AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ನೀವು ಹೀಗೆ ಮಾಡಿದ್ರೆ ನನಗೆ ಹೃದಯಾಘಾತ ಆಗುತ್ತೆ: ಟೀಮ್ ಇಂಡಿಯಾ ಬೌಲರುಗಳಿಗೆ ಎಚ್ಚರಿಕೆ ನೀಡಿದ ಅಂಪೈರ್

India vs South Africa: ದಕ್ಷಿಣ ಆಫ್ರಿಕಾದ ಎರಡನೇ ಇನ್ನಿಂಗ್ಸ್‌ನ 10 ನೇ ಓವರ್‌ನಲ್ಲಿ ಶಾರ್ದೂಲ್ ಠಾಕೂರ್ ಒಂದೇ ಓವರ್‌ನಲ್ಲಿ ಎರಡು ಬಾರಿ ಸತತವಾಗಿ ಮನವಿ ಮಾಡಿದರು.

IND vs SA: ನೀವು ಹೀಗೆ ಮಾಡಿದ್ರೆ ನನಗೆ ಹೃದಯಾಘಾತ ಆಗುತ್ತೆ: ಟೀಮ್ ಇಂಡಿಯಾ ಬೌಲರುಗಳಿಗೆ ಎಚ್ಚರಿಕೆ ನೀಡಿದ ಅಂಪೈರ್
IND vs SA
TV9 Web
| Updated By: ಝಾಹಿರ್ ಯೂಸುಫ್|

Updated on: Jan 06, 2022 | 5:23 PM

Share

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್​​ ಸರಣಿಯ ಎರಡನೇ ಪಂದ್ಯದ ಮೂರನೇ ದಿನ ಹಲವು ರೋಚಕ ಘಟನೆಗಳಿಗೆ ಸಾಕ್ಷಿಯಾಗಿತ್ತು. ಒಂದೆಡೆ ರಸ್ಸಿ ವಂಡೆರ್ ಡುಸ್ಸೆನ್ ರಿಷಭ್ ಪಂತ್ ಅವರನ್ನು ಕೆಣಕಿ ಮುನ್ನುಗ್ಗಿ ಹೊಡೆಯಲು ಪ್ರೇರೇಪಿಸಿ ವಿಕೆಟ್ ಪಡೆದರೆ, ಔಟಾದ ಬಳಿಕ ಪಂತ್ ತಪ್ಪಿ ದಕ್ಷಿಣ ಆಫ್ರಿಕಾ ಡ್ರೆಸಿಂಗ್ ರೂಮ್​ಗೆ ತೆರಳಿದ್ದರು. ಹಾಗೆಯೇ ಮಾರ್ಕೊ ಜಾನ್ಸೆನ್ ಹಾಗೂ ಜಸ್​ಪ್ರೀತ್ ಬುಮ್ರಾ ನಡುವೆ ಮೈದಾನದಲ್ಲೇ ವಾಗ್ವಾದ ಕೂಡ ನಡೆಯಿತು. ಇನ್ನೊಂದೆಡೆ 2ನೇ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ 240 ರನ್​ಗಳ ಟಾರ್ಗೆಟ್ ನೀಡಿ ವಿಕೆಟ್​ಗಾಗಿ ಹರಸಾಹಸ ನಡೆಸಿದರು. ಈ ವೇಳೆ ಟೀಮ್ ಇಂಡಿಯಾ ಬೌಲರುಗಳ ಸತತ ಪ್ರಯತ್ನದಿಂದ ಇಕ್ಕಟಿಗೆ ಸಿಲುಕಿದ್ದು ಫೀಲ್ಡ್​ ಅಂಪೈರ್ ಎಂಬುದು ವಿಶೇಷ.

ಏಕೆಂದರೆ ಮೈದಾನದಲ್ಲಿ ಆಟಗಾರರ ಸ್ಲೆಡ್ಜಿಂಗ್ ಹಾಗೂ ಕಾಲೆಳೆಯುವಿಕೆಯನ್ನು ನಿಯಂತ್ರಿಸುವುದು ಅಂಪೈರ್​ಗೆ ಹೊಸ ಸವಾಲಾಗಿ ಮಾರ್ಪಟ್ಟಿತ್ತು. ಅದರಲ್ಲೂ ಕೆಲವೊಮ್ಮೆ ಬೌಲರ್‌ಗಳು ಅಂಪೈರ್ ಮೇಲೆ ಒತ್ತಡ ಹೇರುತ್ತಿರುವುದು ಕೂಡ ಕಂಡು ಬಂತು. ನಿರಂತರವಾಗಿ ಅಪೀಲ್ ಸಲ್ಲಿಸುವ ಮೂಲಕ ವಿಕೆಟ್​ಗಾಗಿ ಟೀಮ್ ಇಂಡಿಯಾ ಬೌಲರುಗಳು ಮನವಿ ಮಾಡಿದ್ದರು. ಒಂದಷ್ಟು ಹೊತ್ತು ಸಹಿಸಿಕೊಂಡ ಅಂಪೈರ್ ಮರಿಯಾಸ್ ಎರಾಸ್ಮಸ್ ಆ ಬಳಿಕ ಅಸಮಾಧಾನ ಹೊರಹಾಕಿದರು.

ದಕ್ಷಿಣ ಆಫ್ರಿಕಾದ ಎರಡನೇ ಇನ್ನಿಂಗ್ಸ್‌ನ 10 ನೇ ಓವರ್‌ನಲ್ಲಿ ಶಾರ್ದೂಲ್ ಠಾಕೂರ್ ಒಂದೇ ಓವರ್‌ನಲ್ಲಿ ಎರಡು ಬಾರಿ ಸತತವಾಗಿ ಮನವಿ ಮಾಡಿದರು. ಓವರ್‌ನ ನಂತರ, ಆಟಗಾರರು ತಮ್ಮ ತಮ್ಮಲ್ಲೇ ಮಾತನಾಡಿಕೊಳ್ಳುತ್ತಿರುವಾಗ, ಎರಾಸ್ಮಸ್ ಸ್ಟಂಪ್ ಮೈಕ್‌ನಲ್ಲಿ, ‘ನೀವು ಪ್ರತಿ ಓವರ್‌ನಲ್ಲೂ ನನಗೆ ಹೃದಯಾಘಾತವನ್ನು ನೀಡುತ್ತಿದ್ದೀರಿ’ ಎಂದು ಹೇಳಿದ್ದಾರೆ. ಅಂಪೈರ್ ಹೇಳಿದ ಈ ಮಾತು ಸ್ಟಂಪ್ ಮೈಕ್​ನಲ್ಲಿ ಸ್ಪಷ್ಟವಾಗಿ ರೆಕಾರ್ಡ್ ಆಗಿದೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 202 ರನ್​ಗಳಿಸಿದರೆ, 2ನೇ ಇನಿಂಗ್ಸ್​ನಲ್ಲಿ 266 ರನ್​ ಕಲೆಹಾಕಿತು. ಇತ್ತ ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್​ನಲ್ಲಿ 229 ರನ್ ಬಾರಿಸಿ ಮುನ್ನಡೆ ಸಾಧಿಸಿತ್ತು. ಇದೀಗ 240 ರನ್​ಗಳ ಟಾರ್ಗೆಟ್​ನೊಂದಿಗೆ 2ನೇ ಇನಿಂಗ್ಸ್ ಆರಂಭಿಸಿರುವ ದಕ್ಷಿಣ ಆಫ್ರಿಕಾ 2 ವಿಕೆಟ್ ನಷ್ಟಕ್ಕೆ 118 ರನ್​ಗಳಿಸಿದೆ. ದಕ್ಷಿಣ ಆಫ್ರಿಕಾಗೆ ಗೆಲ್ಲಲು ಇನ್ನೂ 122 ರನ್​ಗಳ ಅವಶ್ಯಕತೆಯಿದೆ. ಅತ್ತ ಟೀಮ್ ಇಂಡಿಯಾ 8 ವಿಕೆಟ್ ಕಬಳಿಸಿದರೆ ಜಯ ತನ್ನದಾಗಿಸಿಕೊಳ್ಳಬಹುದು.

ಇದನ್ನೂ ಓದಿ:  Virat Kohli: ವಿರಾಟ್ ಕೊಹ್ಲಿಯ ಗಾಯ, ರಾಹುಲ್ ದ್ರಾವಿಡ್ ಹೇಳಿಕೆ ಮತ್ತು 100ನೇ ಟೆಸ್ಟ್​..!

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: Rohit Sharma: ಫಿಟ್​ನೆಸ್​ ಅಥವಾ ಇನ್ನೇನಾದರೂ? ರೋಹಿತ್ ಶರ್ಮಾ ಕೈ ಬಿಡಲು ಕಾರಣವೇನು?

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(IND vs SA: Marais Erasmus said ‘you guys are giving me a bloody heart-attack’)

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ