಿಕೆಟ್ ಪತನವಾಗಿರುವುದು ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ.

62 ರನ್​ಗಳ ಜೊತೆಯಾಟ

ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್​ಗೆ ಈ ಇಬ್ಬರು 62 ರನ್​ಗಳ ಜೊತೆಯಾಟವನ್ನು ಹಂಚಿಕೊಂಡರು. ಆರಂಭದಿಂದಲೂ ತಮ್ಮ ಸ್ಫೋಟಕ ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮಾ, ಬೌಂಡರಿ ಮೂಲಕ ತಮ್ಮ ಖಾತೆ ತೆರೆದರು. ಎರಡನೇ ಓವರ್​ನಲ್ಲಿ ದಾಳಿಗಿಳಿದ ಯಾನ್ಸನ್​ಗೂ ಉತ್ತಮ ಆರಂಭ ಸಿಗಲಿಲ್ಲ ಈ ಓವರ್​ನಲ್ಲಿ ಒಟ್ಟು 18 ರನ್ ಬಂದವು.

IND vs SA: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ; ಉಭಯ ತಂಡಗಳು ಹೀಗಿವೆ

ಮೊದಲ ಓವರ್​ನಿಂದಲೇ ಅಬ್ಬರ

ಇಲ್ಲಿಗೆ ನಿಲ್ಲದ ರೋಹಿತ್ ಹಾಗೂ ಗಿಲ್ ಮೂರನೇ ಓವರ್​ನಲ್ಲೂ 8 ರನ್ ಕಲೆಹಾಕಿದರು. ಹೀಗಾಗಿ ಮೊದಲ ಐದು ಓವರ್​ಗಳಲ್ಲಿ ಟೀಂ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ ಬರೋಬ್ಬರಿ 61 ರನ್ ಕಲೆಹಾಕಿತು. ಇದರಲ್ಲಿ ನಾಯಕ ರೋಹಿತ್ ಶರ್ಮಾ ಅವರದ್ದೇ ಸಿಂಹಪಾಲು. ಆದರೆ 7ನೇ ಓವರ್​ನಲ್ಲಿ ದಾಳಿಗಿಳಿದ ಕಗಿಸೋ ರಬಾಡ ಟೀಂ ಇಂಡಿಯಾಕ್ಕೆ ಮೊದಲ ಶಾಕ್ ನೀಡಿದರು.

40 ರನ್​ಗಳಿಗೆ ವಿಕೆಟ್ ಒಪ್ಪಿಸಿದ ರೋಹಿತ್

ಕೇವಲ 24 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 40 ರನ್ ಬಾರಿಸಿದ್ದ ನಾಯಕ ರೋಹಿತ್ ರಬಾಡ ಅವರ ಬೌಲಿಂಗ್​ನಲ್ಲಿ ಬವುಮಾಗೆ ಕ್ಯಾಚಿತ್ತು ಔಟಾದರು. ಈ ಮೂಲಕ ರೋಹಿತ್ ಅವರ ಸ್ಫೋಟಕ ಇನ್ನಿಂಗ್ಸ್ ಅಂತ್ಯವಾಯಿತು. ಆ ಬಳಿಕ ಕೊಹ್ಲಿ ಜೊತೆಯಾದ ಗಿಲ್ ಕೂಡ ತಂಡದ ಮೊತ್ತವನ್ನು ಹೆಚ್ಚಿಸುವ ಬರದಲ್ಲಿ ಕೇಶವ್ ಮಹಾರಾಜ್​ಗೆ ಬಲಿಯಾಗಿದ್ದಾರೆ.

ಕೊಹ್ಲಿ- ಶ್ರೇಯಸ್ ಮೇಲೆ ಜವಬ್ದಾರಿ

ಗಿಲ್ ತಮ್ಮ ಇನ್ನಿಂಗ್ಸ್​ನಲ್ಲಿ 24 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 23 ರನ್ ಸಿಡಿಸಿ ಮಹಾರಾಜ ಬೌಲಿಂಗ್​ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿಕೊಂಡಿದ್ದಾರೆ. ಪ್ರಸ್ತುತ ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ 2 ವಿಕೆಟ್ ಕಳೆದುಕೊಂಡು 105 ರನ್ ಕಲೆಹಾಕಿದೆ. ಈಗಾಗಲೇ ಭಾರತದ ಇನ್ನಿಂಗ್ಸ್​ನ 15 ಓವರ್​ಗಳು ಮುಗಿದಿವೆ. ಸದ್ಯ ಕೊಹ್ಲಿ ಹಾಗೂ ಶ್ರೇಯಸ್ ಟೀಂ ಇಂಡಿಯಾದ ಇನ್ನಿಂಗ್ಸ್ ನಿಭಾಯಿಸುತ್ತಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Sun, 5 November 23

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ