AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ vs ಶ್ರೀಲಂಕಾ 2ನೇ ಟಿ20 ಯಾವಾಗ? ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ

Sri Lanka vs India: ಭಾರತ ಮತ್ತು ಶ್ರೀಲಂಕಾ ನಡುವೆ ಇಂದು 2 ಪಂದ್ಯಗಳು ನಡೆಯಲಿದೆ. ಮಧ್ಯಾಹ್ನ ನಡೆಯಲಿರುವ ಮಹಿಳಾ ಏಷ್ಯಾಕಪ್ ಫೈನಲ್​ನಲ್ಲಿ ಭಾರತ ಮತ್ತು ಶ್ರೀಲಂಕಾ ಮಹಿಳೆಯರ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ರಾತ್ರಿ ಜರುಗಲಿರುವ 2ನೇ ಟಿ20 ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ಪುರುಷರ ತಂಡಗಳು ಕಣಕ್ಕಿಳಿಯಲಿವೆ.

IND vs SL: ಭಾರತ vs ಶ್ರೀಲಂಕಾ 2ನೇ ಟಿ20 ಯಾವಾಗ? ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ
India vs Sri Lanka
ಝಾಹಿರ್ ಯೂಸುಫ್
|

Updated on: Jul 28, 2024 | 12:02 PM

Share

ಭಾರತ ಮತ್ತು ಶ್ರೀಲಂಕಾ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಶುರುವಾಗಿದೆ. ಪಲ್ಲೆಕೆಲೆಯ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 213 ರನ್ ಪೇರಿಸಿತ್ತು.

214 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 14 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 140 ರನ್ ಕಲೆಹಾಕಿತ್ತು. ಆದರೆ 15ನೇ ಓವರ್​ನಿಂದ ಪೆವಿಲಿಯನ್ ಪರೇಡ್ ನಡೆಸಿದ ಲಂಕಾ ಬ್ಯಾಟರ್​ಗಳು ಕೇವಲ 30 ರನ್​ಗಳಿಸುಷ್ಟರಲ್ಲಿ 9 ವಿಕೆಟ್ ಕೈಚೆಲ್ಲಿದರು. ಪರಿಣಾಮ ಟೀಮ್ ಇಂಡಿಯಾ 43 ರನ್​ಗಳ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

2ನೇ ಪಂದ್ಯ ಯಾವಾಗ?

ಭಾರತ ಮತ್ತು ಶ್ರೀಲಂಕಾ ನಡುವಣ 2ನೇ ಟಿ20 ಪಂದ್ಯ ಇಂದು (ಜುಲೈ 28) ನಡೆಯಲಿದೆ. ಪಲ್ಲೆಕೆಲೆ ಸ್ಟೇಡಿಯಂನಲ್ಲೇ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಹೀಗಾಗಿ ಲಂಕಾ ಪಾಲಿಗೆ ಇಂದಿನ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಶುರುವಾಗಲಿದೆ. ಹಾಗೆಯೇ ಟಾಸ್ ಪ್ರಕ್ರಿಯೆ 6.30 ಕ್ಕೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಶ್ರೀಲಂಕಾ ಸರಣಿಯ ಪಂದ್ಯಗಳು ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಸೋನಿ ಲೈವ್ ಆ್ಯಪ್​ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಕುಸಾಲ್ ಪೆರೆರಾ, ಕಮಿಂದು ಮೆಂಡಿಸ್, ಚರಿತ್ ಅಸಲಂಕಾ (ನಾಯಕ), ದಸುನ್ ಶಾನಕ, ವನಿಂದು ಹಸರಂಗ, ಮಹೀಶ್ ತೀಕ್ಷಣ, ಮಥೀಶ ಪತಿರಾಣ, ಅಸಿತ ಫೆರ್ನಾಂಡೊ, ದಿಲ್ಶನ್ ಮಧುಶಂಕ, ಅವಿಷ್ಕಾ ಫೆರ್ನಾಂಡೊ, ಬಿನೂರ ಫರ್ನಾಂಡೊ, ದಿನೇಶ್ ಚಂಡಿಮಲ್, ದುನಿತ್ ವೆಲ್ಲಲಾಗೆ, ಚಮಿಂದು ವಿಕ್ರಮಸಿಂಘೆ.

ಇದನ್ನೂ ಓದಿ: Suryakumar Yadav: ಸೂರ್ಯಕುಮಾರ್ ಯಾದವ್ ಅಬ್ಬರಕ್ಕೆ ಮ್ಯಾಕ್ಸ್​ವೆಲ್ ವಿಶ್ವ ದಾಖಲೆ ಉಡೀಸ್

ಭಾರತ ತಂಡ: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಖಲೀಲ್ ಅಹ್ಮದ್ , ಶಿವಂ ದುಬೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​