AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಗಿಲ್ ಗಿಲಕ್ಕು… ವಾಟ್ ಎ ಕ್ಯಾಚ್!

Sri Lanka vs India, 1st Test: ಗಾಲೆಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ದೇವದತ್ ಪಡಿಕ್ಕಲ್ ಅವರ ಭರ್ಜರಿ ಶತಕದ ನೆರವಿನೊಂದಿಗೆ ಮೊದಲ ಇನಿಂಗ್ಸ್​ನಲ್ಲಿ 462 ರನ್ ಕಲೆಹಾಕಿದೆ. ಇದೀಗ ಪ್ರಥಮ ಇನಿಂಗ್ಸ್ ಆರಂಭಿಸಿರುವ ಶ್ರೀಲಂಕಾ ಆರಂಭಿಕ ಆಘಾತಕ್ಕೆ ಒಳಗಾಗಿದೆ.

VIDEO: ಗಿಲ್ ಗಿಲಕ್ಕು... ವಾಟ್ ಎ ಕ್ಯಾಚ್!
Shubman Gill Image Credit source: Sonyliv.com
ಝಾಹಿರ್ ಯೂಸುಫ್
|

Updated on: Aug 17, 2026 | 12:36 PM

Share

ಗಾಲೆಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶುಭ್​ಮನ್ ಗಿಲ್ ಅತ್ಯದ್ಭುತ ಕ್ಯಾಚ್ ಹಿಡಿದು ಗಮನ ಸೆಳೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 462 ರನ್​ ಪೇರಿಸಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿರುವ ಶ್ರೀಲಂಕಾ ತಂಡಕ್ಕೆ ಟೀಮ್ ಇಂಡಿಯಾ ಬೌಲರ್​ಗಳು ಆರಂಭಿಕ ಆಘಾತ ನೀಡಿದ್ದಾರೆ.

ಗಿಲ್ ಗಿಲಕ್ಕು!

ಶ್ರೀಲಂಕಾ ತಂಡದ ಮೊದಲ ಇನ್ನಿಂಗ್ಸ್‌ನ 17ನೇ ಓವರ್‌ನಲ್ಲಿ  ಕುಲ್ದೀಪ್ ಯಾದವ್ ಎಸೆದ ಚೆಂಡನ್ನು ಶ್ರೀಲಂಕಾದ ಉಪನಾಯಕ ಕಮಿಂದು ಮೆಂಡಿಸ್ (14 ರನ್) ಎಕ್ಸ್‌ಟ್ರಾ ಕವರ್ ಕಡೆಗೆ ಬಲವಾಗಿ ಹೊಡೆದರು.

ಬೌಂಡರಿಯತ್ತ ಮುನ್ನುಗ್ಗುತ್ತಿದ್ದ ಆ ವೇಗದ ಚೆಂಡನ್ನು ತಡೆಯುವುದು ಅಸಾಧ್ಯ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ, ಅಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ನಾಯಕ ಶುಭ್‌ಮನ್ ಗಿಲ್ ತಮ್ಮ ಎಡಭಾಗಕ್ಕೆ ಅದ್ಭುತವಾಗಿ ಡೈವ್ ಮಾಡಿ, ಒಂದೇ ಕೈಯಿಂದ ನೆಲಕ್ಕೆ ತಾಗುವ ಮುನ್ನ ಚೆಂಡನ್ನು ಫ್ಲೈಯಿಂಗ್ ಕ್ಯಾಚ್ ಆಗಿ ಪರಿವರ್ತಿಸಿದರು.

ಇದನ್ನು ನೋಡಿದ ಕಾಮೆಂಟೇಟರ್‌ಗಳಾದ ಸಂಜಯ್ ಮಂಜ್ರೇಕರ್ ಮತ್ತು ಇಯಾನ್ ಬಿಷಪ್ ಆಶ್ಚರ್ಯಚಕಿತರಾದರು. “ಗಿಲ್ ಈ ಕ್ಯಾಚ್ ಹಿಡಿಯಲು ಯಾವುದೇ ಚಾನ್ಸ್ ಇರಲಿಲ್ಲ, ಇದು ನಂಬಲಾಗದ ಸಾಹಸ” ಎಂದು ಗುಣಗಾನ ಮಾಡಿದರು.

ಇದೀಗ ಗಿಲ್ ಗಿಲಕ್ಕು ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಟೀಮ್ ಇಂಡಿಯಾ ನಾಯಕನ ಅದ್ಭುತ ಫೀಲ್ಡಿಂಗ್​ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಶ್ರೀಲಂಕಾಗೆ ಆರಂಭಿಕ ಆಘಾತ:

ಭಾರತ ಮೊದಲ ಇನ್ನಿಂಗ್ಸ್: ದೇವದತ್ ಪಡಿಕ್ಕಲ್ ಅವರ ಆಕರ್ಷಕ 167 ರನ್ ಮತ್ತು ಕೆ.ಎಲ್. ರಾಹುಲ್ ಅವರ ಜವಾಬ್ದಾರಿಯುತ 82 ರನ್‌ಗಳ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 462 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ.

ಶ್ರೀಲಂಕಾ ಮೊದಲ ಇನ್ನಿಂಗ್ಸ್: ಭಾರತದ ಬೌಲಿಂಗ್ ದಾಳಿಗೆ ನಲುಗಿರುವ ಶ್ರೀಲಂಕಾ ಪಡೆ ಭೋಜನ ವಿರಾಮದ ವೇಳೆಗೆ 99 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿದೆ. ಇದೇ ರೀತಿಯ ಮಿಂಚಿನ ದಾಳಿ ಸಂಘಟಿಸಿದರೆ ಟೀಮ್ ಇಂಡಿಯಾ ಇಂದೇ ಶ್ರೀಲಂಕಾ ತಂಡವನ್ನು ಆಲೌಟ್ ಮಾಡಬಹುದು.  ಅಲ್ಲದೆ ಬೃಹತ್ ಮೊತ್ತದ ಮುನ್ನಡೆಯೊಂದಿಗೆ ಪಂದ್ಯದ ಮೇಲೆ ಹಿಡಿತ ಸಾಧಿಸಬಹುದು.

5 ವಿಕೆಟ್ ಪಡೆದವರು:

  • ಮಾನವ್ ಸುತಾರ್ (ಸ್ಪಿನ್ನರ್)- 2 ವಿಕೆಟ್​
  • ರವೀಂದ್ರ ಜಡೇಜಾ (ಸ್ಪಿನ್ನರ್)- 1 ವಿಕೆಟ್
  • ಕುಲ್ದೀಪ್ ಯಾದವ್ (ಸ್ಪಿನ್ನರ್)- 1 ವಿಕೆಟ್
  • ಮೊಹಮ್ಮದ್ ಸಿರಾಜ್ (ವೇಗಿ)- 1 ವಿಕೆಟ್

ಭಾರತ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್, ಧ್ರುವ ಜುರೆಲ್, ರವೀಂದ್ರ ಜಡೇಜಾ, ಮಾನವ್ ಸುತಾರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: 23 ಸೆಕೆಂಡ್ಸ್​​ನಲ್ಲಿ ಗೋಲು… ಹೊಸ ಇತಿಹಾಸ ಬರೆದ ರಿಕಾರ್ಡೊ!

ಶ್ರೀಲಂಕಾ ಪ್ಲೇಯಿಂಗ್ XI: ಲಹಿರು ಉದಾರ, ನಿಶಾನ್ ಮಧುಶಂಕ, ದಿನೇಶ್ ಚಂಡಿಮಲ್, ಕಮಿಂದು ಮೆಂಡಿಸ್, ಧನಂಜಯ ಡಿ ಸಿಲ್ವಾ (ನಾಯಕ), ಸೋನಾಲ್ ದಿನುಶಾ, ನಿರೋಶಾ ಡಿಕ್ವೆಲ್ಲಾ, ಕೇಶರ ನುವಂತ, ಪ್ರಭಾತ್ ಜಯಸೂರ್ಯ, ಲಹಿರು ಕುಮಾರ, ಅಸಿತ ಫೆರ್ನಾಂಡೊ.

Follow Us
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು