AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಸೆಂಚುರಿಯನ್‌ನಲ್ಲಿ ಹವಾಮಾನ ವೈಪರೀತ್ಯ; ಎರಡನೇ ದಿನದಾಟದ ರೋಚಕತೆಗೆ ಭಂಗ ತಂದ ಮಳೆರಾಯ!

IND vs SA: ಸೆಂಚುರಿಯನ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸರಣಿಯ ಮೊದಲ ಟೆಸ್ಟ್‌ನ ಎರಡನೇ ದಿನದ ಆಟಕ್ಕೆ ಮಳೆ ಅಡ್ಡಿ ಬರುತ್ತಿದೆ.

IND vs SA: ಸೆಂಚುರಿಯನ್‌ನಲ್ಲಿ ಹವಾಮಾನ ವೈಪರೀತ್ಯ; ಎರಡನೇ ದಿನದಾಟದ ರೋಚಕತೆಗೆ ಭಂಗ ತಂದ ಮಳೆರಾಯ!
ಸೆಂಚುರಿಯನ್ ಮೈದಾನ
TV9 Web
| Updated By: ಪೃಥ್ವಿಶಂಕರ|

Updated on:Dec 27, 2021 | 1:12 PM

Share

ಸೆಂಚುರಿಯನ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸರಣಿಯ ಮೊದಲ ಟೆಸ್ಟ್‌ನ ಎರಡನೇ ದಿನದ ಆಟಕ್ಕೆ ಮಳೆ ಅಡ್ಡಿ ಬರುತ್ತಿದೆ.ಮೊದಲ ಟೆಸ್ಟ್​ನ ಮೊದಲ ದಿನ ಭಾರತದ ಪ್ರದರ್ಶನ ಉತ್ತಮವಾಗಿತ್ತು. ಹೀಗಾಗಿ ಎರಡನೇ ದಿನದಲ್ಲೂ ಆ ಆಟವನ್ನು ಮುಂದುವರೆಸಲು ಟೀಂ ಇಂಡಿಯಾ ಎದುರು ನೋಡುತ್ತಿದೆ. ಆದರೆ ಟೀಂ ಇಂಡಿಯಾದ ಈ ಗುರಿಗೆ ಮಳೆರಾಯ ಅಡ್ಡಿ ಪಡಿಸುತ್ತಿದ್ದಾನೆ. ಸೆಂಚುರಿಯನ್ ಟೆಸ್ಟ್‌ನಲ್ಲಿ ಭಾರತ ತನ್ನ ಮೊದಲ ದಿನದ ಅಂತ್ಯಕ್ಕೆ 3 ವಿಕೆಟ್‌ಗೆ 272 ರನ್ ಗಳಿಸಿದೆ. ಕೆಎಲ್ ರಾಹುಲ್ 122 ರನ್ ಗಳಿಸಿ ಅಜೇಯರಾಗುಳಿದಿದ್ದು, ರಹಾನೆ 40 ರನ್ ಗಳಿಸಿ ಆಡುತ್ತಿದ್ದರು.

ಆದರೆ, ಮೊದಲ ದಿನ ಸೆಂಚುರಿಯನ್‌ನಲ್ಲಿ ರಾಹುಲ್ ಬ್ಯಾಟ್‌ನಿಂದ ರನ್‌ಗಳ ಮಳೆ ಕಂಡಿದ್ದೇವು. ಆದರೆ ಈಗ ಎರಡನೇ ದಿನದ ವಾತಾವರಣ ಕೆಟ್ಟದಾಗಿದೆ. ಮೋಡ ಕವಿದ ವಾತಾವರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಸೆಂಚುರಿಯನ್‌ನಿಂದ ಬಿಸಿಸಿಐ ಟ್ವೀಟ್ ಮಾಡಿರುವ ಚಿತ್ರಗಳನ್ನು ನೋಡಿದರೆ ಪಿಚ್​ ಮೇಲೆ ಹೊದಿಕೆ ಹಾಸಿರುವುದು ಕಂಡು ಬರುತ್ತಿದೆ. ಅಂದರೆ ಎರಡನೇ ದಿನದಾಟದ ರೋಚಕತೆಗೆ ಭಂಗ ಬರುವುದು ಖಚಿತ.

ಮಳೆ ಆಗುವ ಮುನ್ಸೂಚನೆ ಇತ್ತು ಸೆಂಚುರಿಯನ್​ನಲ್ಲಿ ಕೆಟ್ಟ ಹವಾಮಾನ ಹೊಸದೇನಲ್ಲ. ಟೆಸ್ಟ್ ಪಂದ್ಯದ ವೇಳೆ ಈಗಾಗಲೇ ಮಳೆಯ ಅಂದಾಜಿತ್ತು. ಮೊದಲ ದಿನವೇ ಮಳೆಯಾಗುತ್ತದೆ ಎಂಬ ಸುದ್ದಿ ಇತ್ತು. ಆದರೆ ಟೆಸ್ಟ್ ಪಂದ್ಯದ ಮೊದಲ ದಿನ ಚೆನ್ನಾಗಿಯೇ ಸಾಗಿತು. ಸಂಪೂರ್ಣ 90 ಓವರ್‌ಗಳನ್ನು ಆಡಲಾಯಿತು. ಆದರೆ ಟೆಸ್ಟ್ ಪಂದ್ಯದ ಎರಡನೇ ದಿನ ಮಳೆಯ ಭವಿಷ್ಯ ಸರಿಯಾಗಿದೆ.

ಸದ್ಯ ಸೆಂಚುರಿಯನ್‌ನಲ್ಲಿ ಮೋಡ ಕವಿದ ವಾತಾವರಣವಿದೆ. ಮೋಡ ತಿಳಿಗೊಂಡ ನಂತರ ಆಟವನ್ನು ಪ್ರಾರಂಭಿಸಬಹುದು. ಅಂದಹಾಗೆ, ಬಿಸಿಸಿಐ ಹಂಚಿಕೊಂಡಿರುವ ಚಿತ್ರವು ಮುಂಜಾನೆಯದ್ದಾಗಿದೆ, ಆದ್ದರಿಂದ ಪಂದ್ಯದ ವೇಳೆಗೆ ಹವಾಮಾನವು ಸ್ಪಷ್ಟವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಸೆಂಚುರಿಯನ್ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಶುಭಾರಂಭ ಮಾಡಿದೆ. ಈಗ ಹವಾಮಾನವು ಅಡ್ಡಿಯಾಗದಿದ್ದರೆ, ಸೆಂಚುರಿಯನ್‌ನಲ್ಲಿ ತನ್ನ ಮೊದಲ ಗೆಲುವಿನ ಸ್ಕ್ರಿಪ್ಟ್ ಅನ್ನು ಭಾರತ ಬರೆಯುವುದನ್ನು ಕಾಣಬಹುದು. ಪಂದ್ಯದ ಮೂರು ಮತ್ತು ನಾಲ್ಕನೇ ದಿನಗಳಲ್ಲಿ ಯಾವುದೇ ಮಳೆಯಾಗದ ನಿರೀಕ್ಷೆಯಿದೆ. ಆದರೆ 5ನೇ ದಿನವೂ ಸೆಂಚುರಿಯನ್​ನಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

Published On - 1:04 pm, Mon, 27 December 21

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ