AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL, 3rd ODI: ಐತಿಹಾಸಿಕ ಗೆಲುವು: ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಮ್ ಇಂಡಿಯಾ

IND vs SL, 3rd ODI: ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ 95 ರನ್​ಗಳ ಜೊತೆಯಾಟವಾಡಿದ್ದರು.

IND vs SL, 3rd ODI: ಐತಿಹಾಸಿಕ ಗೆಲುವು: ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಮ್ ಇಂಡಿಯಾ
Team India
TV9 Web
| Edited By: |

Updated on:Jan 15, 2023 | 7:49 PM

Share

ತಿರುವನಂತಪುರದ ಗ್ರೀನ್ ಫೀಲ್ಡ್​ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 317 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದಕ್ಕೂ ಮುನ್ನ ಮೊದಲ ಏಕದಿನ ಪಂದ್ಯದಲ್ಲಿ 67 ರನ್​ಗಳಿಂದ ಭಾರತ ತಂಡ ಜಯ ಸಾಧಿಸಿತ್ತು. ಇನ್ನು 2ನೇ ಏಕದಿನ ಪಂದ್ಯದಲ್ಲಿ 4 ವಿಕೆಟ್​ಗಳ ಗೆಲುವು ದಾಖಲಿಸಿತ್ತು. ಇದೀಗ ಭರ್ಜರಿ ಜಯದೊಂದಿಗೆ ಟೀಮ್ ಇಂಡಿಯಾ ಸರಣಿ ಗೆದ್ದುಕೊಂಡಿದೆ. ಅಷ್ಟೇ ಅಲ್ಲದೆ ಏಕದಿನ ಕ್ರಿಕೆಟ್​ನಲ್ಲಿ 300 ಕ್ಕೂ ಅಧಿಕ ರನ್​ಗಳಿಂದ ಗೆದ್ದ ಮೊದಲ ತಂಡ ಎಂಬ ಐತಿಹಾಸಿಕ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

ಇದಕ್ಕೂ ಮುನ್ನ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ 95 ರನ್​ಗಳ ಜೊತೆಯಾಟವಾಡಿದ್ದರು. ಈ ಹಂತದಲ್ಲಿ 42 ರನ್​ ಬಾರಿಸಿದ್ದ ಹಿಟ್​ಮ್ಯಾನ್ ಕ್ಯಾಚ್ ನೀಡಿ ಔಟಾದರು.

ಈ ವೇಳೆ ಜೊತೆಯಾದ ಗಿಲ್ ಹಾಗೂ ವಿರಾಟ್ ಕೊಹ್ಲಿ ಶತಕದ ಜೊತೆಯಾಟವಾಡಿದರು. ಇದರ ನಡುವೆ ಶುಭ್​ಮನ್ ಗಿಲ್ ಆಕರ್ಷಕ ಶತಕ ಬಾರಿಸಿ ಬ್ಯಾಟ್ ಮೇಲೆತ್ತಿದರು. ಆದರೆ ಶತಕದ ಬಳಿಕ ಬಿರುಸಿನ ಆಟಕ್ಕೆ ಮುಂದಾದ ಗಿಲ್ 97 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 14 ಫೋರ್​ನೊಂದಿಗೆ 116 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇದನ್ನೂ ಓದಿ
Image
IPL 2023: ಐಪಿಎಲ್​ನಿಂದ ಹೊರಬಿದ್ದ ರಿಷಭ್ ಪಂತ್​ಗೆ ಸಿಗಲಿದೆ 21 ಕೋಟಿ ರೂ.
Image
Suryakumar Yadav: ರಾಹುಲ್ ದಾಖಲೆ ಉಡೀಸ್: ಹೊಸ ವಿಶ್ವ ದಾಖಲೆ ನಿರ್ಮಿಸಿದ ಸೂರ್ಯ
Image
Suryakumar Yadav: ತೂಫಾನ್ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದ ಸೂರ್ಯಕುಮಾರ್ ಯಾದವ್
Image
Virat Kohli – Rohit Sharma: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ-ರೋಹಿತ್​ಗಿಲ್ಲ ಚಾನ್ಸ್​?

ಇತ್ತ ಆರ್ಭಟ ಶುರು ಮಾಡಿದ್ದ ವಿರಾಟ್ ಕೊಹ್ಲಿ 85 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಬಿರುಸಿನ ಶತಕದ ಬಳಿಕ ಆಕ್ರಮಣಕಾರಿ ಬ್ಯಾಟಿಂಗ್​ನತ್ತ ಮುಖ ಮಾಡಿದ ಕಿಂಗ್ ಕೊಹ್ಲಿ ಲಂಕಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 106 ಎಸೆತಗಳಲ್ಲಿ ಕೊಹ್ಲಿಯ ಸ್ಕೋರ್ 150 ರ ಗಡಿದಾಟಿತು. ಅಂತಿಮವಾಗಿ 110 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್​ ಹಾಗೂ 13 ಫೋರ್​ನೊಂದಿಗೆ ವಿರಾಟ್ ಕೊಹ್ಲಿ ಅಜೇಯ 166 ರನ್​ ಕಲೆಹಾಕಿದರು. ಕೊಹ್ಲಿಯ ಈ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 390 ರನ್ ಕಲೆಹಾಕಿತು.

391 ರನ್​ಗಳ ಕಠಿಣ ಗುರಿ ಪಡೆದ ಶ್ರೀಲಂಕಾ ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 22 ಆಗುವಷ್ಟರಲ್ಲಿ ಇಬ್ಬರನ್ನು ಮೊಹಮ್ಮದ್ ಸಿರಾಜ್ ಪೆವಿಲಿಯನ್​ಗೆ ಕಳುಹಿಸಿದ್ದರು. ಇದರ ಬೆನ್ನಲ್ಲೇ ಅಸಲಂಕಾ (1) ರನ್ನು ಶಮಿ ಔಟ್ ಮಾಡಿದರು. ಇನ್ನು ಸಿರಾಜ್ ಎಸೆತದಲ್ಲಿ ನುವಾನಿಡು (19) ಹಾಗೂ ವನಿಂದು ಹಸರಂಗ (1) ಕೂಡ ಕ್ಲೀನ್ ಬೌಲ್ಡ್ ಆದರು.

ಇದರ ಬೆನ್ನಲ್ಲೇ ಚಮಿಕಾ ಕರುಣರತ್ನೆಯನ್ನು ರನೌಟ್ ಮಾಡುವ ಮೂಲಕ ಸಿರಾಜ್ ಟೀಮ್ ಇಂಡಿಯಾಗೆ ಮತ್ತೊಂದು ಯಶಸ್ಸು ತಂದುಕೊಟ್ಟರು. ಇತ್ತ ಆರಂಭಿಕ ಆಘಾತದಿಂದ ತತ್ತರಿಸಿದ ಶ್ರೀಲಂಕಾಗೆ ನಾಯಕ ದಸುನ್ ಶಾನಕ ಆಸರೆಯಾಗುವ ನಿರೀಕ್ಷೆಯಿತ್ತು. ಆದರೆ ಕುಲ್ದೀಪ್ ಯಾದವ್ ಎಸೆದ ಗೂಗ್ಲಿಗೆ ಶಾನಕ (11) ಕೂಡ ಬೌಲ್ಡ್ ಆದರು. ಅಂದರೆ ಕೇವಲ 50 ರನ್​ಗಳಿಗೆ ಶ್ರೀಲಂಕಾ ತಂಡವು 7 ವಿಕೆಟ್ ಕಳೆದುಕೊಂಡಿತು. ಈ ವೇಳೆ ದಾಳಿಗಿಳಿದ ಮೊಹಮ್ಮದ್ ಶಮಿ ದುನಿತ್ ವಿಕೆಟ್ ಪಡೆದರು. ಹಾಗೆಯೇ ಲಹಿರು ಕುಮಾರ ಕುಲ್ದೀಪ್ ಯಾದವ್ ಎಸೆತದಲ್ಲಿ ಬೌಲ್ಡ್ ಆದರು. ಇನ್ನು ಗಾಯಗೊಂಡಿದ್ದ ಕಾರಣ ಅಶುನ್ ಭಂಡಾರ ಬ್ಯಾಟಿಂಗ್​ ಮಾಡಲು ಕಣಕ್ಕಿಳಿದಿರಲಿಲ್ಲ. ಇದರೊಂದಿಗೆ ಟೀಮ್ ಇಂಡಿಯಾ 317 ರನ್​ಗಳ ಭರ್ಜರಿ ಜಯ ಸಾಧಿಸಿತು.

ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ 4 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ ಹಾಗೂ ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಕಬಳಿಸಿದರು.

ಭಾರತ-  390/5 (50)

ಶ್ರೀಲಂಕಾ-  73 (22)

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೊ, ನುವಾನಿಡು ಫೆರ್ನಾಂಡೊ, ಕುಸಲ್ ಮೆಂಡಿಸ್, ಅಶೆನ್ ಬಂಡಾರ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ, ಲಹಿರು ಕುಮಾರ

Published On - 7:46 pm, Sun, 15 January 23

ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಪೋಷಕರೇ ಗಮನಿಸಿ: ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಇರಲಿ ಎಚ್ಚರ
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು: ಅಷ್ಟಕ್ಕೂ ಆಗಿದ್ದೇನು?
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!