IND vs SL: 27 ವರ್ಷಗಳ ನಂತರ ಸರಣಿ ಸೋಲು; ರೋಹಿತ್ ಶರ್ಮಾ ದೂರಿದ್ದು ಯಾರನ್ನ? ವಿಡಿಯೋ ನೋಡಿ

IND vs SL: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡ ಅವಮಾನಕರ ಸರಣಿ ಸೋಲನ್ನು ಒಪ್ಪಿಕೊಳ್ಳಬೇಕಾಯಿತು. ಇದೀಗ ನಾಯಕ ರೋಹಿತ್ ಶರ್ಮಾ ಕೂಡ ತಂಡದ ಈ ನ್ಯೂನತೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಸ್ಪಿನ್ ಬೌಲರ್‌ಗಳ ವಿರುದ್ಧದ ಯೋಜನೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಬ್ಯಾಟ್ಸ್‌ಮನ್‌ಗಳಿಗೆ ಸಲಹೆ ನೀಡಿದ್ದಾರೆ.

IND vs SL: 27 ವರ್ಷಗಳ ನಂತರ ಸರಣಿ ಸೋಲು; ರೋಹಿತ್ ಶರ್ಮಾ ದೂರಿದ್ದು ಯಾರನ್ನ? ವಿಡಿಯೋ ನೋಡಿ
ರೋಹಿತ್ ಶರ್ಮಾ
Follow us
|

Updated on:Aug 08, 2024 | 3:05 PM

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ಕೊನೆಯ ಏಕದಿನ ಪಂದ್ಯವನ್ನು ಬರೋಬ್ಬರಿ 110 ರನ್​ಗಳಿಂದ ಸೋತ ರೋಹಿತ್ ಶರ್ಮಾ ಪಡೆ 27 ವರ್ಷಗಳ ನಂತರ ಮೊದಲ ಬಾರಿಗೆ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯನ್ನು ಸೋತ ಬೇಡದ ದಾಖಲೆಗೆ ಕೊರಳೊಡ್ಡಿದೆ. ಇಡೀ ಸರಣಿಯಲ್ಲಿ ತಂಡದ ಸೋಲಿಗೆ ಪ್ರಮುಖ ಕಾರಣವಾಗಿದ್ದು, ಬ್ಯಾಟಿಂಗ್ ವಿಭಾಗ. ಲಂಕಾದ ಸ್ಪಿನ್ ಬೌಲರ್​ಗಳ ಎದುರು ಬ್ಯಾಟಿಂಗ್ ಮರೆತವರಂತೆ ವರ್ತಿಸಿದ ಭಾರತದ ಬ್ಯಾಟ್ಸ್‌ಮನ್‌ಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಳ್ಳುವ ಕಾಯಕವನ್ನು ಆಡಿದ ಮೂರೂ ಪಂದ್ಯಗಳಲ್ಲೂ ಮಾಡಿದರು. ಹೀಗಾಗಿ ತಂಡ ಅವಮಾನಕರ ಸರಣಿ ಸೋಲನ್ನು ಒಪ್ಪಿಕೊಳ್ಳಬೇಕಾಯಿತು. ಇದೀಗ ನಾಯಕ ರೋಹಿತ್ ಶರ್ಮಾ ಕೂಡ ತಂಡದ ಈ ನ್ಯೂನತೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಸ್ಪಿನ್ ಬೌಲರ್‌ಗಳ ವಿರುದ್ಧದ ಯೋಜನೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಬ್ಯಾಟ್ಸ್‌ಮನ್‌ಗಳಿಗೆ ಸಲಹೆ ನೀಡಿದ್ದಾರೆ.

ಮೂರನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ನೀಡಿದ 249 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ 26.1 ಓವರ್‌ಗಳಲ್ಲಿ ಕೇವಲ 138 ರನ್‌ಗಳಿಗೆ ಆಲೌಟ್ ಆಯಿತು. ಮತ್ತೊಮ್ಮೆ ಭಾರತದ ಬ್ಯಾಟರ್​ಗಳನ್ನು ದುಸ್ವಪ್ನದಂತೆ ಕಾಡಿದ ಶ್ರೀಲಂಕಾದ ಸ್ಪಿನ್ನರ್‌ಗಳು ತಂಡದ ಸರಣಿ ಗೆಲುವಿಗೆ ಪ್ರಮುಖ ಕಾರಣರಾದರು. ಈ ಮೂಲಕ 1997ರ ನಂತರ ಭಾರತದ ವಿರುದ್ಧ ಏಕದಿನ ಸರಣಿ ಸೋತ ಐತಿಹಾಸಿಕ ಸಾಧನೆ ಮಾಡಿದರು.

ಪಂದ್ಯದ ಬಳಿಕ ರೋಹಿತ್ ಹೇಳಿದ್ದೇನು?

ಇನ್ನು ಸರಣಿ ಸೋತ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೆಷನ್​ನಲ್ಲಿ ಮಾತನಾಡಿದ ರೋಹಿತ್, ಇಡೀ ಸರಣಿಯಲ್ಲಿ ಸ್ಪಿನ್ ಬೌಲರ್​ಗಳ ವಿರುದ್ಧ ಭಾರತದ ಬ್ಯಾಟಿಂಗ್ ವಿಭಾಗ ವೈಫಲ್ಯ ಅನುಭವಿಸಿದ್ದರ ಬಗ್ಗೆ ಕೊಂಚ ಖಾರವಾಗಿಯೇ ಪ್ರತಿಕ್ರಿಯಿಸಿದರು. ‘ಇದು ಕಳವಳಕಾರಿ ವಿಷಯ ಎಂದು ನಾನು ಭಾವಿಸುವುದಿಲ್ಲ, ಆದರೆ ನಾವು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದೆ. ನಮ್ಮ ವೈಯಕ್ತಿಕ ಆಟದ ಯೋಜನೆಗಳ ಬಗ್ಗೆ ಗಂಭೀರವಾಗಿ ಚರ್ಚಿಸಬೇಕಿದೆ. ಈ ಸರಣಿಯಲ್ಲಿ ನಾವು ಖಂಡಿತವಾಗಿಯೂ ಒತ್ತಡಕ್ಕೆ ಒಳಗಾಗಿದ್ದೇವೆ. ಸರಣಿಯನ್ನು ಕಳೆದುಕೊಳ್ಳುವುದು ಪ್ರಪಂಚದ ಅಂತ್ಯವಲ್ಲ. ಆದರೆ ಇದರಿಂದ ಸಾಕಷ್ಟು ಕಲಿಯಲು ಅವಕಾಶ ಸಿಗುತ್ತದೆ.

ಹೌದು ನಾವು ಸರಣಿಯನ್ನು ಕಳೆದುಕೊಂಡಿದ್ದೇವೆ ಮತ್ತು ಸಕಾರಾತ್ಮಕ ಅಂಶಗಳಿಗಿಂತ ಹೆಚ್ಚಾಗಿ ನಾವು ಅನೇಕ ಕ್ಷೇತ್ರಗಳತ್ತ ಗಮನಹರಿಸಬೇಕು ಎಂದು ನಾನು ಭಾವಿಸುತ್ತೇನೆ. ಅಂತಹ ಸಂದರ್ಭಗಳು ಎದುರಾದಾಗ ನಾವು ಏನು ಮಾಡಬೇಕು ಎಂಬುದರ ಮೇಲೆ ಗಮನಹರಿಸಬೇಕು. ಇಡೀ ಸರಣಿಯಲ್ಲಿ ನಾವು ಉತ್ತಮ ಕ್ರಿಕೆಟ್ ಆಡಲಿಲ್ಲ, ಅದಕ್ಕಾಗಿಯೇ ನಾವು ಇಲ್ಲಿ ನಿಂತಿದ್ದೇವೆ. ಆದಾಗ್ಯೂ ಇಡೀ ಸರಣಿಯಲ್ಲಿ ಕೆಲವು ಸಕಾರಾತ್ಮಕ ಅಂಶಗಳಿವೆ. ಅದರಲ್ಲೂ ತಂಡದ ಸ್ಪಿನ್ನರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡಿದರು. ಇದರ ನಡುವೆ ಕೆಲವು ಬ್ಯಾಟ್ಸ್‌ಮನ್‌ಗಳು ಕೂಡ ಉತ್ತಮವಾಗಿ ಆಡಿದರುಎಂದು ರೋಹಿತ್ ಹೇಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Thu, 8 August 24

ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್