IND vs SL: ಮೂರನೇ ಟಿ20 ಪಂದ್ಯಕ್ಕೂ ಮಳೆಯ ಆತಂಕ..! ಪಲ್ಲೆಕೆಲೆ ಪಿಚ್ ಯಾರಿಗೆ ಹೆಚ್ಚು ಸಹಕಾರಿ?

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಜುಲೈ 30 ರಂದು ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು ಮಾತ್ರವಲ್ಲದೆ ಸರಣಿಯನ್ನೂ ಗೆದ್ದಿದೆ.

IND vs SL: ಮೂರನೇ ಟಿ20 ಪಂದ್ಯಕ್ಕೂ ಮಳೆಯ ಆತಂಕ..! ಪಲ್ಲೆಕೆಲೆ ಪಿಚ್ ಯಾರಿಗೆ ಹೆಚ್ಚು ಸಹಕಾರಿ?
ಪಲ್ಲೆಕೆಲೆ ಹವಾಮಾನ ವರದಿ
Follow us
|

Updated on: Jul 29, 2024 | 10:41 PM

ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯ ಜುಲೈ 30 ರಂದು ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ 2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು ಮಾತ್ರವಲ್ಲದೆ ಸರಣಿಯನ್ನೂ ಗೆದ್ದಿದೆ. ಇದೀಗ ಟೀಂ ಇಂಡಿಯಾ ಮೂರನೇ ಪಂದ್ಯವನ್ನು ಗೆದ್ದು ಸರಣಿಯನ್ನು ವೈಟ್ ವಾಶ್ ಮಾಡಲು ಪ್ರಯತ್ನಿಸಿದರೆ, ಇತ್ತ ಆತಿಥೇಯ ಶ್ರೀಲಂಕಾ ತಂಡ ಮುಜುಗರವನ್ನು ತಪ್ಪಿಸಿಕೊಳ್ಳುವ ಸಲುವಾಗಿ ಶತಾಯಗತಾಯ ಗೆಲುವಿಗಾಗಿ ಹೋರಾಡಲಿದೆ.

ಇನ್ನು ಉಭಯ ತಂಡಗಳ ಮುಖಾಮುಖಿ ಬಗ್ಗೆ ಹೇಳುವುದಾದರೆ.. ಭಾರತ ಮತ್ತು ಶ್ರೀಲಂಕಾ ಟಿ20ಯಲ್ಲಿ ಇದುವರೆಗೆ 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ ಈ 31 ಪಂದ್ಯಗಳಲ್ಲಿ ಭಾರತ 21 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

ಹವಾಮಾನ ವರದಿ

ಜುಲೈ 30, 2024 ರಂದು, ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ತಾಪಮಾನವು ಸುಮಾರು 20-20 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಪಂದ್ಯದ ವೇಳೆ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಪಂದ್ಯದ ವೇಳೆ ವೇಗವಾಗಿ ಗಾಳಿ ಬೀಸಲಿದೆ ಎಂದು ವರದಿಯಾಗಿದೆ. ಹೀಗಾಗಿ ಎರಡನೇ ಟಿ20 ಪಂದ್ಯದಂತೆ ಮೂರನೇ ಟಿ20 ಪಂದ್ಯವೂ ಸಹ ಮಳೆಪೀಡಿತವಾಗಬಹುದು ಎಂದು ಊಹಿಸಲಾಗಿದೆ.

ಪಲ್ಲೆಕೆಲೆ ಪಿಚ್ ವರದಿ

ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಪಿಚ್‌ನಲ್ಲಿ ವೇಗದ ಬೌಲರ್‌ಗಳು ಆರಂಭದಲ್ಲಿ ಸ್ವಲ್ಪ ಸಹಾಯವನ್ನು ಪಡೆಯುವ ನಿರೀಕ್ಷೆಯಿದೆ. ಆದಾಗ್ಯೂ, ಬ್ಯಾಟ್ಸ್‌ಮನ್‌ಗಳು ಆರಂಭಿಕ ಓವರ್‌ಗಳನ್ನು ಎಚ್ಚರಿಕೆಯಿಂದ ಆಡಿದರೆ ನಂತರದ ಓವರ್‌ಗಳಲ್ಲಿ ಅವರು ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸಬಹುದು. ಅಲ್ಲದೆ ಎರಡನೇ ಇನಿಂಗ್ಸ್‌ನಲ್ಲಿ ಈ ಪಿಚ್‌ನಲ್ಲಿ ರನ್ ಗಳಿಸುವುದು ಸುಲಭವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈ ಪಿಚ್‌ನಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಬಹುದು. ಇಲ್ಲಿಯವರೆಗೆ ಇಲ್ಲಿ 25 ಟಿ20 ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟ್ ಮಾಡಿದ ತಂಡಗಳು 13 ಬಾರಿ ಗೆದ್ದಿದ್ದರೆ, 10 ಪಂದ್ಯಗಳಲ್ಲಿ, ನಂತರ ಬ್ಯಾಟಿಂಗ್ ಮಾಡಿದ ತಂಡಗಳು ಗೆದ್ದಿವೆ. ಎರಡು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ.

ಉಭಯ ಸಂಭಾವ್ಯ ತಂಡಗಳು

ಭಾರತ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರವಿ ಬಿಷ್ಣೋಯ್, ಖಲೀಲ್ ಅಹ್ಮದ್.

ಶ್ರೀಲಂಕಾ ಸಂಭಾವ್ಯ ತಂಡ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಕುಸಲ್ ಪೆರೆರಾ, ಕಮಿಂದು ಮೆಂಡಿಸ್, ಚರಿತ್ ಅಸಲಂಕ (ನಾಯಕ), ದಸುನ್ ಶನಕ, ವನಿಂದು ಹಸರಂಗ, ಮಹಿಷ್ ತಿಕ್ಷಣ, ಮತಿಶ ಪತಿರಾನ, ಅಸಿತ ಫೆರ್ನಾಂಡೋ, ದಿಲ್ಶನ್ ಮಧುಶಂಕ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ