AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳ ಹಾರ್ಟ್​ ಬ್ರೇಕ್! ನೋವಿನಲ್ಲೇ ಮೈದಾನ ತೊರೆದ ಶತಕ ವಂಚಿತ ಕೊಹ್ಲಿ; ವಿಡಿಯೋ

Virat Kohli, ICC World Cup 2023: ಗುರುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಕೊಹ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇದು ಸಾಧ್ಯವಾಗಲಿಲ್ಲ.

ಅಭಿಮಾನಿಗಳ ಹಾರ್ಟ್​ ಬ್ರೇಕ್! ನೋವಿನಲ್ಲೇ ಮೈದಾನ ತೊರೆದ ಶತಕ ವಂಚಿತ ಕೊಹ್ಲಿ; ವಿಡಿಯೋ
ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on:Nov 02, 2023 | 8:44 PM

Share

ನ್ಯೂಜಿಲೆಂಡ್ ವಿರುದ್ಧ 95 ರನ್​ಗಳಿಗೆ ಔಟ್! ಕೇವಲ 5 ರನ್​ಗಳಿಂದ ಶತಕ ಮಿಸ್. ಇದೀಗ ಶ್ರೀಲಂಕಾ ವಿರುದ್ಧ 88 ರನ್​ಗಳಿಗೆ ಔಟ್! 12 ರನ್​ಗಳಿಂದ ಶತಕ ಮಿಸ್. ಕಳೆದ ಹತ್ತೆ ಹತ್ತು ದಿನಗಳಲ್ಲಿ ಎರಡೆರಡು ಶತಕಗಳಿಂದ ವಂಚಿತರಾದ ವಿರಾಟ್ ಕೊಹ್ಲಿಯ (Virat Kohli) ನೋವಿನ ಕಥೆಯಿದು. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ತಂಡ ಸಂಕಷ್ಟದಲ್ಲಿದ್ದಾಗ ಗೆಲುವಿನ ಇನ್ನಿಂಗ್ಸ್ ಆಡಿದ್ದ ವಿರಾಟ್ ತಂಡವನ್ನು ಗೆಲುವಿನ ಸನಿಹಕ್ಕೆ ಬಂದು ವಿಕೆಟ್ ಕೈಚೆಲ್ಲಿದ್ದರು. ಹೀಗಾಗಿ ಅಂದು ಕೂಡ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಅತ್ಯಧಿಕ ಏಕದಿನ ಶತಕಗಳ ದಾಖಲೆಯನ್ನು ಸರಿಗಟ್ಟುವ ಅವಕಾಶ ಕೈತಪ್ಪಿತ್ತು. ಈಗ ಶ್ರೀಲಂಕಾ ವಿರುದ್ಧವೂ (India vs Sri Lanka) ಮೊದಲಿನಿಂದಲೂ ಅದ್ಭುತ ಬ್ಯಾಟಿಂಗ್ ಮಾಡಿದ ಕೊಹ್ಲಿ ಶತಕದಂಚಿನಲ್ಲಿ ಎಡವಿದರು. ಹೀಗಾಗಿ ಇಂದು ಸಹ ಕ್ರಿಕೆಟ್​ ದೇವರ ಶತಕಗಳ ದಾಖಲೆಯನ್ನು ಸರಿಗಟ್ಟುವ ಅವಕಾಶ ಕೊಹ್ಲಿಯ ಕೈತಪ್ಪಿತು.

12 ರನ್‌ಗಳಿಂದ ಶತಕ ವಂಚಿತ

ಗುರುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಕೊಹ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇದು ಸಾಧ್ಯವಾಗಲಿಲ್ಲ. ಕೊಹ್ಲಿ 12 ರನ್‌ಗಳಿಂದ ಶತಕ ವಂಚಿತರಾದರು. ಕೊಹ್ಲಿ ಆಡುತ್ತಿದ್ದ ರೀತಿಯನ್ನು ನೋಡಿದರೆ ಕೊಹ್ಲಿ, ಸಚಿನ್ ಅವರ ತವರಿನಲ್ಲೇ ಶತಕಗಳ ದಾಖಲೆಯನ್ನು ಸರಿಗಟ್ಟುತ್ತಾರೆ ಎಂದು ತೋರುತ್ತಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ದಿಲ್ಶನ್ ಮಧುಶಂಕ ಎಸೆದ 32ನೇ ಓವರ್​ನ ಮೂರನೇ ಎಸೆತದಲ್ಲಿ ಕೊಹ್ಲಿ ಔಟಾದರು.

View this post on Instagram

A post shared by ICC (@icc)

ಸ್ತಬ್ದಗೊಂಡ ಮೈದಾನ

ಮಧುಶಂಕ ಎಸೆದ ನಿಧಾನಗತಿಯ ಚೆಂಡನ್ನು ಅರ್ಥ ಮಾಡಿಕೊಳ್ಳದ ಕೊಹ್ಲಿ ಕವರ್ಸ್​ ಮೇಲೆ ಆಡುವ ಯತ್ನದಲ್ಲಿ ಪಾಥುಮ್ ನಿಸ್ಸಾಂಕಗೆ ಕ್ಯಾಚಿತ್ತು ಔಟಾದರು. ಆರಂಭದಿಂದಲೂ ಉತ್ತಮ ಲಯದಲ್ಲಿ ಕಾಣುತ್ತಿದ್ದ ಕೊಹ್ಲಿ ಅದೊಂದು ಸಣ್ಣತಪ್ಪಿನಿಂದ ವಿಕೆಟ್ ಕೈಚೆಲ್ಲಿದರು. ತಮ್ಮ ವಿಕೆಟ್ ಕಳೆದುಕೊಂಡಿದ್ದನ್ನು ಸ್ವತಃ ಕೊಹ್ಲಿಗೆ ನಂಬಲಾಗಲಿಲ್ಲ. ಹೀಗಾಗಿ ಮೈದಾನದಲ್ಲೇ ಕೊಂಚ ಸಮಯ ನಿಂತ ವಿರಾಟ್, ಭಾರದ ಮನಸಿನಿಂದ ಪೆವಿಲಿಯನತ್ತ ಹೆಜ್ಜೆಯಾಕಿದರು. ಇನ್ನೊಂದೆಡೆ ಕ್ರಿಕೆಟ್ ದೇವರ ದಾಖಲೆಯನ್ನು ಕೊಹ್ಲಿ ಈ ಪಂದ್ಯದಲ್ಲೇ ಮುರಿಯುತ್ತಾರೆ ಎಂದು ನಿರೀಕ್ಷಿಸಿದ್ದ ಅಭಿಮಾನಿಗಳಿಗೂ ಇದು ಶಾಕ್ ನೀಡಿದ್ದಲ್ಲದೆ, ಇಡೀ ಮೈದಾನವೇ ಒಂದು ಕ್ಷಣ ನಿಶಬ್ದವಾಯಿತು. ಇದೀಗ ಶತಕ ವಂಚಿತ ಕೊಹ್ಲಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಭಾವುಕ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಕೊಹ್ಲಿಗೂ ಸಿಕ್ಕಿತು ಜೀವದಾನ

ಈ ಪಂದ್ಯದಲ್ಲಿ ಕೊಹ್ಲಿಗೂ ಜೀವದಾನ ಸಿಕ್ಕಿತು. ಆರನೇ ಓವರ್‌ನ ಮೊದಲ ಎಸೆತದಲ್ಲಿ ದುಷ್ಮಂತ ಚಮೀರಾ ಕೊಹ್ಲಿಯ ಕ್ಯಾಚ್‌ ಕೈಬಿಟ್ಟಿದ್ದರು. ಈ ಬಾರಿಯೂ ಕೊಹ್ಲಿ ಸ್ಲೋ ಬಾಲ್​ನಲ್ಲಿ ಸಿಕ್ಕಿಬಿದ್ದಿದ್ದರು. ಆದರೆ ಚಮೀರ ಡೈವಿಂಗ್ ಮೂಲಕ ಕ್ಯಾಚ್ ಹಿಡಿಯಲು ಯತ್ನಿಸಿದರಾದರೂ ಯಶಸ್ವಿಯಾಗಲಿಲ್ಲ. ಇದಾದ ಬಳಿಕ ಶ್ರೀಲಂಕಾ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದ ಕೊಹ್ಲಿ ಭರ್ಜರಿ ಇನ್ನಿಂಗ್ಸ್ ಆಡಿದರೂ ಶತಕ ವಂಚಿತರಾದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:41 pm, Thu, 2 November 23

ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?
Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ
Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
ಮೈಮೇಲೆಲ್ಲಾ ಕಚ್ಚಿದ ಗಾಯ, ಡೇ ಕೇರ್ನಲ್ಲಿರುವ ಮಗುವಿನ ಸ್ಥಿತಿ ಏನಾಗಿದೆ ನೋಡಿ
ಮೈಮೇಲೆಲ್ಲಾ ಕಚ್ಚಿದ ಗಾಯ, ಡೇ ಕೇರ್ನಲ್ಲಿರುವ ಮಗುವಿನ ಸ್ಥಿತಿ ಏನಾಗಿದೆ ನೋಡಿ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ