
ಕೊಲಂಬೊದಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟವನ್ನು ಸಹ ಬೇಗನೇ ಅಂತ್ಯಗೊಳಿಸಲಾಗಿದೆ. ಕೊನೆಯ ಸೆಷನ್ ವೇಳೆ ಆಟಕ್ಕೆ ಮಳೆ ಅಡ್ಡಿಪಡಿಸಿತು. ಹೀಗಾಗಿ ಆಟವನ್ನು ಅಂತ್ಯಗೊಳಿಸಲಾಯಿತು. ನಾಲ್ಕನೇ ದಿನದ ಆಟದ ಅಂತ್ಯಕ್ಕೆ, ಆತಿಥೇಯ ಶ್ರೀಲಂಕಾ ತನ್ನ ಎರಡನೇ ಇನ್ನಿಂಗ್ಸ್ನಲ್ಲಿ 6 ವಿಕೆಟ್ಗಳನ್ನು ಕಳೆದುಕೊಂಡು 229 ರನ್ ಕಲೆಹಾಕಿದೆ. ಇದರೊಂದಿಗೆ 16 ರನ್ಗಳ ಮುನ್ನಡೆ ಸಾಧಿಸಿದೆ. ಪ್ರಸ್ತುತ ಕೇಶರ ನುವಂಥ ಮೂರು ರನ್ ಮತ್ತು ಸೋನಾಲ್ ಸೋನಾಲ್ ದಿನುಷಾ ಏಳು ರನ್ ಬಾರಿಸಿ ಅಜೇಯರಾಗಿ ಉಳಿದಿದ್ದು, ಐದನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತದ ಪರ ಎರಡನೇ ಇನ್ನಿಂಗ್ಸ್ನಲ್ಲಿ ಮಾನವ್ ಸುತಾರ್ 2 ವಿಕೆಟ್ ಪಡೆದರೆ, ಉಳಿದವರು ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.
ನಾಲ್ಕನೇ ದಿನದಂದು ಶ್ರೀಲಂಕಾ ದಿನವಿಡೀ ಬ್ಯಾಟಿಂಗ್ ಮಾಡಿತು. ಶ್ರೀಲಂಕಾದ ಮೊದಲ ಇನ್ನಿಂಗ್ಸ್ನಲ್ಲಿ ಸೋನಲ್ ದಿನುಷಾ ತಮ್ಮ ಸರಣಿಯ ಸತತ ಎರಡನೇ ಶತಕ ಬಾರಿಸುವುದರೊಂದಿಗೆ ದಿನ ಆರಂಭವಾಯಿತು. ಆದಾಗ್ಯೂ, ಶ್ರೀಲಂಕಾ 4ನೇ ದಿನದಂದು ತನ್ನ ಒಟ್ಟು ಮೊತ್ತಕ್ಕೆ ಕೇವಲ 22 ರನ್ ಸೇರಿಸಲಷ್ಟೇ ಶಕ್ತವಾಯಿತು. ಆಫ್-ಸ್ಪಿನ್ನರ್ ಸರಾಂಶ್ ಜೈನ್ ಕೊನೆಯ ಎರಡು ವಿಕೆಟ್ಗಳನ್ನು ಪಡೆದು ಲಂಕಾ ಇನ್ನಿಂಗ್ಸ್ ಅಂತ್ಯ ಹಾಡಿದರು. ಹೀಗಾಗಿ ಶ್ರೀಲಂಕಾ ತಂಡಕ್ಕೆ ಫಾಲೋ-ಆನ್ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಆದ್ದರಿಂದ ನಾಯಕ ಶುಭ್ಮನ್ ಗಿಲ್ ಶ್ರೀಲಂಕಾ ತಂಡದ ಮೇಲೆ ಫಾಲೋ-ಆನ್ ಹೇರಿದರು. ಹೀಗಾಗಿ ಎರಡನೇ ಇನ್ನಿಂಗ್ಸ್ ಆರಂಭಿಸಿದ ಶ್ರೀಲಂಕಾಕ್ಕೆ ಮತ್ತೊಮ್ಮೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ಬ್ಯಾಟ್ಸ್ಮನ್ ಲಹಿರು ಉದಾರ ಬೇಗನೆ ಔಟಾದರು. ಆದಾಗ್ಯೂ, ಪಸಿಂದು ಸೂರ್ಯಬಂಡಾರ ಸತತ ಎರಡನೇ ಇನ್ನಿಂಗ್ಸ್ನಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಮೊದಲ ಇನ್ನಿಂಗ್ಸ್ನಲ್ಲಿ 80 ರನ್ಗಳಿಗೆ ಔಟಾಗಿದ್ದ ಪಸಿಂದು ಎರಡನೇ ಇನ್ನಿಂಗ್ಸ್ನಲ್ಲಿ 92 ರನ್ಗಳಿಗೆ ಔಟಾಗುವ ಮೂಲಕ ಶತಕ ವಂಚಿತರಾದರು. ಆದಾಗ್ಯೂ ಕಮಿಂದು ಮೆಂಡಿಸ್ ಅವರೊಂದಿಗೆ 115 ರನ್ಗಳ ಪಾಲುದಾರಿಕೆಯನ್ನು ಹಂಚಿಕೊಂಡು ತಂಡವನ್ನು ಆರಂಭಿಕ ಆಘಾತದಿಂದ ಹೊರ ತಂದರು.
Published On - 5:32 pm, Wed, 26 August 26