IND vs SL: ಅತ್ಯಂತ ಹೀನಾಯ ಸೋಲುಂಡ ಶ್ರೀಲಂಕಾ: ಆದರೂ 2017 ರ ದಾಖಲೆ ಮುರಿಯಲಾಗಲಿಲ್ಲ..!

IND vs SL: ಶ್ರೀಲಂಕಾ ತಂಡವನ್ನು ಬೃಹತ್ ಅಂತರದಿಂದ ಟೆಸ್ಟ್​ನಲ್ಲಿ ಸೋಲಿಸಿದ ಹಿರಿಮೆ ಭಾರತ ತಂಡಕ್ಕೆ ಸಲ್ಲುತ್ತದೆ. ಆದರೆ ಅದು ಈ ಬಾರಿಯಲ್ಲ. ಬದಲಾಗಿ 2017 ರಲ್ಲಿ ಟೀಮ್ ಇಂಡಿಯಾ ನಾಗ್ಪುರ್​ ಟೆಸ್ಟ್​ನಲ್ಲಿ ಶ್ರೀಲಂಕಾ ವಿರುದ್ದ ಭರ್ಜರಿ ಜಯ ಸಾಧಿಸಿತ್ತು.

IND vs SL: ಅತ್ಯಂತ ಹೀನಾಯ ಸೋಲುಂಡ ಶ್ರೀಲಂಕಾ: ಆದರೂ 2017 ರ ದಾಖಲೆ ಮುರಿಯಲಾಗಲಿಲ್ಲ..!
IND vs SL
Follow us
| Updated By: ಝಾಹಿರ್ ಯೂಸುಫ್

Updated on: Mar 06, 2022 | 6:24 PM

ಭಾರತದ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ತಂಡವು ಅತ್ಯಂತ ಹೀನಾಯವಾಗಿ ಸೋತಿದೆ. ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ ನೀಡಿದ 574 ರನ್​ಗಳ ಟಾರ್ಗೆಟ್​ ಅನ್ನು ಬೆನ್ನತ್ತಿದ ಶ್ರೀಲಂಕಾ ಮೊದಲ ಇನಿಂಗ್ಸ್​ನಲ್ಲಿ ಕೇವಲ 174 ರನ್​ಗಳಿಗೆ ಸರ್ವಪತನ ಕಂಡಿತು. ಇತ್ತ ಫಾಲೋಆನ್​ ಪಡೆದ ಲಂಕಾ ಮತ್ತೆ 2ನೇ ಇನಿಂಗ್ಸ್ ಆರಂಭಿಸಿತು. ಈ ಬಾರಿ ಕೂಡ ಟೀಮ್ ಇಂಡಿಯಾ ಬೌಲರುಗಳ ಮುಂದೆ ಲಂಕಾ ಬ್ಯಾಟ್ಸ್​ಮನ್​ಗಳಿಗೆ ಕ್ರೀಸ್ ಕಚ್ಚಿ ನಿಲ್ಲಲಾಗಲಿಲ್ಲ. ಪರಿಣಾಮ ಮತ್ತೊಮ್ಮೆ 178 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 222 ರನ್​ಗಳ ಭರ್ಜರಿ ಜಯ ಸಾಧಿಸಿತು. ಆದರೆ ಇದು ಶ್ರೀಲಂಕಾ ತಂಡದ 2ನೇ ಅತ್ಯಂತ ಹೀನಾಯ ಸೋಲಾಗಿದೆ.

ಇತ್ತ ಶ್ರೀಲಂಕಾ ತಂಡವನ್ನು ಬೃಹತ್ ಅಂತರದಿಂದ ಟೆಸ್ಟ್​ನಲ್ಲಿ ಸೋಲಿಸಿದ ಹಿರಿಮೆ ಭಾರತ ತಂಡಕ್ಕೆ ಸಲ್ಲುತ್ತದೆ. ಆದರೆ ಅದು ಈ ಬಾರಿಯಲ್ಲ. ಬದಲಾಗಿ 2017 ರಲ್ಲಿ ಟೀಮ್ ಇಂಡಿಯಾ ನಾಗ್ಪುರ್​ ಟೆಸ್ಟ್​ನಲ್ಲಿ ಶ್ರೀಲಂಕಾ ವಿರುದ್ದ ಭರ್ಜರಿ ಜಯ ಸಾಧಿಸಿತ್ತು. ಅಂದು ನಾಯಕ ವಿರಾಟ್ ಕೊಹ್ಲಿ 213 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​​ನಲ್ಲಿ 6 ವಿಕೆಟ್ ನಷ್ಟಕ್ಕೆ 610 ರನ್​ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು.

ಈ ಬೃಹತ್ ಟಾರ್ಗೆಟ್​ ಬೆನ್ನತ್ತಿದ ಶ್ರೀಲಂಕಾ ಮೊದಲ ಇನಿಂಗ್ಸ್​ನಲ್ಲಿ 205 ಹಾಗೂ ಎರಡನೇ ಇನಿಂಗ್ಸ್​ನಲ್ಲಿ ಕೇವಲ 166 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 239 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಬೃಹತ್ ಅಂತರದ ಟೀಮ್ ಇಂಡಿಯಾದ ಗೆಲುವು ಶ್ರೀಲಂಕಾ ತಂಡದ ಅತ್ಯಂತ ಹೀನಾಯ ಸೋಲಾಗಿದೆ. ಈ ಸೋಲನ್ನು ಮೀರಿಸುವ ಅವಕಾಶ ಈ ಬಾರಿ ಹೊಂದಿದ್ದರೂ, 17 ರನ್​ಗಳನ್ನು ಹೆಚ್ಚುಗಳಿಸುವ ಮೂಲಕ ಶ್ರೀಲಂಕಾ 2017 ರ ಹೀನಾಯ ಸೋಲಿನ ದಾಖಲೆಯನ್ನೇ ಕಳಪೆ ದಾಖಲೆಯಾಗಿ ಮುಂದುವರೆಸಿದೆ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(IND vs SL: Biggest inngs defeats for Sri Lanka)

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ