Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಲಂಕಾ ತಂಡಕ್ಕೆ ಎರಡೆರಡು ಆಘಾತ; ಸರಣಿಯಿಂದ ಹೊರಬಿದ್ದ ಮತ್ತೊಬ್ಬ ಸ್ಟಾರ್ ವೇಗಿ

IND vs SL: ಶ್ರೀಲಂಕಾ ತಂಡಕ್ಕೆ ಆಘಾತ ಎದುರಾಗಿದ್ದು, ಇಬ್ಬರು ಸ್ಟಾರ್ ವೇಗಿಗಳು ಇಂಜುರಿಯಿಂದಾಗಿ ಇಡೀ ಟಿ20 ಸರಣಿಯಿಂದಲೇ ಹೊರಬಿದ್ದಿದ್ದಾರೆ. ಈ ಮೊದಲು ವೇಗಿ ದುಶ್ಮಂತ ಚಮೀರಾ ಇಂಜುರಿಯಿಂದಾಗಿ ಸರಣಿಗೆ ಅಲಭ್ಯರಾಗಿದ್ದರು. ಇದೀಗ ಅವರ ಸಾಲಿಗೆ ಸೇರಿರುವ ಮತ್ತೊಬ್ಬ ವೇಗಿ ನುವಾನ್ ತುಷಾರ ಕೂಡ ಇಂಜುರಿಗೆ ತುತ್ತಾಗಿದ್ದು, ಸರಣಿಯಿಂದ ಹೊರಬಿದ್ದಿದ್ದಾರೆ.

IND vs SL: ಲಂಕಾ ತಂಡಕ್ಕೆ ಎರಡೆರಡು ಆಘಾತ; ಸರಣಿಯಿಂದ ಹೊರಬಿದ್ದ ಮತ್ತೊಬ್ಬ ಸ್ಟಾರ್ ವೇಗಿ
ನುವಾನ್ ತುಷಾರ
Follow us
ಪೃಥ್ವಿಶಂಕರ
|

Updated on:Jul 25, 2024 | 2:38 PM

ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಆರಂಭಕ್ಕೆ ಇನ್ನು ಎರಡು ದಿನ ಮಾತ್ರ ಉಳಿದಿವೆ. ಉಭಯ ತಂಡಗಳ ನಡುವಿನ ಮೊದಲ ಟಿ20 ಪಂದ್ಯ ಜುಲೈ 27 ರಂದು ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಡೆಯಲಿದೆ. ಈ ಪಂದ್ಯಕ್ಕೆ ಎರಡೂ ತಂಡಗಳು ಅಂತಿಮ ಸಿದ್ದತೆಯಲ್ಲಿ ತೊಡಗಿವೆ. ಆದರೆ ಈ ನಡುವೆ ಶ್ರೀಲಂಕಾ ತಂಡಕ್ಕೆ ಆಘಾತ ಎದುರಾಗಿದ್ದು, ಇಬ್ಬರು ಸ್ಟಾರ್ ವೇಗಿಗಳು ಇಂಜುರಿಯಿಂದಾಗಿ ಇಡೀ ಟಿ20 ಸರಣಿಯಿಂದಲೇ ಹೊರಬಿದ್ದಿದ್ದಾರೆ. ಈ ಮೊದಲು ವೇಗಿ ದುಷ್ಮಂತ ಚಮೀರಾ ಇಂಜುರಿಯಿಂದಾಗಿ ಸರಣಿಗೆ ಅಲಭ್ಯರಾಗಿದ್ದರು. ಇದೀಗ ಅವರ ಸಾಲಿಗೆ ಸೇರಿರುವ ಮತ್ತೊಬ್ಬ ವೇಗಿ ನುವಾನ್ ತುಷಾರ ಕೂಡ ಇಂಜುರಿಗೆ ತುತ್ತಾಗಿದ್ದು, ಸರಣಿಯಿಂದ ಹೊರಬಿದ್ದಿದ್ದಾರೆ. ಇದು ಲಂಕಾ ತಂಡದ ಸಂಕಷ್ಟವನ್ನು ಹೆಚ್ಚಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಶ್ರೀಲಂಕಾ ಕ್ರಿಕೆಟ್ ಮಂಡಳಿ, ‘ತಂಡದ ವೇಗದ ಬೌಲರ್ ನುವಾನ್ ತುಷಾರ ಅಭ್ಯಾಸದ ವೇಳೆ ಎಡಗೈ ಬೆರಳಿನ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಅವರು ಬೌಲಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ಗಾಯ ಗಂಭೀರವಾಗಿರುವ ಕಾರಣ ಅವರನ್ನು ಟಿ20 ಸರಣಿಯಿಂದ ಹೊರಗಿಡಲಾಗಿದ್ದು, ಇದರಿಂದಾಗಿ ಭಾರತ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿ ಆಟಗಾರನಾಗಿ ವೇಗಿ ದಿಲ್ಶನ್ ಮಧುಶಂಕ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ’ ಎಂದಿದೆ.

ಚಮೀರಾ ಕೂಡ ಅಲಭ್ಯ

ತುಷಾರಗೂ ಮೊದಲು ತಂಡದ ಅನುಭವಿ ವೇಗಿ ದುಷ್ಮಂತ ಚಮೀರಾ ಅನಾರೋಗ್ಯದ ಕಾರಣದಿಂದಾಗಿ ಟಿ20 ಸರಣಿಯಿಂದ ಹೊರಗುಳಿದಿದ್ದರು. ಈ ಕಾರಣದಿಂದಾಗಿ ಟಿ20 ಸರಣಿಗೆ ದುಷ್ಮಂತ ಚಮೀರಾ ಬದಲಿಗೆ ಅಸಿತ ಫೆರ್ನಾಂಡೋ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

ಟಿ20 ಸರಣಿ ವೇಳಾಪಟ್ಟಿ

  1. ಜುಲೈ 27, ಮೊದಲ ಟಿ20 ಪಂದ್ಯ
  2. ಜುಲೈ 28, ಎರಡನೇ ಟಿ20 ಪಂದ್ಯ
  3. ಜುಲೈ 30, ಮೂರನೇ ಟಿ20 ಪಂದ್ಯ

ಶ್ರೀಲಂಕಾ ನವೀಕೃತ ತಂಡ: ಚರಿತ್ ಅಸಲಂಕಾ (ನಾಯಕ), ಪಾತುಮ್ ನಿಸ್ಸಾಂಕ, ಕುಸಲ್ ಜನಿತ್ ಪೆರೇರಾ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್, ದಿನೇಶ್ ಚಾಂಡಿಮಲ್, ಕಮಿಂದು ಮೆಂಡಿಸ್, ದಸುನ್ ಶನಕ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ, ಚಾಮಿಂದು ವಿಕ್ರಮಸಿಂಗ, ಮಥೀಶ ಪತಿರಾನ, ದಿಲ್ಶನ್ ಮಧುಶಂಕ, ಅಸಿತ ಫೆರ್ನಾಂಡೋ, ಬಿನೂರ ಫೆರ್ನಾಂಡೋ.

ಟಿ20 ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Thu, 25 July 24

ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ