IND vs SA: ಕೊಹ್ಲಿಯ ಕೆಟ್ಟ ದಾಖಲೆಯಿಂದ ಕೆಎಲ್​ ರಾಹುಲ್ ಪಾರಾಗಲು ಟೀಮ್ ಇಂಡಿಯಾ ಗೆಲ್ಲಲೇಬೇಕು..!

KL Rahul: ಕೆಎಲ್ ರಾಹುಲ್ ಇದುವರೆಗೆ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ಮೂರೂ ಮ್ಯಾಚ್​ನಲ್ಲೂ ಭಾರತ ತಂಡ ಸೋತಿದೆ.

IND vs SA: ಕೊಹ್ಲಿಯ ಕೆಟ್ಟ ದಾಖಲೆಯಿಂದ ಕೆಎಲ್​ ರಾಹುಲ್ ಪಾರಾಗಲು ಟೀಮ್ ಇಂಡಿಯಾ ಗೆಲ್ಲಲೇಬೇಕು..!
KL Rahul-Virat kohli
Follow us
| Updated By: ಝಾಹಿರ್ ಯೂಸುಫ್

Updated on:Jun 07, 2022 | 7:55 PM

India vs South Africa T20: ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಸರಣಿ ಗುರುವಾರದಿಂದ ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೊದಲ ಮ್ಯಾಚ್ ಟೀಮ್ ಇಂಡಿಯಾ ಪಾಲಿಗೆ ಬಹಳ ಮಹತ್ವದ್ದು. ಏಕೆಂದರೆ ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸತತವಾಗಿ 13 ಟಿ20 ಪಂದ್ಯ ಗೆದ್ದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಲಿದೆ. ಆದರೆ ಪ್ರಸ್ತುತ ಸರಣಿಯಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (Rohit sharma), ವಿರಾಟ್ ಕೊಹ್ಲಿ (Virat Kohli) ಸೇರಿದಂತೆ ಪ್ರಮುಖ ಆಟಗಾರರು ಆಡುತ್ತಿಲ್ಲ ಎಂಬುದು ವಿಶೇಷ. ಹೀಗಾಗಿ ತಂಡದ ಸಾರಥ್ಯವನ್ನು ಕೆಎಲ್ ರಾಹುಲ್ (KL Rahul) ಅವರಿಗೆ ನೀಡಲಾಗಿದೆ. ಇತ್ತ ಕೆಎಲ್ ರಾಹುಲ್ ಟೀಮ್ ಇಂಡಿಯಾ ನಾಯಕನಾಗಿ ಗೆಲುವಿನ ರುಚಿ ನೋಡಿಲ್ಲ ಎಂಬುದು ವಿಶೇಷ.

ಅಂದರೆ ಕೆಎಲ್ ರಾಹುಲ್ ಇದುವರೆಗೆ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ಮೂರೂ ಮ್ಯಾಚ್​ನಲ್ಲೂ ಭಾರತ ತಂಡ ಸೋತಿದೆ. ಈ ಪಂದ್ಯಗಳನ್ನು ಸೋತಿದ್ದು ಸೌತ್ ಆಫ್ರಿಕಾ ವಿರುದ್ದ ಎಂಬುದು ವಿಶೇಷ. ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಟೀಮ್ ಇಂಡಿಯಾವನ್ನು 1 ಟೆಸ್ಟ್ ಹಾಗೂ 2 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ರಾಹುಲ್ ಸೋಲಿನೊಂದಿಗೆ ನಾಯಕ ಅಭಿಯಾನ ಆರಂಭಿಸಿದ್ದರು.

ಇದೀಗ ಟಿ20 ಕ್ರಿಕೆಟ್​ನಲ್ಲಿ ನಾಯಕನಾಗಿ ಪದಾರ್ಪಣೆ ಮಾಡಲು ಸಜ್ಜಾಗಿ ನಿಂತಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಪಾಲಿನ ಮಹತ್ವದ ಪಂದ್ಯದ ಮೂಲಕ ಎಂಬುದು ವಿಶೇಷ. ಮತ್ತೊಂದೆಡೆ ಕೆಎಲ್ ರಾಹುಲ್​ಗೂ ಮೊದಲ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಏಕೆಂದರೆ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗಿ ಚೊಚ್ಚಲ ಪಂದ್ಯದಲ್ಲಿ ಸೋಲು ಕಂಡಿರುವ ರಾಹುಲ್ ಟಿ20 ಕ್ರಿಕೆಟ್​ ಅನ್ನು ಗೆಲ್ಲುವ ಮೂಲಕ ಜಯದ ಖಾತೆ ತೆರೆಯುವ ವಿಶ್ವಾಸದಲ್ಲಿದ್ದಾರೆ.

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಒಂದು ವೇಳೆ ಸೋತರೆ ಕೆಟ್ಟ ದಾಖಲೆಯೊಂದು ಕೆಎಲ್ ರಾಹುಲ್ ಪಾಲಾಗಲಿದೆ. ಏಕೆಂದರೆ ಟೀಮ್ ಇಂಡಿಯಾ ಪರ ನಾಯಕನಾಗಿ ಆಡಿದ ಮೊದಲ ಪಂದ್ಯಗಳಲ್ಲಿ ಸೋತ ಕೆಟ್ಟ ದಾಖಲೆ ಒಂದು ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕೊಹ್ಲಿ ಭಾರತ ತಂಡವನ್ನು ಮುನ್ನಡೆಸಿದ ಮೊದಲ ಟೆಸ್ಟ್​, ಏಕದಿನ ಮತ್ತು ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿತ್ತು. ಈ ಮೂಲಕ ಮೂರು ಸ್ವರೂಪಗಳಲ್ಲಿ ಸೋಲಿನೊಂದಿಗೆ ಕಪ್ತಾನಗಿರಿ ಆರಂಭಿಸಿದ ಕೆಟ್ಟ ದಾಖಲೆಯೊಂದನ್ನು ಕೊಹ್ಲಿ ಬರೆದಿದ್ದರು. ಇದೀಗ ದೆಹಲಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತರೆ ಆ ಕಳಂಕ ಕೆಎಲ್ ರಾಹುಲ್​ಗೂ ಸೇರ್ಪಡೆಯಾಗಲಿದೆ.

ಅಲ್ಲದೆ ವಿರಾಟ್ ಕೊಹ್ಲಿ ಬಳಿಕ ಅಂತಹ ಕೆಟ್ಟ ದಾಖಲೆ ಮಾಡಿದ ಭಾರತದ ಎರಡನೇ ನಾಯಕರಾಗಲಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ದದ ಮೊದಲ ಪಂದ್ಯದಲ್ಲೇ ಗೆಲ್ಲುವ ಮೂಲಕ ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಹೊಸ ವಿಶ್ವ ದಾಖಲೆ ಬರೆಯುವ ತವಕದಲ್ಲಿದ್ದಾರೆ. ಈಗಾಗಲೇ ಟಿ20 ಕ್ರಿಕೆಟ್​ನಲ್ಲಿ ಅಫ್ಘಾನಿಸ್ತಾನ್ ಹಾಗೂ ರೊಮೆನಿಯಾ ತಂಡಗಳು ಸತತ 12 ಗೆಲುವು ದಾಖಲಿಸಿ ವಿಶ್ವ ದಾಖಲೆ ಬರೆದಿದೆ. ಈ ದಾಖಲೆಯನ್ನು ಸರಿಗಟ್ಟಿರುವ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ದದ ಮೊದಲ ಪಂದ್ಯ ಗೆದ್ದರೆ ಹೊಸ ವಿಶ್ವ ದಾಖಲೆ ನಿರ್ಮಾಣವಾಗಲಿದೆ. ಜೊತೆಗೆ ನಾಯಕನಾಗಿ ಕೆಎಲ್ ರಾಹುಲ್ ಖಾತೆ ಮೊದಲ ಗೆಲುವು ಕೂಡ ಸೇರ್ಪಡೆಯಾಗಲಿದೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ದದ ಮೊದಲ ಪಂದ್ಯವು ಟೀಮ್ ಇಂಡಿಯಾ ಹಾಗೂ ಕೆಎಲ್ ರಾಹುಲ್ ಪಾಲಿಗೆ ಬಹಳ ಮಹತ್ವದ ಪಂದ್ಯ.

ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡ ಹೀಗಿದೆ: ಕೆಎಲ್ ರಾಹುಲ್ (ನಾಯಕ), ರಿಷಬ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಕುಲದೀಪ್ ಯಾದವ್, ಯುಜುವೇಂದ್ರ ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:55 pm, Tue, 7 June 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ