AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL 2ನೇ ಟಿ-20: ಭಾರತದ ಪ್ಲೇಯಿಂಗ್ XI ನಲ್ಲಿ ಅಲ್ಲೋಲ ಕಲ್ಲೋಲ: ಇಂದು ಕಣಕ್ಕಿಳಿಯುವವರು ಯಾರೆಲ್ಲ?

India's playing XI: ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಅಲ್ಲೋಲ ಕಲ್ಲೋಲವಾಗಿದೆ. ಪ್ರಮುಖ ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ಭಾರತ ಇಂದು ಕಣಕ್ಕಿಳಿಯಬೇಕಿದೆ.

IND vs SL 2ನೇ ಟಿ-20: ಭಾರತದ ಪ್ಲೇಯಿಂಗ್ XI ನಲ್ಲಿ ಅಲ್ಲೋಲ ಕಲ್ಲೋಲ: ಇಂದು ಕಣಕ್ಕಿಳಿಯುವವರು ಯಾರೆಲ್ಲ?
Sri Lanka vs India 2nd T20
TV9 Web
| Updated By: Vinay Bhat|

Updated on: Jul 28, 2021 | 11:21 AM

Share

ಎಲ್ಲ ಅಂದುಕೊಂಡಂತೆ ಆಗಿದ್ದರೆ ನಿನ್ನೆ ಮಂಗಳವಾರ ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವೆ ಎರಡನೇ ಟಿ-20 ಪಂದ್ಯ (2nd T20I) ನಡೆಯಬೇಕಿತ್ತು. ಆದರೆ, ಪಂದ್ಯ ಆರಂಭಕ್ಕೆ ಕೆಲವು ಗಂಟೆಗಳಿರುವಾಗ ಟೀಮ್ ಇಂಡಿಯಾದ ಪ್ರಮುಖ ಆಲ್ರೌಂಡರ್ ಕ್ರುನಾಲ್ ಪಾಂಡ್ಯ (Krunal Pandya) ಅವರಿಗೆ ಕೊರೊನಾ ಪಾಸಿಟಿವ್ (Corona Positive) ಇರುವುದು ಕಂಡುಬಂದಿದೆ. ಹೀಗಾಗಿ ಎರಡನೇ ಟಿ-20 ಪಂದ್ಯವನ್ನು ಇಂದು ಬುಧವಾರಕ್ಕೆ ಮುಂದೂಡಲಾಗಿದೆ. ಕ್ರುನಾಲ್ ಜೊತೆ ಸಂಪರ್ಕದಲ್ಲಿದ್ದ 9 ಆಟಗಾರರು ಐಸೋಲೇಶನ್​ನಲ್ಲಿದ್ದು ಮುಂದಿನ ಎರಡೂ ಪಂದ್ಯದಲ್ಲಿ ಕಣಕ್ಕಿಳಿಯುವಂತಿಲ್ಲ.

ಇದರಿಂದಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಅಲ್ಲೋಲ ಕಲ್ಲೋಲವಾಗಿದೆ. ಪ್ರಮುಖ ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ಭಾರತ ಇಂದು ಕಣಕ್ಕಿಳಿಯಬೇಕಿದೆ. ಸದ್ಯದ ಮಾಹಿತಿ ಪ್ರಕಾರ ಟೀಮ್ ಇಂಡಿಯಾದ ಪೃಥ್ವಿ ಶಾ, ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ, ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್, ದೇವದತ್ ಪಡಿಕ್ಕಲ್ ಮತ್ತು ಕೃಷ್ಣಪ್ಪ ಗೌತಮ್ ಸೇರಿದಂತೆ ಒಟ್ಟು 9 ಆಟಗಾರರನ್ನು ಸಂಪೂರ್ಣವಾಗಿ ಐಸೋಲೇಶನ್‌ ಮಾಡಲಾಗಿದೆ. ಇವರು ಎರಡನೇ ಹಾಗೂ ಮೂರನೇ ಟಿ-20 ಯಲ್ಲಿ ಆಡುವುದಿಲ್ಲ ಎಂದು ಹೇಳಲಾಗಿದೆ.

ಹೀಗಾದಲ್ಲಿ ಎರಡನೇ ಟಿ-20 ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI ಕಷ್ಟಕರವಾಗಲಿದೆ. ನಾಯಕ ಶಿಖರ್ ಧವನ್ ಜೊತೆ ಪೃಥ್ವಿ ಶಾ ಇನ್ನಿಂಗ್ಸ್ ಆರಂಭಿಸಲು ಸಾಧ್ಯವಿಲ್ಲ. ದೇವದತ್ ಪಡಿಕ್ಕಲ್ ಕೂಡ ಐಸೋಲೇಶನ್​ನಲ್ಲಿದ್ದಾರೆ. ಹೀಗಾಗಿ ಧವನ್ ಜೊತೆ ರುತುರಾಜ್ ಗಾಯಕ್ವಾಡ್ ಕಣಕ್ಕಿಳಿದು ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಲಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಮನೀಶ್ ಪಾಂಡೆ ಆಡುವ ಸಾಧ್ಯತೆ ಇದ್ದು, ವಿಕೆಟ್ ಕೀಪರ್ ಜವಾಬ್ದಾರಿ ಸಂಜು ಸ್ಯಾಮ್ಸನ್ ಹೊರಲಿದ್ದಾರೆ. ನಿತೀಶ್ ರಾಣಗೆ ಕೂಡ ಪದಾರ್ಪನೆ ಪಂದ್ಯವಾಗುವ ಸಾಧ್ಯತೆ ಇದೆ. ಇವರು ಬ್ಯಾಟ್ಸ್​ಮನ್​ಗಳಾಗಿದ್ದರೆ ದೀಪಕ್ ಚಹಾರ್ ಹಾಗೂ ಭುವನೇಶ್ವರ್ ಕುಮಾರ್ ನಂತರದ ಸ್ಥಾನದಲ್ಲಿ ಆಡಬಹುದು. ಯುಜ್ವೇಂದ್ರ ಚಹಲ್, ವರುಣ್ ಚಕ್ರವರ್ತಿ, ರಾಹುಲ್ ಚಹಾರ್ ಮತ್ತು ಚೇತನ್ ಸಕರಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

ಇತ್ತ ಶ್ರೀಲಂಕಾ ತಂಡದಲ್ಲೂ ಕೆಲ ಆಟಗಾರರು ಇಂಜುರಿಯಿಂದ ಬಳಲುತ್ತಿದ್ದು ಆಡುವುದು ಅನುಮಾನವಾಗಿದೆ. ಪ್ರಮುಖ ಆಟಗಾರರ ಅಲಭ್ಯತೆಯಲ್ಲಿ ಉಭಯ ತಂಡಗಳು ಎರಡನೇ ಟಿ-20 ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಹೀಗಾಗಿ ಇಂದಿನ ಮ್ಯಾಚ್ ಸಾಕಷ್ಟು ಕುತೂಹಲ ಕೆರಳಿಸಿದೆ.

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಸಂಜೆ 7:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸರಿಯಾಗಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ.

IND vs SL: ಟೀಮ್ ಇಂಡಿಯಾದ ಈ 9 ಆಟಗಾರರು ಮುಂದಿನ ಎರಡೂ ಟಿ-20ಯಲ್ಲಿ ಕಣಕ್ಕಿಳಿಯಲ್ಲ: ಯಾರೆಲ್ಲ ಗೊತ್ತೇ?

ಹಾರ್ದಿಕ್ ಪಾಂಡ್ಯ ಜಾಗಕ್ಕೆ ಇಬ್ಬರು ಆಟಗಾರರನ್ನು ಆಯ್ಕೆ ಮಾಡಿದ ಸುನಿಲ್ ಗವಾಸ್ಕರ್

(Ind vs sl 2nd t20 Predicted playing XI for second T20I if Krunal Pandyas close contacts are isolated)

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ