AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಅತ್ಯಂತ ಹೀನಾಯ ಸೋಲುಂಡ ಶ್ರೀಲಂಕಾ: ಆದರೂ 2017 ರ ದಾಖಲೆ ಮುರಿಯಲಾಗಲಿಲ್ಲ..!

IND vs SL: ಶ್ರೀಲಂಕಾ ತಂಡವನ್ನು ಬೃಹತ್ ಅಂತರದಿಂದ ಟೆಸ್ಟ್​ನಲ್ಲಿ ಸೋಲಿಸಿದ ಹಿರಿಮೆ ಭಾರತ ತಂಡಕ್ಕೆ ಸಲ್ಲುತ್ತದೆ. ಆದರೆ ಅದು ಈ ಬಾರಿಯಲ್ಲ. ಬದಲಾಗಿ 2017 ರಲ್ಲಿ ಟೀಮ್ ಇಂಡಿಯಾ ನಾಗ್ಪುರ್​ ಟೆಸ್ಟ್​ನಲ್ಲಿ ಶ್ರೀಲಂಕಾ ವಿರುದ್ದ ಭರ್ಜರಿ ಜಯ ಸಾಧಿಸಿತ್ತು.

IND vs SL: ಅತ್ಯಂತ ಹೀನಾಯ ಸೋಲುಂಡ ಶ್ರೀಲಂಕಾ: ಆದರೂ 2017 ರ ದಾಖಲೆ ಮುರಿಯಲಾಗಲಿಲ್ಲ..!
IND vs SL
TV9 Web
| Edited By: |

Updated on: Mar 06, 2022 | 6:24 PM

Share

ಭಾರತದ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ತಂಡವು ಅತ್ಯಂತ ಹೀನಾಯವಾಗಿ ಸೋತಿದೆ. ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ ನೀಡಿದ 574 ರನ್​ಗಳ ಟಾರ್ಗೆಟ್​ ಅನ್ನು ಬೆನ್ನತ್ತಿದ ಶ್ರೀಲಂಕಾ ಮೊದಲ ಇನಿಂಗ್ಸ್​ನಲ್ಲಿ ಕೇವಲ 174 ರನ್​ಗಳಿಗೆ ಸರ್ವಪತನ ಕಂಡಿತು. ಇತ್ತ ಫಾಲೋಆನ್​ ಪಡೆದ ಲಂಕಾ ಮತ್ತೆ 2ನೇ ಇನಿಂಗ್ಸ್ ಆರಂಭಿಸಿತು. ಈ ಬಾರಿ ಕೂಡ ಟೀಮ್ ಇಂಡಿಯಾ ಬೌಲರುಗಳ ಮುಂದೆ ಲಂಕಾ ಬ್ಯಾಟ್ಸ್​ಮನ್​ಗಳಿಗೆ ಕ್ರೀಸ್ ಕಚ್ಚಿ ನಿಲ್ಲಲಾಗಲಿಲ್ಲ. ಪರಿಣಾಮ ಮತ್ತೊಮ್ಮೆ 178 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 222 ರನ್​ಗಳ ಭರ್ಜರಿ ಜಯ ಸಾಧಿಸಿತು. ಆದರೆ ಇದು ಶ್ರೀಲಂಕಾ ತಂಡದ 2ನೇ ಅತ್ಯಂತ ಹೀನಾಯ ಸೋಲಾಗಿದೆ.

ಇತ್ತ ಶ್ರೀಲಂಕಾ ತಂಡವನ್ನು ಬೃಹತ್ ಅಂತರದಿಂದ ಟೆಸ್ಟ್​ನಲ್ಲಿ ಸೋಲಿಸಿದ ಹಿರಿಮೆ ಭಾರತ ತಂಡಕ್ಕೆ ಸಲ್ಲುತ್ತದೆ. ಆದರೆ ಅದು ಈ ಬಾರಿಯಲ್ಲ. ಬದಲಾಗಿ 2017 ರಲ್ಲಿ ಟೀಮ್ ಇಂಡಿಯಾ ನಾಗ್ಪುರ್​ ಟೆಸ್ಟ್​ನಲ್ಲಿ ಶ್ರೀಲಂಕಾ ವಿರುದ್ದ ಭರ್ಜರಿ ಜಯ ಸಾಧಿಸಿತ್ತು. ಅಂದು ನಾಯಕ ವಿರಾಟ್ ಕೊಹ್ಲಿ 213 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​​ನಲ್ಲಿ 6 ವಿಕೆಟ್ ನಷ್ಟಕ್ಕೆ 610 ರನ್​ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು.

ಈ ಬೃಹತ್ ಟಾರ್ಗೆಟ್​ ಬೆನ್ನತ್ತಿದ ಶ್ರೀಲಂಕಾ ಮೊದಲ ಇನಿಂಗ್ಸ್​ನಲ್ಲಿ 205 ಹಾಗೂ ಎರಡನೇ ಇನಿಂಗ್ಸ್​ನಲ್ಲಿ ಕೇವಲ 166 ರನ್​ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 239 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಬೃಹತ್ ಅಂತರದ ಟೀಮ್ ಇಂಡಿಯಾದ ಗೆಲುವು ಶ್ರೀಲಂಕಾ ತಂಡದ ಅತ್ಯಂತ ಹೀನಾಯ ಸೋಲಾಗಿದೆ. ಈ ಸೋಲನ್ನು ಮೀರಿಸುವ ಅವಕಾಶ ಈ ಬಾರಿ ಹೊಂದಿದ್ದರೂ, 17 ರನ್​ಗಳನ್ನು ಹೆಚ್ಚುಗಳಿಸುವ ಮೂಲಕ ಶ್ರೀಲಂಕಾ 2017 ರ ಹೀನಾಯ ಸೋಲಿನ ದಾಖಲೆಯನ್ನೇ ಕಳಪೆ ದಾಖಲೆಯಾಗಿ ಮುಂದುವರೆಸಿದೆ.

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(IND vs SL: Biggest inngs defeats for Sri Lanka)

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ