AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಕೇಪ್​ ಟೌನ್ ಟೆಸ್ಟ್​ ಗೆದ್ದು ಇತಿಹಾಸ ನಿರ್ಮಿಸಿದ ಭಾರತ; ಸರಣಿ ಡ್ರಾದಲ್ಲಿ ಅಂತ್ಯ

IND vs SA: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಕೇಪ್ ಟೌನ್​ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಹಾಗೂ ಎರಡನೇ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಆಫ್ರಿಕಾ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ.

IND vs SA: ಕೇಪ್​ ಟೌನ್ ಟೆಸ್ಟ್​ ಗೆದ್ದು ಇತಿಹಾಸ ನಿರ್ಮಿಸಿದ ಭಾರತ; ಸರಣಿ ಡ್ರಾದಲ್ಲಿ ಅಂತ್ಯ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Jan 04, 2024 | 5:42 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವೆ ಕೇಪ್ ಟೌನ್​ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಹಾಗೂ ಎರಡನೇ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಆಫ್ರಿಕಾ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಆಫ್ರಿಕಾ ನೀಡಿದ 79 ರನ್​ಗಳ ಗೆಲುವಿನ ಗುರಿಯನ್ನು ಟೀಂ ಇಂಡಿಯಾ 3 ವಿಕೆಟ್​ ಕಳೆದುಕೊಂಡು 11.5 ಓವರ್​ಗಳಲ್ಲಿ ಸಾಧಿಸಿತು. ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (Yashasvi Jaiswal) 28 ರನ್ ಸಿಡಿಸಿದರೆ ನಾಯಕ ರೋಹಿತ್​ ಶರ್ಮಾ (Rohit Sharma) ಅಜೇಯ 17 ರನ್​ಗಳ ಕೊಡುಗೆ ನೀಡಿದರು. ಉಳಿದಂತೆ ಶುಭ್​ಮನ್ ಗಿಲ್ 10 ರನ್ ಹಾಗೂ ವಿರಾಟ್ ಕೊಹ್ಲಿ 12 ರನ್ ಬಾರಿಸಿದರೆ, ಬೌಂಡರಿ ಬಾರಿಸುವ ಮೂಲಕ ಶ್ರೇಯಸ್ ಅಯ್ಯರ್ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಇಡೀ ಪಂದ್ಯದಲ್ಲಿ ಬೌಲರ್​ಗಳ ಪ್ರಾಬಲ್ಯ

ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಎದುರಿಸಬೇಕಾಯಿತು. ಆದರೆ ಈ ಪಂದ್ಯದಲ್ಲಿ ಭಾರತದ ಆಟಗಾರರು ಅದ್ಭುತ ಪುನರಾಗಮನ ಮಾಡಿ ಎರಡನೇ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೇಪ್ ಟೌನ್ ಟೆಸ್ಟ್ ಅತ್ಯಂತ ಕಡಿಮೆ ಸ್ಕೋರಿಂಗ್ ಪಂದ್ಯವಾಗಿದ್ದು, ಇಡೀ ಪಂದ್ಯದಲ್ಲಿ ಬೌಲರ್​ಗಳ ಪ್ರಾಬಲ್ಯ ಕಂಡು ಬಂದಿತು. ಹೀಗಾಗಿ 5 ದಿನಗಳ ಟೆಸ್ಟ್ ಪಂದ್ಯದಲ್ಲಿ ಎರಡೂ ತಂಡಗಳಿಗೂ ಪೂರ್ಣ ಎರಡು ದಿನ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. ಕೇವಲ ಎರಡೇ ದಿನಗಳಲ್ಲಿ ಟೆಸ್ಟ್ ಪಂದ್ಯದ ಫಲಿತಾಂಶ ಹೊರಬಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಹೀರೋಗಳೆಂದರೆ ವೇಗದ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ 8 ಮತ್ತು ಮೊಹಮ್ಮದ್ ಸಿರಾಜ್ 7 ವಿಕೆಟ್ ಪಡೆದರು.

ಪಂದ್ಯದ ಮೊದಲ ದಿನವೇ 23 ವಿಕೆಟ್‌ ಪತನ

ಈ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಕೇಪ್ ಟೌನ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾವನ್ನು 55 ರನ್ ಗಳಿಗೆ ಆಲೌಟ್ ಮಾಡಿತು. ಭಾರತದ ಪರ ಸಿರಾಜ್ 9 ಓವರ್​ಗಳಲ್ಲಿ 15 ರನ್ ನೀಡಿ 6 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ ಮತ್ತು ಮುಖೇಶ್ ಕುಮಾರ್ ತಲಾ 2 ವಿಕೆಟ್ ಪಡೆದರು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ ಕೂಡ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗದೆ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 153 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ದಿನದಾಟದ ಅಂತ್ಯಕ್ಕೆ ಆಫ್ರಿಕಾ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್‌ ಕಳೆದುಕೊಂಡು 62 ರನ್ ಕಲೆಹಾಕಿತ್ತು.

ಎರಡನೇ ದಿನವೇ ಹೊರಬಿತ್ತು ಫಲಿತಾಂಶ

ಎರಡನೇ ದಿನದಾಟ ಆರಂಭವಾದಾಗ ದಕ್ಷಿಣ ಆಫ್ರಿಕಾ ತಂಡ 36 ರನ್‌ಗಳಿಂದ ಹಿನ್ನಡೆಯಲ್ಲಿತ್ತು. ಇದಾದ ಬಳಿಕ ತಂಡದ ಇನ್ನಿಂಗ್ಸ್ ಕೈಗೆತ್ತಿಕೊಂಡ ಏಡನ್ ಮಾರ್ಕ್ರಾಮ್ ಭರ್ಜರಿ ಶತಕ ಬಾರಿಸಿದರು. ಆದರೆ ಇನ್ನೊಂದು ತುದಿಯಿಂದ ವಿಕೆಟ್ ಬೀಳುವ ಪ್ರಕ್ರಿಯೆ ಮುಂದುವರಿಯಿತು. ಎರಡನೇ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ 176 ರನ್ ಗಳಿಸಿ ಆಲೌಟ್ ಆಯಿತು. ಅಂತಿಮವಾಗಿ ಟೀಂ ಇಂಡಿಯಾ ಈ ಪಂದ್ಯವನ್ನು ಗೆಲ್ಲಲು 79 ರನ್​ಗಳ ಗೆಲುವಿನ ಗುರಿ ಪಡೆಯಿತು. ಈ ಅಲ್ಪ ಮೊತ್ತದ ಗುರಿಯನ್ನು ಭಾರತ ತಂಡ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಸಾಧಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Thu, 4 January 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!