AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ ವಿರುದ್ಧದ ಏಕದಿನ ಸರಣಿಗೆ ಶ್ರೀಲಂಕಾ ತಂಡ ಪ್ರಕಟ; ಅಸಲಂಕಾಗೆ ನಾಯಕತ್ವ

IND vs SL: ಆಗಸ್ಟ್ 2 ರಿಂದ ಆರಂಭವಾಗಿರುವ ಏಕದಿನ ಸರಣಿಗೆ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂ ಆತಿಥ್ಯವಹಿಸುತ್ತಿದೆ. ಈ ಸರಣಿಗೆ ಈಗಾಗಲೇ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಇದೀಗ ಆತಿಥೇಯ ಶ್ರೀಲಂಕಾ ಕೂಡ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಇದರ ಜೊತೆಗೆ ನೂತನ ನಾಯಕನಾಗಿ ಚರಿತ ಅಸಲಂಕಾ ಅವರನ್ನು ಆಯ್ಕೆ ಮಾಡಿದೆ.

IND vs SL: ಭಾರತ ವಿರುದ್ಧದ ಏಕದಿನ ಸರಣಿಗೆ ಶ್ರೀಲಂಕಾ ತಂಡ ಪ್ರಕಟ; ಅಸಲಂಕಾಗೆ ನಾಯಕತ್ವ
ಶ್ರೀಲಂಕಾ ತಂಡ
ಪೃಥ್ವಿಶಂಕರ
|

Updated on:Jul 30, 2024 | 7:39 PM

Share

ಪ್ರಸ್ತುತ ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆತಿಥೇಯರ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಈಗಾಗಲೇ ಆಡಿರುವ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ. ಈ ಸರಣಿಯ ಕೊನೆಯ ಪಂದ್ಯ ಮಂಗಳವಾರ ಅಂದರೆ ಇಂದು ನಡೆಯುತ್ತಿದೆ. ಈ ಪಂದ್ಯದೊಂದಿಗೆ ಟಿ20 ಸರಣಿಗೆ ತೆರೆ ಬೀಳಲಿದೆ. ಆ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಆಗಸ್ಟ್ 2 ರಿಂದ ಆರಂಭವಾಗಿರುವ ಏಕದಿನ ಸರಣಿಗೆ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂ ಆತಿಥ್ಯವಹಿಸುತ್ತಿದೆ. ಈ ಸರಣಿಗೆ ಈಗಾಗಲೇ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಇದೀಗ ಆತಿಥೇಯ ಶ್ರೀಲಂಕಾ ಕೂಡ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಇದರ ಜೊತೆಗೆ ನೂತನ ನಾಯಕನಾಗಿ ಚರಿತ ಅಸಲಂಕಾ ಅವರನ್ನು ಆಯ್ಕೆ ಮಾಡಿದೆ.

ಚರಿತ್ ಅಸಲಂಕಾಗೆ ನಾಯಕತ್ವ

ಶ್ರೀಲಂಕಾದಲ್ಲಿ ಟಿ20 ತಂಡದೊಂದಿಗೆ ಏಕದಿನ ತಂಡಕ್ಕೂ ನಾಯಕನ ಬದಲಾವಣೆಯಾಗಿದೆ. ವನಿಂದು ಹಸರಂಗ ರಾಜೀನಾಮೆಯಿಂದ ತೆರವಾದ ಟಿ20 ತಂಡದ ನಾಯಕತ್ವಕ್ಕೆ ಚರಿತ್ ಅಸಲಂಕಾ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಏಕದಿನ ತಂಡದ ನಾಯಕತ್ವವಹಿಸಿಕೊಂಡಿದ್ದ ಕುಸಾಲ್ ಮೆಂಡಿಸ್ ಅವರನ್ನು ನಾಯಕತ್ವದಿಂದ ವಜಾಗೊಳಿಸಿದ್ದು, ಚರಿತ್ ಅಸಲಂಕಾಗೆ ಏಕದಿನದ ನಾಯಕತ್ವವನ್ನೂ ನೀಡಲಾಗಿದೆ. ಇದರರ್ಥ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಶ್ರೀಲಂಕಾ ತಂಡದ ನಾಯಕನಾಗಿ ಚರಿತ್ ಅಸಲಂಕಾ ಕಾಣಿಸಿಕೊಳ್ಳಲಿದ್ದಾರೆ.

ಉಭಯ ತಂಡಗಳು

ಏಕದಿನ ಸರಣಿಗೆ ಶ್ರೀಲಂಕಾ ತಂಡ: ಚರಿತ್ ಅಸಲಂಕಾ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಾಲ್ ಮೆಂಡಿಸ್, ಸದಿರ ಸಮರವಿಕ್ರಮ, ಕಮಿಂದು ಮೆಂಡಿಸ್, ಜೆನಿತ್ ಲಿಯಾಂಗೆ, ನಿಶಾನ್ ಮದುಶಂಕ, ವನಿಂದು ಹಸರಂಗ, ದುನಿತ್ ವೆಲ್ಲಲಗೆ, ಚಾಮಿಕ ಕರುಣಾರತ್ನ, ಮಹೇಶ್ ತೀಕ್ಷಣ, ಅಕಿಲ ದನಂಜಯ, ದಿಲ್ಶಾನ್ ಮಧುಶಂಕ, ಮಥೀಶ ಪತಿರಾನ, ಅಸಿತ ಫೆರ್ನಾಂಡೋ.

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

3 ಏಕದಿನ ಪಂದ್ಯ

ಭಾರತ ಮತ್ತು ಶ್ರೀಲಂಕಾ ನಡುವಿನ ಈ 3 ಪಂದ್ಯಗಳ ಸರಣಿಯು ಆಗಸ್ಟ್ 2 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 7 ರವರೆಗೆ ಮುಂದುವರೆಯಲಿದೆ. ಸರಣಿಯ ಎಲ್ಲಾ ಮೂರು ಪಂದ್ಯಗಳು ಕೊಲಂಬೊದ ಪ್ರಸಿದ್ಧ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿವೆ. ಕಳೆದ ವರ್ಷ ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟ್‌ನಲ್ಲಿ ಉಭಯ ತಂಡಗಳ ನಡುವಿನ ಮೊದಲ ಹಣಾಹಣಿ ಇದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:27 pm, Tue, 30 July 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ