AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ವಿರಾಟ್ ಕೊಹ್ಲಿ ಬೇಲ್ಸ್​ ಟ್ರಿಕ್: ಟೀಮ್ ಇಂಡಿಯಾಗೆ ಬ್ಯಾಕ್ ಟು ಬ್ಯಾಕ್ ವಿಕೆಟ್

India vs South Africa: ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (101) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 245 ರನ್​ ಕಲೆಹಾಕಿದೆ. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡದ ಪರ ಆರಂಭಿಕ ಆಟಗಾರ ಡೀನ್ ಎಲ್ಗರ್ (140) ಅಜೇಯ ಶತಕ ಸಿಡಿಸಿದ್ದಾರೆ. ಅಲ್ಲದೆ 2ನೇ ದಿನದಾಟದ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು ಸೌತ್ ಆಫ್ರಿಕಾ 256 ರನ್​ಗಳಿಸಿದೆ.

VIDEO: ವಿರಾಟ್ ಕೊಹ್ಲಿ ಬೇಲ್ಸ್​ ಟ್ರಿಕ್: ಟೀಮ್ ಇಂಡಿಯಾಗೆ ಬ್ಯಾಕ್ ಟು ಬ್ಯಾಕ್ ವಿಕೆಟ್
Virat Kohli
TV9 Web
| Edited By: |

Updated on:Dec 28, 2023 | 7:48 AM

Share

ಸೆಂಚುರಿಯನ್​ನಲ್ಲಿ ನಡೆಯುತ್ತಿರುವ ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಪಂದ್ಯವು ರೋಚಕ ಹೋರಾಟಕ್ಕೆ ಸಾಕ್ಷಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಕೆಎಲ್ ರಾಹುಲ್ (101) ಅವರ ಶತಕದ ನೆರವಿನಿಂದ 245 ರನ್​ಗಳಿಸಿ ಆಲೌಟ್ ಆಗಿದೆ.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ. ಆರಂಭಿಕ ಆಟಗಾರ ಐಡೆನ್ ಮಾರ್ಕ್ರಾಮ್ (5) ಬೇಗನೆ ಔಟಾದರೂ, ಬಳಿಕ ಡೀನ್ ಎಲ್ಗರ್ ಹಾಗೂ ಟೋನಿ ಝೋರ್ಝಿ ಅತ್ಯುತ್ತಮ ಇನಿಂಗ್ಸ್​ ಆಡಿದರು.

ಇತ್ತ ಈ ಜೋಡಿಯನ್ನು ಬೇರ್ಪಡಿಸಲು ಟೀಮ್ ಇಂಡಿಯಾ ಬೌಲರ್​ಗಳು ಹರಸಾಹಸಪಡಬೇಕಾಯಿತು. 2ನೇ ವಿಕೆಟ್​ಗೆ 93 ರನ್​ಗಳ ಜೊತೆಯಾಟವಾಡಿದ ಬಳಿಕ ಟೋನಿ ಝೋರ್ಝಿ ವಿಕೆಟ್ ಒಪ್ಪಿಸಿದ್ದರು. ಆದರೆ ಝೋರ್ಝಿ ಔಟಾಗುವ ಮುನ್ನ ವಿರಾಟ್ ಕೊಹ್ಲಿ ಬೇಲ್ಸ್ ಟ್ರಿಕ್​ನ ಮೊರೆ ಹೋಗಿದ್ದರು ಎಂಬುದು ವಿಶೇಷ.

ಹೌದು, ಸೌತ್ ಆಫ್ರಿಕಾ ಇನಿಂಗ್ಸ್​ನ 28ನೇ ಓವರ್ ಮುಕ್ತಾಯದ​ ವೇಳೆ ನಾನ್​ ಸ್ಟ್ರೈಕರ್​ ವಿಕೆಟ್​ ಬಳಿ ಬಂದ ವಿರಾಟ್ ಕೊಹ್ಲಿ ಸ್ಟಂಪ್​ ಮೇಲಿದ್ದ ಬೇಲ್ಸ್ ಅನ್ನು ಅದಲು ಬದಲು ಮಾಡಿದ್ದರು. ಅಚ್ಚರಿ ಎಂದರೆ ಬುಮ್ರಾ ಎಸೆದ 29ನೇ ಓವರ್​ನ 6ನೇ ಎಸೆತದಲ್ಲಿ ಝೋರ್ಝಿ (28) ಯಶಸ್ವಿ ಜೈಸ್ವಾಲ್​ಗೆ ಕ್ಯಾಚಿತ್ತು ಔಟಾದರು. ಇದರ ಬೆನ್ನಲ್ಲೇ ಕೀಗನ್ ಪೀಟರ್ಸನ್ (2) ಕೂಡ ಬೌಲ್ಡ್ ಆಗಿ ನಿರ್ಗಮಿಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಮತ್ತೊಮ್ಮೆ ಬೇಲ್ಸ್​ ಟ್ರಿಕ್ ಚರ್ಚೆಯು ಮುನ್ನಲೆಗೆ ಬಂದಿದೆ.

ಬ್ರಾಡ್ ಬೇಲ್ಸ್​ ಟ್ರಿಕ್:

ಟೆಸ್ಟ್ ಕ್ರಿಕೆಟ್​ನಲ್ಲಿ ಬೇಲ್ಸ್ ಟ್ರಿಕ್ ಪರಿಚಯಿಸಿದ್ದು ಇಂಗ್ಲೆಂಡ್ ತಂಡದ ಮಾಜಿ ವೇಗಿ ಸ್ಟುವರ್ಟ್ ಬ್ರಾಡ್. ಎದುರಾಳಿ ತಂಡದ ವಿಕೆಟ್ ಬೀಳದಿದ್ದಾಗ ಬ್ರಾಡ್ ಬೇಲ್ಸ್ ಅನ್ನು ಅದಲು ಬದಲು ಮಾಡಿ ಬೌಲಿಂಗ್ ಮಾಡುತ್ತಿದ್ದರು.

ವಿಶೇಷ ಎಂದರೆ ಇಂತಹದೊಂದು ಟ್ರಿಕ್ ಬಳಸಿದ ಬಳಿಕ ಬ್ರಾಡ್ ಹಲವು ಬಾರಿ ವಿಕೆಟ್ ಪಡೆದಿದ್ದರು. ಇದನ್ನೇ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪ್ರಯೋಗಿಸಿದ್ದಾರೆ. ಈ ಪ್ರಯೋಗವು ಟೀಮ್ ಇಂಡಿಯಾ ಪಾಲಿಗೂ ಯಶಸ್ವಿಯಾಗಿರುವುದು ವಿಶೇಷ.

ಭಾರತ-ಸೌತ್ ಆಫ್ರಿಕಾ ಮೊದಲ ಇನಿಂಗ್ಸ್​:

ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (101) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 245 ರನ್​ ಕಲೆಹಾಕಿದೆ.

ಇದನ್ನೂ ಓದಿ: KL Rahul: ಕಿಂಗ್ ಕೊಹ್ಲಿಯ ದಾಖಲೆ ಸರಿಗಟ್ಟಿದ ಕೆಎಲ್ ರಾಹುಲ್

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡದ ಪರ ಆರಂಭಿಕ ಆಟಗಾರ ಡೀನ್ ಎಲ್ಗರ್ (140) ಅಜೇಯ ಶತಕ ಸಿಡಿಸಿದ್ದಾರೆ. ಅಲ್ಲದೆ 2ನೇ ದಿನದಾಟದ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು ಸೌತ್ ಆಫ್ರಿಕಾ 256 ರನ್​ಗಳಿಸಿದೆ.

Published On - 7:47 am, Thu, 28 December 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ