AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: 5 ಬೌಲರ್ಸ್​, ರಹಾನೆಗೆ ಅವಕಾಶ; ಬಾಕ್ಸಿಂಗ್ ಡೇ ಟೆಸ್ಟ್​ಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

IND vs SA: 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಭಾರತ ತಂಡವು ರಹಾನೆ ಮೇಲೆ ನಂಬಿಕೆ ಇರಿಸಿದೆ ಮತ್ತು ಅವರ ಅನುಭವಕ್ಕೆ ಬೆಲೆ ನೀಡಿದೆ ಎಂಬುದು ಒಳ್ಳೆಯ ವಿಚಾರ. 5 ಬೌಲರ್‌ಗಳೊಂದಿಗೆ ಭಾರತ ಕಣಕ್ಕಿಳಿಯುತ್ತಿದೆ.

IND vs SA: 5 ಬೌಲರ್ಸ್​, ರಹಾನೆಗೆ ಅವಕಾಶ; ಬಾಕ್ಸಿಂಗ್ ಡೇ ಟೆಸ್ಟ್​ಗೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಟೀಂ ಇಂಡಿಯಾ
TV9 Web
| Edited By: |

Updated on: Dec 26, 2021 | 1:28 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3-ಟೆಸ್ಟ್ ಸರಣಿಯ ಮೊದಲ ಪಂದ್ಯ ಅಥವಾ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಸೆಂಚುರಿಯನ್ ಮೈದಾನದಲ್ಲಿ ಈಗ ಸ್ವಲ್ಪ ತಡವಾಗಿ ನಡೆಯಲಿದೆ. ಈ ಪಂದ್ಯದ ಟಾಸ್ ಮುಗಿದಿದ್ದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಟಾಸ್ ಗೆದ್ದ ನಂತರ, ಸ್ಕೋರ್ ಬೋರ್ಡ್‌ನಲ್ಲಿ ರನ್ ಗಳಿಸುವುದು ಲಾಭದಾಯಕ ವ್ಯವಹಾರವಾಗಿದೆ ಎಂದು ಕೊಹ್ಲಿ ಹೇಳಿದರು. ಟಾಸ್ ನಂತರ, ಎರಡೂ ತಂಡಗಳು ತಮ್ಮ ಪ್ಲೇಯಿಂಗ್ XI ಅನ್ನು ಘೋಷಿಸಿಕೊಂಡಿವೆ.

ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಭಾರತ ತಂಡದ ಇತಿಹಾಸ ಉತ್ತಮವಾಗಿರಲಿಲ್ಲ. ಇಲ್ಲಿ ಆಡಿದ ಕೊನೆಯ ಎರಡು ಟೆಸ್ಟ್‌ಗಳಲ್ಲಿ ಭಾರತ ಸೋಲನ್ನು ಎದುರಿಸಬೇಕಾಯಿತು. ಆದರೆ, ಈ ಬಾರಿಯ ಉದ್ದೇಶವೇ ಬೇರೆ. ವಿರಾಟ್ ಕೊಹ್ಲಿ ಆಯ್ಕೆ ಮಾಡಿರುವ ಪ್ಲೇಯಿಂಗ್ ಇಲೆವೆನ್ ಇತಿಹಾಸ ಬದಲಿಸುವ ಉದ್ದೇಶದಿಂದ ಮೈದಾನಕ್ಕೆ ಬರಲಿದೆ. 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಭಾರತ ತಂಡವು ರಹಾನೆ ಮೇಲೆ ನಂಬಿಕೆ ಇರಿಸಿದೆ ಮತ್ತು ಅವರ ಅನುಭವಕ್ಕೆ ಬೆಲೆ ನೀಡಿದೆ ಎಂಬುದು ಒಳ್ಳೆಯ ವಿಚಾರ. 5 ಬೌಲರ್‌ಗಳೊಂದಿಗೆ ಭಾರತ ಕಣಕ್ಕಿಳಿಯುತ್ತಿದೆ.

ಭಾರತದ ಬೌಲಿಂಗ್‌ ವಿಭಾಗ ಹೀಗಿದೆ ಅಶ್ವಿನ್, ಬುಮ್ರಾ, ಶಮಿ, ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಸೇರಿದಂತೆ 5 ಬೌಲರ್‌ಗಳನ್ನು ಭಾರತವು ಬೌಲಿಂಗ್ ವಿಭಾಗದಲ್ಲಿ ಸೇರಿಸಿದೆ. ಇದರರ್ಥ ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ಅವಕಾಶಕ್ಕಾಗಿ ಕಾಯಬೇಕಾಗಿದೆ.

ಸೆಂಚುರಿಯನ್ ಟೆಸ್ಟ್‌ಗಾಗಿ ಎರಡೂ ತಂಡಗಳ ಆಡುವ XI ಭಾರತದ ಪ್ಲೇಯಿಂಗ್ XI ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್, ಆರ್. ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್

ದಕ್ಷಿಣ ಆಫ್ರಿಕಾದ ಪ್ಲೇಯಿಂಗ್ XI ಡೀನ್ ಎಲ್ಗರ್ (ನಾಯಕ), ಏಡನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರೋಸಿ ವ್ಯಾನ್ ಡೆರ್ ದುಸಾಯ್, ಟೆಂಬಾ ಬೌಮಾ, ಕ್ವಿಂಟನ್ ಡಿ ಕಾಕ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ, ಮಾರ್ಕೊ ಯಾನ್ಸನ್

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ