AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಕ್ಲೀನ್ ಸ್ವೀಪ್ ಗೆಲುವು ಅನಿವಾರ್ಯ!

India vs Sri Lanka Test: ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಆಗಸ್ಟ್ 23 ರಂದು ಕೊಲಂಬೋದ ಎಸ್‌ಎಸ್‌ಸಿ ಮೈದಾನದಲ್ಲಿ ಜರುಗಲಿದೆ.

ಟೀಮ್ ಇಂಡಿಯಾಗೆ ಕ್ಲೀನ್ ಸ್ವೀಪ್ ಗೆಲುವು ಅನಿವಾರ್ಯ!
Team IndiaImage Credit source: BCCI
ಝಾಹಿರ್ ಯೂಸುಫ್
|

Updated on: Jul 28, 2026 | 3:11 PM

Share

ಆಗಸ್ಟ್ 15 ರಿಂದ ಆರಂಭವಾಗಲಿರುವ ಶ್ರೀಲಂಕಾ ಪ್ರವಾಸದ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಟೀಮ್ ಇಂಡಿಯಾ ಪಾಲಿಗೆ ಕೇವಲ ಮತ್ತೊಂದು ದ್ವಿಪಕ್ಷೀಯ ಸರಣಿಯಲ್ಲ. ಇದು ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ (WTC) ಫೈನಲ್ ಟಿಕೆಟ್ ನಿರ್ಧರಿಸುವ ಪ್ರಮುಖ ಕೊಂಡಿಯಾಗಿದೆ. ಹೀಗಾಗಿ, ಭಾರತ ತಂಡ ಈ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವುದು ಅನಿವಾರ್ಯವಾಗಿದೆ. ಇದಕ್ಕೆ ಪ್ರಮುಖ ಕಾರಣಗಳೇನು ಎಂಬುದರ ಸಂಪೂರ್ಣ ವಿಶ್ಲೇಷಣೆ ಇಲ್ಲಿದೆ.

WTC ಅಂಕಪಟ್ಟಿ ಮತ್ತು PCT ಲೆಕ್ಕಾಚಾರ:

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಟೀಮ್ ಇಂಡಿಯಾ ಒಟ್ಟು 18 ಪಂದ್ಯಗಳನ್ನಾಡಬೇಕಿದೆ. ಇದರಲ್ಲಿ ಈಗಾಗಲೇ 9 ಮ್ಯಾಚ್​ಗಳನ್ನಾಡಿದೆ. ಇನ್ನುಳಿದಿರುವುದು 9 ಪಂದ್ಯಗಳು ಮಾತ್ರ. ಈ 9 ಪಂದ್ಯಗಳು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ.

ಏಕೆಂದರೆ ಪ್ರಸ್ತುತ WTC ಅಂಕ ಪಟ್ಟಿಯಲ್ಲಿ ಭಾರತ ತಂಡವು 5ನೇ ಸ್ಥಾನದಲ್ಲಿದೆ. ಈ ಐದನೇ ಸ್ಥಾನದಿಂದ ಟಾಪ್-2 ಗೆ ಪ್ರವೇಶಿಸಬೇಕಿದ್ದರೆ 9 ಮ್ಯಾಚ್​ಗಳಲ್ಲಿ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಲೇಬೇಕು. ಇಲ್ಲಿ ಟೀಮ್ ಇಂಡಿಯಾದ ಎದುರಾಳಿಗಳು ಯಾರೆಂದರೆ…

  • ಶ್ರೀಲಂಕಾ ಪ್ರವಾಸ (ವಿದೇಶಿ ಸರಣಿ): 2 ಟೆಸ್ಟ್ ಪಂದ್ಯಗಳು.
  • ನ್ಯೂಝಿಲೆಂಡ್ ಪ್ರವಾಸ (ವಿದೇಶಿ ಸರಣಿ): 2 ಟೆಸ್ಟ್ ಪಂದ್ಯಗಳು.
  • ಆಸ್ಟ್ರೇಲಿಯಾ ವಿರುದ್ಧ (ತವರಿನ ಸರಣಿ): 5 ಟೆಸ್ಟ್ ಪಂದ್ಯಗಳು.

ಅಂದರೆ ಭಾರತ ತಂಡವು ಮುಂದಿನ 9 ಪಂದ್ಯಗಳಲ್ಲಿ 8 ಗೆಲುವು ಸಾಧಿಸಿದರೆ ನೇರವಾಗಿ ಫೈನಲ್​ಗೇರುವುದು ಖಚಿತ. ಒಂದು ವೇಳೆ 7 ಅಥವಾ 6 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಇತರೆ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

ಬಲಿಷ್ಠ ಎದುರಾಳಿಗಳು:

ಭಾರತ ತಂಡದ ಮುಂದಿನ ಎದುರಾಳಿಗಳು ಶ್ರೀಲಂಕಾ, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ. ಇಲ್ಲಿ ನ್ಯೂಝಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳಿಗೆ ಹೋಲಿಸಿದರೆ ಶ್ರೀಲಂಕಾ ತಂಡ ದುರ್ಬಲ ಎನ್ನಬಹುದು.

ಹೀಗಾಗಿ ಶ್ರೀಲಂಕಾ ವಿರುದ್ಧ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಫೈನಲ್ ಹಾದಿಯನ್ನು ಸುಗಮಗೊಳಿಸಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

ಒಂದು ವೇಳೆ ಭಾರತ 1-0 ಅಂತರದಿಂದ ಗೆದ್ದರೆ ಅಥವಾ ಸರಣಿ ಡ್ರಾವಾದರೆ, ಅಮೂಲ್ಯವಾದ PCT ಅಂಕಗಳನ್ನು ಕಳೆದುಕೊಳ್ಳಬೇಕಾಗುತ್ತದೆ.

ಇದರಿಂದಾಗಿ ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ವಿರುದ್ಧದ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಬಹುದು. ಇಲ್ಲಿ ಎರಡು ಬಲಿಷ್ಠ ದೇಶಗಳ ವಿರುದ್ಧ ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧ 5 ಮ್ಯಾಚ್​ಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವುದು ಅಂದುಕೊಂಡಷ್ಟು ಸುಲಭವಲ್ಲ.

ಆದ್ದರಿಂದ ಮುಂಬರುವ ಕಠಿಣ ಸವಾಸಲುಗಳನ್ನು ಎದುರಿಸುವ ಮುನ್ನ, ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆಯುವುದು ಟೀಮ್ ಇಂಡಿಯಾ ಮುಂದಿನ ದೊಡ್ಡ ಸವಾಲು.

ಇತ್ತ ಮೇಲ್ನೋಟಕ್ಕೆ ಭಾರತ ತಂಡ ಬಲಿಷ್ಠವಾಗಿ ಕಂಡರೂ, ಸಿಂಹಳೀಯರ ನಾಡಿನಲ್ಲಿ ಲಂಕಾ ಪಡೆಯನ್ನು ಹಗುರವಾಗಿ ಪರಿಗಣಿಸುವಂತಿಲ್ಲ. ಭಾರತ ಸತತ ಮೂರನೇ ಬಾರಿಗೆ WTC ಫೈನಲ್ ಗೇರಲು ಈ ಸರಣಿಯಲ್ಲಿ 2-0 ಕ್ಲೀನ್ ಸ್ವೀಪ್ ಸಾಧಿಸಲೇಬೇಕಾದ ಒತ್ತಡದಲ್ಲಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್​ಗೆ 14 ಆತಿಥ್ಯ ನಗರಗಳ ಪಟ್ಟಿ ರೆಡಿ!

ಶ್ರೀಲಂಕಾ ವಿರುದ್ಧದ ಈ ಸರಣಿಯ ಪ್ರದರ್ಶನ ಮತ್ತು ಫಲಿತಾಂಶ ಮುಂಬರುವ ಹೈ-ವೋಲ್ಟೇಜ್ ‘ಬಾರ್ಡರ್-ಗವಾಸ್ಕರ್’ ಸರಣಿಗೆ ದಿಕ್ಸೂಚಿಯಾಗುವುದಂತೂ ಖಚಿತ. ಹೀಗಾಗಿ ಟೀಮ್ ಇಂಡಿಯಾ ಲಂಕಾ ಪಡೆಯ ಸವಾಲನ್ನು ಹೇಗೆ ಎದುರಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ