AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಲಂಕಾ ವಿರುದ್ಧ 302 ರನ್​ಗಳ ಗೆಲುವು! ಅಧಿಕೃತವಾಗಿ ಸೆಮಿಫೈನಲ್​ಗೆ ಟೀಂ ಇಂಡಿಯಾ ಎಂಟ್ರಿ

IND vs SL, ICC World Cup 2023: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ವಿಶ್ವಕಪ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಬರೋಬ್ಬರಿ 302 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ ಅಧಿಕೃತವಾಗಿ ಏಕದಿನ ವಿಶ್ವಕಪ್​ನ ಸೆಮಿಫೈನಲ್​ಗೆ ಟಿಕೆಟ್ ಖಚಿತಪಡಿಸಿಕೊಂಡಿದೆ.

IND vs SL: ಲಂಕಾ ವಿರುದ್ಧ 302 ರನ್​ಗಳ ಗೆಲುವು! ಅಧಿಕೃತವಾಗಿ ಸೆಮಿಫೈನಲ್​ಗೆ ಟೀಂ ಇಂಡಿಯಾ ಎಂಟ್ರಿ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Nov 02, 2023 | 9:23 PM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ವಿಶ್ವಕಪ್ ICC World Cup 2023 ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಬರೋಬ್ಬರಿ 302 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ (Team India) ಅಧಿಕೃತವಾಗಿ ಏಕದಿನ ವಿಶ್ವಕಪ್​ನ ಸೆಮಿಫೈನಲ್​ಗೆ ಟಿಕೆಟ್ ಖಚಿತಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 357 ರನ್ ಕಲೆಹಾಕಿತು. ತಂಡದ ಪರ ವಿರಾಟ್ ಕೊಹ್ಲಿ 88, ಶುಭ್​ಮನ್ ಗಿಲ್ 92 ಮತ್ತು ಶ್ರೇಯಸ್ ಅಯ್ಯರ್ 82 ರನ್​ಗಳ ಶತಕ ವಂಚಿತ ಇನ್ನಿಂಗ್ಸ್ ಆಡಿದರು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಕೇವಲ 19.4 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 55 ರನ್​ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರೆ, ಇವರಲ್ಲದೆ ಮೊಹಮ್ಮದ್ ಸಿರಾಜ್ ಮೂರು, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು.

ಶತಕ ವಂಚಿತರಾದ ಮೂವರು

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಆರಂಭ ಕಳಪೆಯಾಗಿತ್ತು. ಇನಿಂಗ್ಸ್‌ನ ಎರಡನೇ ಎಸೆತದಲ್ಲಿ ನಾಯಕ ರೋಹಿತ್ ಶರ್ಮಾ ಅವರನ್ನು ದಿಲ್ಶಾನ್ ಮಧುಶಂಕ ಕ್ಲೀನ್ ಬೌಲ್ಡ್ ಮಾಡಿದರು. ಇದಾದ ಬಳಿಕ ವಿರಾಟ್ ಕೊಹ್ಲಿ 2ನೇ ವಿಕೆಟ್‌ಗೆ ಶುಭ್​ಮನ್ ಗಿಲ್ ಜೊತೆ 189 ರನ್ ಜೊತೆಯಾಟ ನಡೆಸಿದರು. ಮಧುಶಂಕ ಈ ಜೊತೆಯಾಟವನ್ನು ಮುರಿದರು. 92 ಎಸೆತಗಳಲ್ಲಿ 11 ಬೌಂಡರಿ ಮತ್ತು ಎರಡು ಸಿಕ್ಸರ್‌ ಸಹಿತ 92 ರನ್ ಸಿಡಿಸಿದ್ದ ಶುಭ್​ಮನ್ 8 ರನ್​ಗಳಿಂದ ಶತಕ ವಂಚಿತರಾದರು. ಇದಾದ ಬಳಿಕ ವಿರಾಟ್ ಕೂಡ ಶತಕ ವಂಚಿತರಾಗಿ ಮಧುಶಂಕಗೆ ಬಲಿಯಾದರು.

ಅಭಿಮಾನಿಗಳ ಹಾರ್ಟ್​ ಬ್ರೇಕ್! ನೋವಿನಲ್ಲೇ ಮೈದಾನ ತೊರೆದ ಶತಕ ವಂಚಿತ ಕೊಹ್ಲಿ; ವಿಡಿಯೋ

6 ವಿಕೆಟ್ ಪಡೆದ ಮಧುಶಂಕ

ಇದಾದ ನಂತರ ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ 46 ಎಸೆತಗಳಲ್ಲಿ 60 ರನ್‌ಗಳ ಅದ್ಭುತ ಜೊತೆಯಾಟ ನೀಡಿದರು. ರಾಹುಲ್ 19 ಎಸೆತಗಳಲ್ಲಿ 21 ರನ್ ಗಳಿಸಿ ಔಟಾದರೆ ಅವರನ್ನು ದುಷ್ಮಂತ ಚಮೀರಾ ವಜಾಗೊಳಿಸಿದರು. ಸೂರ್ಯಕುಮಾರ್ ಯಾದವ್ ಅವರಿಗೆ ವಿಶೇಷ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಅವರು ಒಂಬತ್ತು ಎಸೆತಗಳಲ್ಲಿ 12 ರನ್ ಗಳಿಸಿ ಔಟಾದರು. ಏತನ್ಮಧ್ಯೆ, ಶ್ರೇಯಸ್ 36 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ತಮ್ಮ ಏಕದಿನ ವೃತ್ತಿಜೀವನದ 16 ನೇ ಅರ್ಧಶತಕ ಪೂರೈಸಿದರು. ಅಂತಿಮವಾಗಿ ಮಧುಶಂಕ 56 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಆರು ಸಿಕ್ಸರ್‌ಗಳ ನೆರವಿನಿಂದ 82 ರನ್ ಸಿಡಿಸಿದ್ದ ಶ್ರೇಯಸ್​ರನ್ನು ಬಲಿ ಪಡೆದರು. ಮೊಹಮ್ಮದ್ ಶಮಿ ಎರಡು ರನ್ ಗಳಿಸಿ ಔಟಾದರೆ, ರವೀಂದ್ರ ಜಡೇಜಾ 24 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಒಂದು ಸಿಕ್ಸರ್ ಸಹಾಯದಿಂದ 35 ರನ್ ಗಳಿಸಿದರು. ಶ್ರೀಲಂಕಾ ಪರ ಮಧುಶಂಕ ಐದು ವಿಕೆಟ್ ಪಡೆದರೆ, ಚಮೀರಾ ಒಂದು ವಿಕೆಟ್ ಪಡೆದರು.

ಲಂಕಾ ಪೆವಿಲಿಯನ್ ಪರೇಡ್

ಭಾರತ ನೀಡಿದ 357 ರನ್​ಗಳ ಗುರಿ ಬೆನ್ನಟ್ಟಿದ ಲಂಕಾ ಪಡೆ ಆರಂಭದಲ್ಲೇ ತತ್ತರಿಸಿತು. ತಂಡದ ಮೂವರು ಆರಂಭಿಕರು ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಹೀಗಾಗಿ ತಂಡ ಕೇವಲ 16 ರನ್​ಗಳಿಗೆ ಪ್ರಮುಖ 6 ವಿಕೆಟ್ ಕಳೆದುಕೊಂಡು ಆರಂಭದಲ್ಲೇ ಸೋಲೊಪ್ಪಿಕೊಂಡಿತು. ಆ ನಂತರವೂ ತಂಡದ ಪರ ಯಾರೂ ಸಹ ಗೆಲುವಿಗಾಗಿ ಹೋರಾಟ ನಡೆಸಲಿಲ್ಲ. ಅಂತಿಮವಾಗಿ ಇಡೀ ಶ್ರೀಲಂಕಾ ತಂಡ 55 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ಕಸುನ್ ರಜಿತಾ ಗರಿಷ್ಠ 14 ರನ್ ಗಳಿಸಿದರು. ಇವರಲ್ಲದೆ ಮಹಿಶ್ ತೀಕ್ಷಣ ಮತ್ತು ಏಂಜೆಲೊ ಮ್ಯಾಥ್ಯೂಸ್ ತಲಾ 12 ರನ್ ಗಳಿಸಿದರು. ಶ್ರೀಲಂಕಾದ ಐವರು ಬ್ಯಾಟ್ಸ್‌ಮನ್‌ಗಳು ಶೂನ್ಯಕ್ಕೆ ಔಟಾದರು. ಅದೇ ಸಮಯದಲ್ಲಿ, ಎಂಟು ಬ್ಯಾಟ್ಸ್‌ಮನ್‌ಗಳು ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:51 pm, Thu, 2 November 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ