AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾದ ಆರಂಭಿಕರು ಯಾರು?

India vs South Africa: ಟೀಮ್ ಇಂಡಿಯಾದಲ್ಲಿ ಮೂವರು ಆರಂಭಿಕ ಆಟಗಾರರಿದ್ದಾರೆ. ಈ ಮೂವರು ಕೂಡ ಈಗಾಗಲೇ ಟೆಸ್ಟ್ ಕ್ರಿಕೆಟ್​ನಲ್ಲಿ ಓಪನರ್​ಗಳಾಗಿ ಇನಿಂಗ್ಸ್ ಆರಂಭಿಸಿದ್ದಾರೆ. ಇವರಲ್ಲಿ ಇಬ್ಬರನ್ನು ಆಯ್ಕೆ ಮಾಡಿಬೇಕಾದ ಸವಾಲು ಇದೀಗ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಮುಂದಿದೆ.

IND vs SA: ಟೀಮ್ ಇಂಡಿಯಾದ ಆರಂಭಿಕರು ಯಾರು?
Team India
TV9 Web
| Edited By: |

Updated on: Dec 26, 2023 | 10:38 AM

Share

ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಟೆಸ್ಟ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ಸೆಂಚುರಿಯನ್​ನಲ್ಲಿನ ಸೂಪರ್​​ಸ್ಪೋರ್ಟ್​ ಪಾರ್ಕ್​ ಮೈದಾನದಲ್ಲಿ ಇಂದಿನಿಂದ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆ.

ಏಕೆಂದರೆ ಟೀಮ್ ಇಂಡಿಯಾದಲ್ಲಿ ಮೂವರು ಆರಂಭಿಕ ಆಟಗಾರರಿದ್ದಾರೆ. ಈ ಮೂವರು ಕೂಡ ಈಗಾಗಲೇ ಟೆಸ್ಟ್ ಕ್ರಿಕೆಟ್​ನಲ್ಲಿ ಓಪನರ್​ಗಳಾಗಿ ಇನಿಂಗ್ಸ್ ಆರಂಭಿಸಿದ್ದಾರೆ. ಇವರಲ್ಲಿ ಇಬ್ಬರನ್ನು ಆಯ್ಕೆ ಮಾಡಿಬೇಕಾದ ಸವಾಲು ಇದೀಗ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಮುಂದಿದೆ.

ಇಲ್ಲಿ ಒಂದೆಡೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿಯುವುದು ಖಚಿತ. ಆದರೆ ಮತ್ತೊಂದೆಡೆ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಹಾಗೂ ಬಲಗೈ ಬ್ಯಾಟರ್ ಶುಭ್​ಮನ್ ಗಿಲ್ ನಡುವೆ ನೇರ ಪೈಪೋಟಿ ಇದೆ. ಇಲ್ಲಿ ಯಶಸ್ವಿ ಜೈಸ್ವಾಲ್ ಎಡಗೈ ಬ್ಯಾಟರ್ ಆಗಿರುವುದು ಪ್ಲಸ್ ಪಾಯಿಂಟ್.

ಇದೇ ಕಾರಣದಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲಾಗಿತ್ತು. ಇದೀಗ ಸೌತ್ ಆಫ್ರಿಕಾ ವಿರುದ್ಧ ರೋಹಿತ್ ಶರ್ಮಾ ಜೊತೆ ಜೈಸ್ವಾಲ್ ಓಪನರ್​ ಆಗಿ ಕಣಕ್ಕಿಳಿದರೆ ಮೂರನೇ ಕ್ರಮಾಂಕದಲ್ಲಿ ಬದಲಾವಣೆ ಕಂಡು ಬರಲಿದೆ.

ಏಕೆಂದರೆ ಈ ಹಿಂದೆ ವಿಂಡೀಸ್ ವಿರುದ್ಧದ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ ಆರಂಭಿಕನಾಗಿ ಕಣಕ್ಕಿಳಿದಿದ್ದ ಕಾರಣ ಶುಭ್​ಮನ್ ಗಿಲ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಲಾಗಿತ್ತು. ಅಲ್ಲದೆ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು.

ಇದೀಗ ಸೌತ್ ಆಫ್ರಿಕಾ ವಿರುದ್ಧ ಕೂಡ ಇದೇ ಕ್ರಮಾಂಕಗಳೊಂದಿಗೆ ಟಾಪ್-4 ಬ್ಯಾಟರ್​ಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅದರಂತೆ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: IPL 2024: ಹಾರ್ದಿಕ್ ಪಾಂಡ್ಯಗಾಗಿ 100 ಕೋಟಿ ರೂ. ನೀಡಿದ ಮುಂಬೈ ಇಂಡಿಯನ್ಸ್..!

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್,  ಕೆಎಸ್ ಭರತ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್​ಪ್ರೀತ್  ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ