AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 1st ODI: ಭಾರತ-ಸೌತ್ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯ ಮತ್ತಷ್ಟು ವಿಳಂಬ..!

India vs South Africa 1st Odi: ಈ ಪಂದ್ಯದಲ್ಲಿ ಬದಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ಟೀಮ್ ಇಂಡಿಯಾ ಟಿ20 ವಿಶ್ವಕಪ್​ಗಾಗಿ ತೆರಳಿದ್ದು, ಹೀಗಾಗಿ ಬಿಸಿಸಿಐ ಶಿಖರ್ ಧವನ್ ನಾಯಕತ್ವದ ಬದಲಿ ಭಾರತ ತಂಡವನ್ನು ಈ ಸರಣಿಗಾಗಿ ಆಯ್ಕೆ ಮಾಡಲಾಗಿದೆ.

IND vs SA 1st ODI: ಭಾರತ-ಸೌತ್ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯ ಮತ್ತಷ್ಟು ವಿಳಂಬ..!
IND vs SA
TV9 Web
| Updated By: ಝಾಹಿರ್ ಯೂಸುಫ್|

Updated on:Oct 06, 2022 | 1:41 PM

Share

ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಟಿ20 ಪಂದ್ಯ ಮುಕ್ತಾಯಗೊಂಡಿದೆ. ಇದೀಗ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಮ್ ಇಂಡಿಯಾ ಸಜ್ಜಾಗಿದೆ. ಲಕ್ನೋದ ಅಟಲ್ ಬಿಹಾರಿ ವಾಜಪೈ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯವು ಇದೀಗ ವರುಣನ ಅಡ್ಡಿಯ ಕಾರಣ ವಿಳಂಬವಾಗಿದೆ. ನಿಗದಿಯಂತೆ ಪಂದ್ಯವು 1.30 ಕ್ಕೆ ಶುರುವಾಗಬೇಕಿತ್ತು. ಆದರೀಗ ಮಳೆಯ ಕಾರಣ ಟಾಸ್ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಸದ್ಯ ಮಳೆ ಕಡಿಮೆಯಾದರೂ ಪಿಚ್​ನಿಂದ ಕವರ್​ಗಳನ್ನು ಸರಿಸಲಾಗಿಲ್ಲ. ಹೀಗಾಗಿ ಪಂದ್ಯವು 2 ಗಂಟೆಯ ನಂತರ ಶುರುವಾಗುವ ಸಾಧ್ಯತೆಯಿದೆ.

ಲಕ್ನೋದಲ್ಲಿ ನಿನ್ನೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಪಿಚ್​ ಭಾಗದಲ್ಲಿ ಕವರ್​ ಮಾಡಲಾಗಿದ್ದು, ಇದೀಗ ಮಳೆಯ ಕಡಿಮೆಯಾಗಿದೆ. ಅದರಂತೆ ಇದೀಗ ಪಂದ್ಯ ಆಯೋಜನೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಹೀಗಾಗಿ ಅರ್ಧ ಘಂಟೆ ತಡವಾಗಿ ಪಂದ್ಯ ನಡೆಯಲಿದೆ ಎಂದು ತಿಳಿದು ಬಂದಿದೆ.

ಇನ್ನು ಲಕ್ನೋದಲ್ಲಿ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಇದ್ದು, ಮೋಡ ಕವಿದ ವಾತಾವರಣವನ್ನು ಒಳಗೊಂಡಿದೆ. ಗುರುವಾರ ಮಳೆ ಪ್ರಮಾಣ ಶೇ 95ರಷ್ಟಿರುವ ಕಾರಣ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಪಂದ್ಯ ನಡುವೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?

ಬದಲಿ ಟೀಮ್ ಇಂಡಿಯಾ:

ಈ ಪಂದ್ಯದಲ್ಲಿ ಬದಲಿ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ. ಟೀಮ್ ಇಂಡಿಯಾ ಟಿ20 ವಿಶ್ವಕಪ್​ಗಾಗಿ ತೆರಳಿದ್ದು, ಹೀಗಾಗಿ ಬಿಸಿಸಿಐ ಶಿಖರ್ ಧವನ್ ನಾಯಕತ್ವದ ಬದಲಿ ಭಾರತ ತಂಡವನ್ನು ಈ ಸರಣಿಗಾಗಿ ಆಯ್ಕೆ ಮಾಡಲಾಗಿದೆ. ಅದರಂತೆ ಧವನ್ ತಂಡದ ಸಾರಥ್ಯವಹಿಸಿದರೆ, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಭಾರತ ಏಕದಿನ ತಂಡ: ಶಿಖರ್ ಧವನ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪ ನಾಯಕ), ರಜತ್ ಪಾಟಿದಾರ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಕುಲದೀಪ್ ಯಾದವ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ರಾಹುಲ್ ತ್ರಿಪಾಠಿ, ಮುಖೇಶ್ ಕುಮಾರ್, ಋತುರಾಜ್ ಗಾಯಕ್ವಾಡ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್.

ಭಾರತ-ಸೌತ್ ಆಫ್ರಿಕಾ ಏಕದಿನ ಸರಣಿಯ ವೇಳಾಪಟ್ಟಿ:

  • ಅಕ್ಟೋಬರ್ 6- ಮೊದಲ ಏಕದಿನ ಪಂದ್ಯ (ಲಕ್ನೋ)
  • ಅಕ್ಟೋಬರ್ 9- 2ನೇ ಏಕದಿನ ಪಂದ್ಯ (ರಾಂಚಿ)
  • ಅಕ್ಟೋಬರ್ 11- 3ನೇ ಏಕದಿನ ಪಂದ್ಯ (ದೆಹಲಿ)

Published On - 1:27 pm, Thu, 6 October 22

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ