AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಸೆಂಚುರಿಯನ್‌ನಲ್ಲಿ ಹವಾಮಾನ ವೈಪರೀತ್ಯ; ಎರಡನೇ ದಿನದಾಟದ ರೋಚಕತೆಗೆ ಭಂಗ ತಂದ ಮಳೆರಾಯ!

IND vs SA: ಸೆಂಚುರಿಯನ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸರಣಿಯ ಮೊದಲ ಟೆಸ್ಟ್‌ನ ಎರಡನೇ ದಿನದ ಆಟಕ್ಕೆ ಮಳೆ ಅಡ್ಡಿ ಬರುತ್ತಿದೆ.

IND vs SA: ಸೆಂಚುರಿಯನ್‌ನಲ್ಲಿ ಹವಾಮಾನ ವೈಪರೀತ್ಯ; ಎರಡನೇ ದಿನದಾಟದ ರೋಚಕತೆಗೆ ಭಂಗ ತಂದ ಮಳೆರಾಯ!
ಸೆಂಚುರಿಯನ್ ಮೈದಾನ
TV9 Web
| Edited By: |

Updated on:Dec 27, 2021 | 1:12 PM

Share

ಸೆಂಚುರಿಯನ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸರಣಿಯ ಮೊದಲ ಟೆಸ್ಟ್‌ನ ಎರಡನೇ ದಿನದ ಆಟಕ್ಕೆ ಮಳೆ ಅಡ್ಡಿ ಬರುತ್ತಿದೆ.ಮೊದಲ ಟೆಸ್ಟ್​ನ ಮೊದಲ ದಿನ ಭಾರತದ ಪ್ರದರ್ಶನ ಉತ್ತಮವಾಗಿತ್ತು. ಹೀಗಾಗಿ ಎರಡನೇ ದಿನದಲ್ಲೂ ಆ ಆಟವನ್ನು ಮುಂದುವರೆಸಲು ಟೀಂ ಇಂಡಿಯಾ ಎದುರು ನೋಡುತ್ತಿದೆ. ಆದರೆ ಟೀಂ ಇಂಡಿಯಾದ ಈ ಗುರಿಗೆ ಮಳೆರಾಯ ಅಡ್ಡಿ ಪಡಿಸುತ್ತಿದ್ದಾನೆ. ಸೆಂಚುರಿಯನ್ ಟೆಸ್ಟ್‌ನಲ್ಲಿ ಭಾರತ ತನ್ನ ಮೊದಲ ದಿನದ ಅಂತ್ಯಕ್ಕೆ 3 ವಿಕೆಟ್‌ಗೆ 272 ರನ್ ಗಳಿಸಿದೆ. ಕೆಎಲ್ ರಾಹುಲ್ 122 ರನ್ ಗಳಿಸಿ ಅಜೇಯರಾಗುಳಿದಿದ್ದು, ರಹಾನೆ 40 ರನ್ ಗಳಿಸಿ ಆಡುತ್ತಿದ್ದರು.

ಆದರೆ, ಮೊದಲ ದಿನ ಸೆಂಚುರಿಯನ್‌ನಲ್ಲಿ ರಾಹುಲ್ ಬ್ಯಾಟ್‌ನಿಂದ ರನ್‌ಗಳ ಮಳೆ ಕಂಡಿದ್ದೇವು. ಆದರೆ ಈಗ ಎರಡನೇ ದಿನದ ವಾತಾವರಣ ಕೆಟ್ಟದಾಗಿದೆ. ಮೋಡ ಕವಿದ ವಾತಾವರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಸೆಂಚುರಿಯನ್‌ನಿಂದ ಬಿಸಿಸಿಐ ಟ್ವೀಟ್ ಮಾಡಿರುವ ಚಿತ್ರಗಳನ್ನು ನೋಡಿದರೆ ಪಿಚ್​ ಮೇಲೆ ಹೊದಿಕೆ ಹಾಸಿರುವುದು ಕಂಡು ಬರುತ್ತಿದೆ. ಅಂದರೆ ಎರಡನೇ ದಿನದಾಟದ ರೋಚಕತೆಗೆ ಭಂಗ ಬರುವುದು ಖಚಿತ.

ಮಳೆ ಆಗುವ ಮುನ್ಸೂಚನೆ ಇತ್ತು ಸೆಂಚುರಿಯನ್​ನಲ್ಲಿ ಕೆಟ್ಟ ಹವಾಮಾನ ಹೊಸದೇನಲ್ಲ. ಟೆಸ್ಟ್ ಪಂದ್ಯದ ವೇಳೆ ಈಗಾಗಲೇ ಮಳೆಯ ಅಂದಾಜಿತ್ತು. ಮೊದಲ ದಿನವೇ ಮಳೆಯಾಗುತ್ತದೆ ಎಂಬ ಸುದ್ದಿ ಇತ್ತು. ಆದರೆ ಟೆಸ್ಟ್ ಪಂದ್ಯದ ಮೊದಲ ದಿನ ಚೆನ್ನಾಗಿಯೇ ಸಾಗಿತು. ಸಂಪೂರ್ಣ 90 ಓವರ್‌ಗಳನ್ನು ಆಡಲಾಯಿತು. ಆದರೆ ಟೆಸ್ಟ್ ಪಂದ್ಯದ ಎರಡನೇ ದಿನ ಮಳೆಯ ಭವಿಷ್ಯ ಸರಿಯಾಗಿದೆ.

ಸದ್ಯ ಸೆಂಚುರಿಯನ್‌ನಲ್ಲಿ ಮೋಡ ಕವಿದ ವಾತಾವರಣವಿದೆ. ಮೋಡ ತಿಳಿಗೊಂಡ ನಂತರ ಆಟವನ್ನು ಪ್ರಾರಂಭಿಸಬಹುದು. ಅಂದಹಾಗೆ, ಬಿಸಿಸಿಐ ಹಂಚಿಕೊಂಡಿರುವ ಚಿತ್ರವು ಮುಂಜಾನೆಯದ್ದಾಗಿದೆ, ಆದ್ದರಿಂದ ಪಂದ್ಯದ ವೇಳೆಗೆ ಹವಾಮಾನವು ಸ್ಪಷ್ಟವಾಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಸೆಂಚುರಿಯನ್ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಶುಭಾರಂಭ ಮಾಡಿದೆ. ಈಗ ಹವಾಮಾನವು ಅಡ್ಡಿಯಾಗದಿದ್ದರೆ, ಸೆಂಚುರಿಯನ್‌ನಲ್ಲಿ ತನ್ನ ಮೊದಲ ಗೆಲುವಿನ ಸ್ಕ್ರಿಪ್ಟ್ ಅನ್ನು ಭಾರತ ಬರೆಯುವುದನ್ನು ಕಾಣಬಹುದು. ಪಂದ್ಯದ ಮೂರು ಮತ್ತು ನಾಲ್ಕನೇ ದಿನಗಳಲ್ಲಿ ಯಾವುದೇ ಮಳೆಯಾಗದ ನಿರೀಕ್ಷೆಯಿದೆ. ಆದರೆ 5ನೇ ದಿನವೂ ಸೆಂಚುರಿಯನ್​ನಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

Published On - 1:04 pm, Mon, 27 December 21

ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ