AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಮೂರನೇ ಟಿ20 ಪಂದ್ಯಕ್ಕೂ ಮಳೆಯ ಆತಂಕ..! ಪಲ್ಲೆಕೆಲೆ ಪಿಚ್ ಯಾರಿಗೆ ಹೆಚ್ಚು ಸಹಕಾರಿ?

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಜುಲೈ 30 ರಂದು ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು ಮಾತ್ರವಲ್ಲದೆ ಸರಣಿಯನ್ನೂ ಗೆದ್ದಿದೆ.

IND vs SL: ಮೂರನೇ ಟಿ20 ಪಂದ್ಯಕ್ಕೂ ಮಳೆಯ ಆತಂಕ..! ಪಲ್ಲೆಕೆಲೆ ಪಿಚ್ ಯಾರಿಗೆ ಹೆಚ್ಚು ಸಹಕಾರಿ?
ಪಲ್ಲೆಕೆಲೆ ಹವಾಮಾನ ವರದಿ
ಪೃಥ್ವಿಶಂಕರ
|

Updated on: Jul 29, 2024 | 10:41 PM

Share

ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಜುಲೈ 30 ರಂದು ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು ಮಾತ್ರವಲ್ಲದೆ ಸರಣಿಯನ್ನೂ ಗೆದ್ದಿದೆ. ಇದೀಗ ಟೀಂ ಇಂಡಿಯಾ ಮೂರನೇ ಪಂದ್ಯವನ್ನು ಗೆದ್ದು ಸರಣಿಯನ್ನು ವೈಟ್ ವಾಶ್ ಮಾಡಲು ಪ್ರಯತ್ನಿಸಿದರೆ, ಇತ್ತ ಆತಿಥೇಯ ಶ್ರೀಲಂಕಾ ತಂಡ ಮುಜುಗರವನ್ನು ತಪ್ಪಿಸಿಕೊಳ್ಳುವ ಸಲುವಾಗಿ ಶತಾಯಗತಾಯ ಗೆಲುವಿಗಾಗಿ ಹೋರಾಡಲಿದೆ.

ಇನ್ನು ಉಭಯ ತಂಡಗಳ ಮುಖಾಮುಖಿ ಬಗ್ಗೆ ಹೇಳುವುದಾದರೆ.. ಭಾರತ ಮತ್ತು ಶ್ರೀಲಂಕಾ ಟಿ20ಯಲ್ಲಿ ಇದುವರೆಗೆ 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ ಈ 31 ಪಂದ್ಯಗಳಲ್ಲಿ ಭಾರತ 21 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

ಹವಾಮಾನ ವರದಿ

ಜುಲೈ 30, 2024 ರಂದು, ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ತಾಪಮಾನವು ಸುಮಾರು 20-20 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಪಂದ್ಯದ ವೇಳೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಪಂದ್ಯದ ವೇಳೆ ವೇಗವಾಗಿ ಗಾಳಿ ಬೀಸಲಿದೆ ಎಂದು ವರದಿಯಾಗಿದೆ. ಹೀಗಾಗಿ ಎರಡನೇ ಟಿ20 ಪಂದ್ಯದಂತೆ ಮೂರನೇ ಟಿ20 ಪಂದ್ಯವೂ ಸಹ ಮಳೆಪೀಡಿತವಾಗಬಹುದು ಎಂದು ಊಹಿಸಲಾಗಿದೆ.

ಪಲ್ಲೆಕೆಲೆ ಪಿಚ್ ವರದಿ

ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಪಿಚ್‌ನಲ್ಲಿ ವೇಗದ ಬೌಲರ್‌ಗಳು ಆರಂಭದಲ್ಲಿ ಸ್ವಲ್ಪ ಸಹಾಯವನ್ನು ಪಡೆಯುವ ನಿರೀಕ್ಷೆಯಿದೆ. ಆದಾಗ್ಯೂ, ಬ್ಯಾಟ್ಸ್‌ಮನ್‌ಗಳು ಆರಂಭಿಕ ಓವರ್‌ಗಳನ್ನು ಎಚ್ಚರಿಕೆಯಿಂದ ಆಡಿದರೆ ನಂತರದ ಓವರ್‌ಗಳಲ್ಲಿ ಅವರು ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸಬಹುದು. ಅಲ್ಲದೆ ಎರಡನೇ ಇನಿಂಗ್ಸ್‌ನಲ್ಲಿ ಈ ಪಿಚ್‌ನಲ್ಲಿ ರನ್ ಗಳಿಸುವುದು ಸುಲಭವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈ ಪಿಚ್‌ನಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಬಹುದು. ಇಲ್ಲಿಯವರೆಗೆ ಇಲ್ಲಿ 25 ಟಿ20 ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟ್ ಮಾಡಿದ ತಂಡಗಳು 13 ಬಾರಿ ಗೆದ್ದಿದ್ದರೆ, 10 ಪಂದ್ಯಗಳಲ್ಲಿ, ನಂತರ ಬ್ಯಾಟಿಂಗ್ ಮಾಡಿದ ತಂಡಗಳು ಗೆದ್ದಿವೆ. ಎರಡು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ.

ಉಭಯ ಸಂಭಾವ್ಯ ತಂಡಗಳು

ಭಾರತ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರವಿ ಬಿಷ್ಣೋಯ್, ಖಲೀಲ್ ಅಹ್ಮದ್.

ಶ್ರೀಲಂಕಾ ಸಂಭಾವ್ಯ ತಂಡ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಕುಸಲ್ ಪೆರೆರಾ, ಕಮಿಂದು ಮೆಂಡಿಸ್, ಚರಿತ್ ಅಸಲಂಕ (ನಾಯಕ), ದಸುನ್ ಶನಕ, ವನಿಂದು ಹಸರಂಗ, ಮಹಿಷ್ ತಿಕ್ಷಣ, ಮತಿಶ ಪತಿರಾನ, ಅಸಿತ ಫೆರ್ನಾಂಡೋ, ದಿಲ್ಶನ್ ಮಧುಶಂಕ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?