AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ವಿಶ್ವ ಕಿರೀಟ ತೊಡಲು ಬಾರ್ಬಡೋಸ್​ಗೆ ಬಂದಿಳಿದ ರೋಹಿತ್ ಪಡೆ; ವಿಡಿಯೋ ನೋಡಿ

IND vs SA, T20 World Cup 2024: ನಿನ್ನೆ ನಡೆದ ಸೆಮಿಫೈನಲ್‌ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಅದರ ನಂತರ ಇದೀಗ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದ ಸವಾಲನ್ನು ಎದುರಿಸಲಿದೆ. ಅಂತಿಮ ಪಂದ್ಯಕ್ಕಾಗಿ ಟೀಂ ಇಂಡಿಯಾ ಬಾರ್ಬಡೋಸ್ ತಲುಪಿದೆ.

IND vs SA: ವಿಶ್ವ ಕಿರೀಟ ತೊಡಲು ಬಾರ್ಬಡೋಸ್​ಗೆ ಬಂದಿಳಿದ ರೋಹಿತ್ ಪಡೆ; ವಿಡಿಯೋ ನೋಡಿ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jun 28, 2024 | 2:55 PM

Share

ಗಯಾನಾದಲ್ಲಿ ನಡೆದ ಟಿ20 ವಿಶ್ವಕಪ್​ನ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 68 ರನ್​ಗಳಿಂದ ಸೋಲಿಸಿದ ಟೀಂ ಇಂಡಿಯಾ, ಮೂರನೇ ಬಾರಿಗೆ ವಿಶ್ವಕಪ್ ಫೈನಲ್​ಗೇರಿದೆ. ಇದೀಗ ರೋಹಿತ್ ಪಡೆ ನಾಳೆ ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಈ ಮಹತ್ವದ ಪಂದ್ಯಕ್ಕೆ ಬಾರ್ಬಡೋಸ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್ ಮೈದಾನ ಆತಿಥ್ಯವಹಿಸುತ್ತಿದೆ. ಹೀಗಾಗಿ ಆಂಗ್ಲರನ್ನು ಮಣಿಸಿದ ಕೂಡಲೇ ಬಾರ್ಬಡೋಸ್​ಗೆ ಪ್ರಯಾಣ ಬೆಳೆಸಿದೆ. ಇದೇ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೂಡ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಪಂದ್ಯಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದು ಪಂದ್ಯದ ರೋಚಕತೆಯನ್ನು ಹೆಚ್ಚಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್‌ ಪಂದ್ಯದ ಬಗ್ಗೆ ಬಾರ್ಬಡೋಸ್‌ಗೆ ತಲುಪುವ ಮೊದಲೇ ಗಯಾನಾದಲ್ಲಿ ಹೇಳಿಕೆ ನೀಡಿರುವ ರೋಹಿತ್ ಶರ್ಮಾ ವಿಶ್ವಕಪ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೆಮಿಫೈನಲ್‌ನ ನಂತರದ ಪಂದ್ಯದ ಪ್ರಸ್ತುತಿಯಲ್ಲಿ, 2013 ರಿಂದ ನಡೆಯುತ್ತಿರುವ ಕಾಯುವಿಕೆಯನ್ನು ಈ ಬಾರಿ ಕೊನೆಗೊಳಿಸುವತ್ತ ನೋಡುತ್ತಿದ್ದೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರವಾಗಿ ರೋಹಿತ್, ‘ನಮ್ಮ ಅತ್ಯುತ್ತಮ ಕೊಡುಗೆ ನೀಡಲು ನಾವು ಪ್ರಯತ್ನಿಸುತ್ತೇವೆ. ತಂಡ ಉತ್ತಮ ಲಯದಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಇಲ್ಲಿಯವರೆಗೂ ತೋರಿದ ಪ್ರದರ್ಶನವನ್ನೇ ಫೈನಲ್‌ನಲ್ಲಿಯೂ ಕಾಯ್ದುಕೊಳ್ಳುವ ಭರವಸೆ ಮೂಡಿದೆ. ಫೈನಲ್‌ಗೂ ಮುನ್ನ ದಕ್ಷಿಣ ಆಫ್ರಿಕಾ ಪಾಳಯದಲ್ಲಿ ತಲ್ಲಣ ಮೂಡಿಸಿದ್ದ ಈ ಹೇಳಿಕೆ ನೀಡಿದ ರೋಹಿತ್ ಶರ್ಮಾ ಇಡೀ ತಂಡದೊಂದಿಗೆ ಗಯಾನಾದಿಂದ ಬಾರ್ಬಡೋಸ್ ತಲುಪಿದ್ದಾರೆ.

IND vs ENG: ಸೇಡಿನ ಸಮರದಲ್ಲಿ ಆಂಗ್ಲರನ್ನು ಬಗ್ಗುಬಡಿದು ಫೈನಲ್​ಗೇರಿದ ಭಾರತ..!

ಬಾರ್ಬಡೋಸ್ ತಲುಪಿದ ಭಾರತ

ಟೀಂ ಇಂಡಿಯಾ ಬಾರ್ಬಡೋಸ್‌ಗೆ ಆಗಮಿಸಿದ ವಿಡಿಯೋ ಕೂಡ ಹೊರಬಿದ್ದಿದ್ದು, ಏರ್‌ಪೋರ್ಟ್‌ನಿಂದ ಹೊರಬಂದು ಟೀಂ ಬಸ್ ಹತ್ತಿದ ಆಟಗಾರರಲ್ಲಿ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಸೇರಿದಂತೆ ಎಲ್ಲಾ ಆಟಗಾರರು ಕಾಣಿಸಿಕೊಂಡಿದ್ದಾರೆ. ಭಾರತದ ಆಟಗಾರರು ವಿಮಾನ ನಿಲ್ದಾಣದಿಂದ ತಂಡದ ಬಸ್ ಹತ್ತಿ ಹೋಟೆಲ್‌ಗೆ ತೆರಳಿದ್ದಾರೆ.

ಬಾರ್ಬಡೋಸ್‌ನಲ್ಲಿ ಭಾರತ- ಆಫ್ರಿಕಾ ದಾಖಲೆ

T20 ವಿಶ್ವಕಪ್ 2024 ರ ಫೈನಲ್ ನೆಪದಲ್ಲಿ ಬಾರ್ಬಡೋಸ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಟಿ20 ಕ್ರಿಕೆಟ್‌ನಲ್ಲಿ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಇಲ್ಲಿ ಕೇವಲ 3 ಪಂದ್ಯಗಳನ್ನು ಆಡಿದ ಅನುಭವ ಹೊಂದಿರುವ ಟೀಂ ಇಂಡಿಯಾ ಈ ಪೈಕಿ 1ರಲ್ಲಿ ಮಾತ್ರ ಗೆದ್ದಿದೆ. ಉಳಿದ ಎರಡು ಪಂದ್ಯಗಳನ್ನು ಸೋತಿರುವ ಭಾರತ 2010 ರ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಮುಗ್ಗರಿಸಿತ್ತು.

ಇನ್ನು ದಕ್ಷಿಣ ಆಫ್ರಿಕಾದ ಬಗ್ಗೆ ಹೇಳುವುದಾದರೆ.. ಇಲ್ಲಿ ಆಡಿರುವ 3 ಟಿ20 ಪಂದ್ಯಗಳಲ್ಲಿ ಹರಿಣಗಳು 2ರಲ್ಲಿ ಗೆದ್ದಿದ್ದಾರೆ. 2010ರಲ್ಲಿ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಈ ಮೂರು ಪಂದ್ಯಗಳನ್ನು ಆಡಿತ್ತು. ಅಂದರೆ 2024 ರಲ್ಲಿ ದಕ್ಷಿಣ ಆಫ್ರಿಕಾ ತಂಡ ಬಾರ್ಬಡೋಸ್‌ನಲ್ಲಿ ಪಂದ್ಯವನ್ನು ಆಡುತ್ತಿರುವುದು ಇದೇ ಮೊದಲು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?