AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಫ್ರಿಕಾ ವಿರುದ್ಧ ಸುಲಭ ಜಯ; ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ ಭಾರತ

IND vs SA: ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್​ಗಳ ಬೃಹತ್ ಗೆಲುವು ದಾಖಲಿಸಿದೆ. ಆಫ್ರಿಕಾ ನೀಡಿದ 117 ರನ್​ಗಳ ಅಲ್ಪ ಗುರಿಯನ್ನು ಟೀಂ ಇಂಡಿಯಾ ಕೇವಲ 2 ವಿಕೆಟ್ ಕಳೆದುಕೊಂಡು 17ನೇ ಓವರ್​ನಲ್ಲಿಯೇ ಸಾಧಿಸಿತು.

IND vs SA: ಆಫ್ರಿಕಾ ವಿರುದ್ಧ ಸುಲಭ ಜಯ; ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದ ಭಾರತ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Dec 17, 2023 | 6:17 PM

Share

ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ (India vs South Africa)  8 ವಿಕೆಟ್​ಗಳ ಬೃಹತ್ ಗೆಲುವು ದಾಖಲಿಸಿದೆ. ಆಫ್ರಿಕಾ ನೀಡಿದ 117 ರನ್​ಗಳ ಅಲ್ಪ ಗುರಿಯನ್ನು ಟೀಂ ಇಂಡಿಯಾ ಕೇವಲ 2 ವಿಕೆಟ್ ಕಳೆದುಕೊಂಡು 17ನೇ ಓವರ್​ನಲ್ಲಿಯೇ ಸಾಧಿಸಿತು. ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಮಿಂಚಿದ ಅರ್ಷದೀಪ್ ಸಿಂಗ್ (Arshdeep Singh) 5 ವಿಕೆಟ್ ಪಡೆದು ಇತಿಹಾಸ ನಿರ್ಮಿಸಿದರೆ, ಅವರೊಂದಿಗೆ ಅವೇಶ್​ ಖಾನ್ (Avesh Khan) ಕೂಡ 4 ವಿಕೆಟ್​ ಉರುಳಿಸಿ ದಾಖಲೆ ಬರೆದರು. ಇನ್ನು ಬ್ಯಾಟಿಂಗ್​ನಲ್ಲಿ ಮಿಂಚಿದ ಆರಂಭಿಕ ಸಾಯಿ ಸುದರ್ಶನ್ (Sai Sudharsan) ಚೊಚ್ಚಲ ಪಂದ್ಯದಲ್ಲೇ ಅಜೇಯ ಅರ್ಧಶತಕ ಶತಕ ಸಿಡಿಸಿದರೆ, ಶ್ರೇಯಸ್ ಅಯ್ಯರ್ (Shreyas Iyer) ಕೂಡ ಅರ್ಧಶತಕದ ಗೆಲುವಿನ ಇನ್ನಿಂಗ್ಸ್ ಆಡಿದರು.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹರಿಣ ಪಡೆ ಆರಂಭದಲ್ಲೇ ಎಡವಿತು. ಅರ್ಷದೀಪ್ ಸಿಂಗ್ ಹಾಗೂ ಆವೇಶ್ ಖಾನ್ ದಾಳಿಗೆ ನಲುಗಿದ ಆಫ್ರಿಕಾ ಬ್ಯಾಟರ್​ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಳ್ಳಲು ಆರಂಭಿಸಿದರು. ಹೀಗಾಗಿ ಆತಿಥೇಯ ತಂಡ 58 ರನ್ ಗಳಿಸುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ತಮ್ಮ ಮೊದಲ ಓವರ್‌ಗಳಲ್ಲಿ 2 ಪ್ರಮುಖ ವಿಕೆಟ್‌ಗಳನ್ನು ಪಡೆದರು.

IND vs SA: ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ ಭಾರತದ ಏಕೈಕ ಬೌಲರ್ ಅರ್ಷದೀಪ್ ಸಿಂಗ್..!

ಸುದರ್ಶನ್ ಚೊಚ್ಚಲ ಅರ್ಧಶತಕ

ಆಫ್ರಿಕಾ ಪರ ಆಲ್​​ರೌಂಡರ್ ಆಂಡಿಲೆ ಫೆಹ್ಲುಕ್ವಾಯೊ ಗರಿಷ್ಠ 33 ರನ್ ಸಿಡಿಸಿದರೆ, ತಂಡದ ಪರ ಆರಂಭಿಕ ಹೋರಾಟ ನೀಡಿದ ಟೋನಿ 22 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 2 ಬೌಂಡರಿಗಳ ನೆರವಿನಿಂದ 28 ರನ್ ಗಳಿಸಿದರು. ಉಳಿದವರಿಂದ ಯಾವುದೇ ಗಮನಾರ್ಹ ಪ್ರದರ್ಶನ ಹೊರಬರಲಿಲ್ಲ. ಹೀಗಾಗಿ ಆಫ್ರಿಕಾ ತಂಡ 116 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಟೀಂ ಇಂಡಿಯಾ 16.4 ಓವರ್‌ಗಳಲ್ಲಿ 117 ರನ್ ಗಳಿಸಿ ಗೆಲುವು ಸಾಧಿಸಿತು. ಭಾರತದ ಪರ ಪದಾರ್ಪಣೆ ಮಾಡಿದ ಸಾಯಿ ಸುದರ್ಶನ್ 43 ಎಸೆತಗಳ ಇನ್ನಿಂಗ್ಸ್‌ನಲ್ಲಿ ಒಂಬತ್ತು ಬೌಂಡರಿ ಸಹಿತ ಅಜೇಯ 55 ರನ್ ಬಾರಿಸಿದರು.

ಅಯ್ಯರ್ ಅರ್ಧಶತಕ

ಸಾಯಿ ಸುದರ್ಶನ್​ಗೆ ಉತ್ತಮ ಸಾಥ್ ನೀಡಿದ ಶ್ರೇಯಸ್ ಅಯ್ಯರ್ 45 ಎಸೆತಗಳಲ್ಲಿ 52 ರನ್ ಗಳಿಸಿದರು. ಅಯ್ಯರ್ ಅವರ ಇನ್ನಿಂಗ್ಸ್​ನಲ್ಲಿ ಆರು ಬೌಂಡರಿ ಮತ್ತು ಒಂದು ಸಿಕ್ಸರ್ ಕೂಡ ಸೇರಿತ್ತು. ಮತ್ತೊಬ್ಬ ಆರಂಭಿಕ ರುತುರಾಜ್ ಗಾಯಕ್ವಾಡ್ ಐದು ರನ್ ಗಳಿಸಿ ಔಟಾದರೆ, ತಿಲಕ್ ವರ್ಮಾ ಒಂದು ರನ್ ಗಳಿಸಿ ಅಜೇಯರಾಗಿ ಉಳಿದರು. ದಕ್ಷಿಣ ಆಫ್ರಿಕಾ ಪರ ವಿಯಾನ್ ಮುಲ್ಡರ್ ಮತ್ತು ಆಂಡಿಲ್ ಫೆಹ್ಲುಕ್ವಾಯೊ ತಲಾ ಒಂದು ವಿಕೆಟ್ ಪಡೆದರು.

ಅರ್ಷದೀಪ್- ಆವೇಶ್ ಬೌಲಿಂಗ್ ಮ್ಯಾಜಿಕ್

ಇನ್ನು ಭಾರತದ ಪರ ವೇಗಿಗಳು ಅದ್ಭುತ ಪ್ರದರ್ಶನ ನೀಡಿದರು. ವೇಗಿ ಮುಖೇಶ್ ಕುಮಾರ್ 7 ಓವರ್‌ಗಳಲ್ಲಿ 46 ರನ್ ನೀಡಿ, ಕೊಂಚ ದುಬಾರಿ ಎನಿಸಿಕೊಂಡರೆ, ಅರ್ಷದೀಪ್ ಸಿಂಗ್ 10 ಓವರ್​ಗಳಲ್ಲಿ 37 ರನ್ ನೀಡಿ 5 ವಿಕೆಟ್ ಪಡೆದರು. ಹಾಗೆಯೇ ಆವೇಶ್ ಖಾನ್ 8 ಓವರ್​ಗಳಲ್ಲಿ 27 ರನ್ ನೀಡಿ 4 ವಿಕೆಟ್ ಪಡೆದರು. ಕುಲ್ದೀಪ್ ಯಾದವ್ 2.3 ಓವರ್‌ಗಳಲ್ಲಿ 3 ರನ್ ನೀಡಿ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Sun, 17 December 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ