AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 3ನೇ ದಿನದಾಟ ಅಂತ್ಯ; ಫಾಲೋಆನ್ ಹೇರಲು ಭಾರತದ ಪ್ರಯತ್ನ

Colombo Test Day 3: ಕೊಲಂಬೊದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಂತ್ಯಕ್ಕೆ ಶ್ರೀಲಂಕಾ 8 ವಿಕೆಟ್‌ಗೆ 265 ರನ್ ಗಳಿಸಿದೆ. ಮಳೆಯಿಂದಾಗಿ ಆಟ ಬೇಗನೆ ಮುಕ್ತಾಯವಾಯಿತು. ಸೋನಲ್ ದಿನುಷಾ 85 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ. ಭಾರತಕ್ಕೆ 238 ರನ್‌ಗಳ ಭಾರಿ ಮುನ್ನಡೆ ದೊರೆತಿದ್ದು, ಫಾಲೋ-ಆನ್ ತಪ್ಪಿಸಲು ಶ್ರೀಲಂಕಾಕ್ಕೆ ಇನ್ನೂ 39 ರನ್‌ಗಳ ಅವಶ್ಯಕತೆಯಿದೆ. ಪಂದ್ಯ ಕುತೂಹಲಕಾರಿಯಾಗಿದೆ.

IND vs SL: 3ನೇ ದಿನದಾಟ ಅಂತ್ಯ; ಫಾಲೋಆನ್ ಹೇರಲು ಭಾರತದ ಪ್ರಯತ್ನ
Ind Vs Sl
ಪೃಥ್ವಿಶಂಕರ
|

Updated on:Aug 25, 2026 | 6:13 PM

Share

ಕೊಲಂಬೊದಲ್ಲಿ (Colombo Test) ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಆತಿಥೇಯ ಶ್ರೀಲಂಕಾ ತಂಡ (India vs Sri Lanka) ಮೂರನೇ ದಿನದಾಟದಂತ್ಯಕ್ಕೆ 8 ವಿಕೆಟ್‌ಗಳನ್ನು ಕಳೆದುಕೊಂಡು 265 ರನ್ ಕಲೆಹಾಕಿದೆ. ಮಳೆಯಿಂದಾಗಿ ಮೂರನೇ ದಿನದಾಟವನ್ನು ಬೇಗನೇ ಅಂತ್ಯಗೊಳಿಸಲಾಯಿತು. ಮೂರನೇ ದಿನದಾಟದಂತ್ಯಕ್ಕೆ ಶ್ರೀಲಂಕಾ ಪರ ಲಹಿರು ಕುಮಾರ 8 ರನ್ ಮತ್ತು ಸೋನಲ್ ದಿನುಷಾ 85 ರನ್ ಬಾರಿಸಿ ಕ್ರೀಸ್‌ನಲ್ಲಿದ್ದಾರೆ. ಮೂರನೇ ದಿನ ಶ್ರೀಲಂಕಾ 257 ರನ್ ಕಲೆಹಾಕಲು 6 ವಿಕೆಟ್‌ಗಳನ್ನು ಕಳೆದುಕೊಂಡಿತು. ಶ್ರೀಲಂಕಾ ಒಟ್ಟು 83.4 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 265 ರನ್ ಕಲೆಹಾಕಿದೆ. ಪ್ರಸ್ತುತ ಭಾರತ 238 ರನ್‌ಗಳ ಮುನ್ನಡೆ ಸಾಧಿಸಿದ್ದು, ಫಾಲೋ-ಆನ್ ತಪ್ಪಿಸಲು ಶ್ರೀಲಂಕಾಕ್ಕೆ ಇನ್ನು 39 ರನ್‌ಗಳು ಬೇಕಾಗಿವೆ.

ಶ್ರೀಲಂಕಾಕ್ಕೆ ಕಳಪೆ ಆರಂಭ

ಎರಡನೇ ದಿನದಂದು 2 ವಿಕೆಟ್‌ ಕಳೆದುಕೊಂಡು 8 ರನ್‌ ಕಲೆಹಾಕಿದ್ದ ಶ್ರೀಲಂಕಾ ಇಲ್ಲಿಂದ ತನ್ನ ಮೂರನೇ ದಿನದ ಆಟವನ್ನು ಪ್ರಾರಂಭಿಸಿತು. ದಿನದ ಆರಂಭದಲ್ಲಿಯೇ ಆರಂಭಿಕ ಆಟಗಾರ ಸಮಿಲ್ ಮಿಶ್ರಾ ಅವರನ್ನು ಪ್ರಸಿದ್ಧ್ ಕೃಷ್ಣ 19 ರನ್‌ಗಳಿಗೆ ಔಟ್ ಮಾಡಿದರು. ಇದರೊಂದಿಗೆ, ಶ್ರೀಲಂಕಾ 35 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ಆ ಬಳಿಕ ಜೊತೆಯಾದ ಪಸಿಂದು ಸೂರ್ಯಬಂಡಾರ ಮತ್ತು ಕಮಿಂದು ಮೆಂಡಿಸ್ ನಾಲ್ಕನೇ ವಿಕೆಟ್‌ಗೆ 87 ರನ್‌ಗಳ ಜೊತೆಯಾಟ ನೀಡಿದರು. ಮತ್ತೆ ದಾಳಿಗಿಳಿದ ಪ್ರಸಿದ್ಧ್, ಮೆಂಡಿಸ್ ಅವರನ್ನು ಔಟ್ ಮಾಡುವ ಮೂಲಕ ಈ ಪಾಲುದಾರಿಕೆಯನ್ನು ಮುರಿದರು. ನಾಯಕ ಧನಂಜಯ ಡಿ ಸಿಲ್ವಾ ಕೂಡ 8 ರನ್‌ಗಳಿಗೆ ಮಾನವ್​ ಸುತಾರ್​ಗೆ ವಿಕೆಟ್ ಒಪ್ಪಿಸಿದರು.

ಸೂರ್ಯಬಂಡಾರ ಅರ್ಧಶತಕ

ಮೊದಲ ಟೆಸ್ಟ್ ಪಂದ್ಯದಲ್ಲಿ ದಿನೇಶ್ ಚಾಂಡಿಮಲ್ ಬದಲಿಗೆ ಕನ್ಕ್ಯುಶನ್ ಬದಲಿ ಆಟಗಾರನಾಗಿ ಆಡಿದ್ದ ಪಸಿಂದು ಸೂರ್ಯಬಂಡಾರ ಆ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಔಟಾಗಿದ್ದರು. ಆದಾಗ್ಯೂ, ಎರಡನೇ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಪಸಿಂದು ಶ್ರೀಲಂಕಾವನ್ನು ಸಂಕಷ್ಟದಿಂದ ಪಾರು ಮಾಡಿದರು. ಸೂರ್ಯಬಂಡಾರ 133 ಎಸೆತಗಳಲ್ಲಿ 80 ರನ್​ಗಳ ಇನ್ನಿಂಗ್ಸ್ ಆಡಿ ಜಡೇಜಾಗೆ ಬಲಿಯಾದರು. ಲಂಕಾ ಪರ ಅದ್ಭುತ ಫಾರ್ಮ್​ನಲ್ಲಿರುವ ಸೋನಾಲ್ ದಿನುಷಾ ಮೊದಲ ಟೆಸ್ಟ್​ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಶತಕ ಬಾರಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 84 ರನ್​ಗಳ ಇನ್ನಿಂಗ್ಸ್ ಆಡಿದ್ದರು.

IND vs SL: ಈ ರೀತಿಯಾಗಿ ವೃತ್ತಿಜೀವನ ಆರಂಭಿಸಿದ ವಿಶ್ವದ 15ನೇ ಆಟಗಾರ ಸರಾಂಶ್ ಜೈನ್

ಶತಕದ ಸಮೀಪದಲ್ಲಿ ಸೋನಾಲ್

ಇದೀಗ ಎರಡನೇ ಟೆಸ್ಟ್‌ನಲ್ಲೂ ತಮ್ಮ ಅತ್ಯುತ್ತಮ ಫಾರ್ಮ್ ಮುಂದುವರಿಸಿರುವ ದಿನುಷಾ ಶತಕದ ಸಮೀಪದಲಿದ್ದು, ತಂಡವನ್ನು ಫಾಲೋ-ಆನ್‌ನಿಂದ ರಕ್ಷಿಸಲು ಹೋರಾಟ ಮುಂದುವರೆಸಿದ್ದಾರೆ. ಮೂರನೇ ದಿನದ ಆಟದ ಅಂತ್ಯಕ್ಕೆ ಸೋನಾಲ್ 85 ರನ್‌ಗಳೊಂದಿಗೆ ಅಜೇಯರಾಗಿ ಉಳಿದಿದ್ದಾರೆ. ಭಾರತದ ಪರ ಪ್ರಸಿದ್ಧ್ ಕೃಷ್ಣ ಮತ್ತು ಮಾನವ್ ಸುತಾರ್ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿ ತಲಾ ಮೂರು ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Tue, 25 August 26

Follow Us
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು