IND vs SL: ರೋಹಿತ್, ಕೊಹ್ಲಿ ಸ್ಥಾನದಲ್ಲಿ ಕಣಕ್ಕಿಳಿಯುವವರು ಯಾರು?

India vs Sri Lanka: ಈ ಬಾರಿಯ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಮೂವರು ಆಟಗಾರರು ನಿವೃತ್ತಿ ಘೋಷಿಸಿದ್ದರು. ಅದರಂತೆ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಅವರ ಬದಲಿಯಾಗಿ ಕಣಕ್ಕಿಳಿಯುವವರು ಯಾರು ಎಂಬುದಕ್ಕೆ ಇಂದು ಸ್ಪಷ್ಟ ಉತ್ತರ ಸಿಗಲಿದೆ.

IND vs SL: ರೋಹಿತ್, ಕೊಹ್ಲಿ ಸ್ಥಾನದಲ್ಲಿ ಕಣಕ್ಕಿಳಿಯುವವರು ಯಾರು?
Virat Kohli-Rohit Sharma
Follow us
|

Updated on: Jul 27, 2024 | 11:24 AM

ಭಾರತ ಮತ್ತು ಶ್ರೀಲಂಕಾ ನಡುವಣ 3 ಪಂದ್ಯಗಳ ಟಿ20 ಸರಣಿಯು ಇಂದಿನಿಂದ (ಜುಲೈ 27) ಶುರುವಾಗಲಿದೆ. ಪಲ್ಲೆಕೆಲೆಯ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಸೂರ್ಯಕುಮಾರ್ ಯಾದವ್ ಭಾರತ ತಂಡದ ಖಾಯಂ ನಾಯಕರಾಗಿ ಪಾದಾರ್ಪಣೆ ಮಾಡಲಿದ್ದಾರೆ. ಹಾಗೆಯೇ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಕೂಡ ಪದಗ್ರಹಣ ಮಾಡಲಿರುವುದು ವಿಶೇಷ. ಹೀಗಾಗಿಯೇ ಇಂದಿನ ಪಂದ್ಯವು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಅದರಲ್ಲೂ ಟಿ20 ವಿಶ್ವಕಪ್​ ಬಳಿಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​​ಗೆ ನಿವೃತ್ತಿ ಘೋಷಿಸಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಸ್ಥಾನದಲ್ಲಿ ಕಣಕ್ಕಿಳಿಯುವವರು ಯಾರು ಎಂಬುದು ಸಹ ಇಂದು ನಿರ್ಧಾರವಾಗಲಿದೆ. ಏಕೆಂದರೆ ಇಬ್ಬರು ದಿಗ್ಗಜರಿಲ್ಲದೆ ನಡೆಯುತ್ತಿರುವ ಮೊದಲ ಪ್ರಮುಖ ಸರಣಿ ಇದಾಗಿದೆ. ಹೀಗಾಗಿ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿ ಸ್ಥಾನಗಳನ್ನು ತುಂಬುವ ಆಟಗಾರರು ಯಾರು ಎಂಬುದಕ್ಕೆ ಇಂದು ಉತ್ತರ ಸಿಗುವ ಸಾಧ್ಯತೆಯಿದೆ.

ರೋಹಿತ್ ಶರ್ಮಾ = ಶುಭ್​ಮನ್ ಗಿಲ್:

ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಆದರೆ ಇದೇ ವಿಶ್ವಕಪ್​ನಲ್ಲಿ ಶುಭ್​ಮನ್ ಗಿಲ್​ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ರೋಹಿತ್ ಶರ್ಮಾ ಹೊರಗುಳಿದಿರುವ ಕಾರಣ ಶುಭ್​ಮನ್ ಗಿಲ್ ಅವರಿಗೆ ಆರಂಭಿಕನ ಸ್ಥಾನ ಸಿಗುವುದು ಬಹುತೇಕ ಖಚಿತ. ಅಲ್ಲದೆ ಯಶಸ್ವಿ ಜೈಸ್ವಾಲ್ ಹಾಗೂ ಗಿಲ್ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚು.

ವಿರಾಟ್ ಕೊಹ್ಲಿ ಸ್ಥಾನದಲ್ಲಿ ಯಾರು?

ಟಿ20 ವಿಶ್ವಕಪ್​ ಅನ್ನು ಹೊರತುಪಡಿಸಿದರೆ, ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಪರ 3ನೇ ಕ್ರಮಾಂಕದಲ್ಲಿ ಆಡಿದ್ದೇ ಹೆಚ್ಚು. ಇದೀಗ ಕೊಹ್ಲಿ ನಿವೃತ್ತಿ ಘೋಷಿಸಿರುವ ಕಾರಣ ಸೂರ್ಯಕುಮಾರ್ ಯಾದವ್ 3ನೇ ಸ್ಥಾನಕ್ಕೆ ಬಡ್ತಿ ಪಡೆಯುವ ಸಾಧ್ಯತೆಯಿದೆ.

ಹಾಗೆಯೇ ವಿರಾಟ್ ಕೊಹ್ಲಿ ಸ್ಥಾನದಲ್ಲಿ ರಿಂಕು ಸಿಂಗ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗಲಿದೆ. ಈ ಹಿಂದೆ ಟಿ20 ವಿಶ್ವಕಪ್​ನಲ್ಲಿ ರಿಂಕು ಮೀಸಲು ಆಟಗಾರನಾಗಿ ಕಾಣಿಸಿಕೊಂಡಿದ್ದರು. ಇದೀಗ ಕೊಹ್ಲಿಯ ಅನುಪಸ್ಥಿಯಲ್ಲಿ ಮ್ಯಾಚ್ ಫಿನಿಶರ್​ ಸ್ಥಾನದಲ್ಲಿ ರಿಂಕು ಸಿಂಗ್ ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ಇದನ್ನೂ ಓದಿ: Maharaja Trophy T20: ಕರ್ನಾಟಕ ಟಿ20 ಲೀಗ್​ನ 6 ತಂಡಗಳು ಪ್ರಕಟ

ರವೀಂದ್ರ ಜಡೇಜಾ ಸ್ಥಾನ ತುಂಬುವವರು ಯಾರು?

ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ಕೂಡ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಅವರ ಜಾಗ ಕೂಡ ಖಾಲಿಯಿದೆ. ಅತ್ತ ಜಡೇಜಾ ಸ್ಪಿನ್ ಆಲ್​ರೌಂಡರ್ ಆಗಿದ್ದ ಕಾರಣ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪರಿಪೂರ್ಣ ಸ್ಪಿನ್ನರ್ ಆಗಿ ರವಿ ಬಿಷ್ಣೋಯ್​ಗೆ ಅವಕಾಶ ನೀಡಬಹುದು. ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ಶುಭ್​ಮನ್ ಗಿಲ್
  2. ಯಶಸ್ವಿ ಜೈಸ್ವಾಲ್
  3. ಸೂರ್ಯಕುಮಾರ್ ಯಾದವ್
  4. ರಿಷಭ್ ಪಂತ್
  5. ಹಾರ್ದಿಕ್ ಪಾಂಡ್ಯ
  6. ರಿಂಕು ಸಿಂಗ್
  7. ಶಿವಂ ದುಬೆ
  8. ಅಕ್ಷರ್ ಪಟೇಲ್
  9. ರವಿ ಬಿಷ್ಣೋಯ್
  10. ಅರ್ಷದೀಪ್ ಸಿಂಗ್
  11. ಮೊಹಮ್ಮದ್ ಸಿರಾಜ್
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್