AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಶ್ರೀಲಂಕಾ ವಿರುದ್ದದ ಸರಣಿಯಿಂದ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಔಟ್..!

IND vs SL: ಈ ಸರಣಿಯಿಂದ ವಿಶ್ರಾಂತಿಯ ಕಾರಣ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಹೊರಗುಳಿದಿದ್ದಾರೆ. ಹಾಗೆಯೇ ಗಾಯದಿಂದ ಬಳಲುತ್ತಿರುವ ಕೆಎಲ್ ರಾಹುಲ್ ಕೂಡ ಸರಣಿಗೆ ಅಲಭ್ಯರಾಗಿದ್ದಾರೆ.

IND vs SL: ಶ್ರೀಲಂಕಾ ವಿರುದ್ದದ ಸರಣಿಯಿಂದ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಔಟ್..!
Team India
TV9 Web
| Edited By: |

Updated on: Feb 23, 2022 | 2:30 PM

Share

ಶ್ರೀಲಂಕಾ ವಿರುದ್ಧದ (India vs Sri Lanka) ಟಿ20 ಸರಣಿಯಿಂದ ಟೀಮ್ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ. ಈ ಮೊದಲು ಗಾಯದ ಕಾರಣ ದೀಪಕ್ ಚಹರ್ ಸರಣಿಯಿಂದ ಹೊರಬಿದ್ದಿದ್ದರು. ಇದೀಗ ಸರಣಿ ಆರಂಭಕ್ಕೆ ದಿನ ಮಾತ್ರ ಉಳಿದಿರುವಾಗ ಸೂರ್ಯಕುಮಾರ್ ಯಾದವ್ ಕೂಡ ಸರಣಿಗೆ ಅಲಭ್ಯರಾಗಿದ್ದಾರೆ. ಭಾನುವಾರ ಕೋಲ್ಕತ್ತಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಮತ್ತು ಅಂತಿಮ T20I ಪಂದ್ಯದ ಫೀಲ್ಡಿಂಗ್ ವೇಳೆ ಸೂರ್ಯಕುಮಾರ್ ಮೂಳೆ ಮುರಿತಕ್ಕೆ ಒಳಗಾಗಿದ್ದರು. ಮತ್ತೊಂದೆಡೆ ಬೌಲಿಂಗ್ ಸಮಯದಲ್ಲಿ ದೀಪಕ್ ಚಹರ್ ಉಳುಕಿನ ಸಮಸ್ಯೆ ಎದುರಿಸಿದ್ದರು. ಹೀಗಾಗಿ ಈ ಇಬ್ಬರು ಆಟಗಾರರು ಶ್ರೀಲಂಕಾ ವಿರುದ್ದದ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಭರ್ಜರಿ ಫಾರ್ಮ್​ನಲ್ಲಿದ್ದ ಸೂರ್ಯಕುಮಾರ್ ಯಾದವ್ ಗಾಯಗೊಂಡಿರುವುದು ಇದೀಗ ಟೀಮ್ ಇಂಡಿಯಾ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ಇದೀಗ ಲಂಕಾ ಸರಣಿಯಿಂದ ಹೊರಗುಳಿದಿರುವ ಕಾರಣ ಬದಲಿ ಆಟಗಾರ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಇನ್ನು ಈ ಸರಣಿಯಿಂದ ವಿಶ್ರಾಂತಿಯ ಕಾರಣ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಹೊರಗುಳಿದಿದ್ದಾರೆ. ಹಾಗೆಯೇ ಗಾಯದಿಂದ ಬಳಲುತ್ತಿರುವ ಕೆಎಲ್ ರಾಹುಲ್ ಕೂಡ ಸರಣಿಗೆ ಅಲಭ್ಯರಾಗಿದ್ದಾರೆ. ಇದೀಗ ಸೂರ್ಯಕುಮಾರ್ ಯಾದವ್ ಹಾಗೂ ದೀಪಕ್ ಚಹರ್ ಹೊರಬಿದ್ದಿದ್ದಾರೆ. ಹೀಗಾಗಿ ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ದ ಟೀಮ್ ಇಂಡಿಯಾ ಹೇಗೆ ಪ್ರದರ್ಶನ ನೀಡಲಿದೆ ಕಾದು ನೋಡಬೇಕಿದೆ.

ಟಿ20 ಸರಣಿಗೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ಯುಜುವೇಂದ್ರ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್

ಭಾರತ vs ಶ್ರೀಲಂಕಾ ಟಿ20 ಸರಣಿ ವೇಳಾಪಟ್ಟಿ:

ಫೆಬ್ರವರಿ 24 – ಮೊದಲ ಟಿ20, ಲಕ್ನೋ

ಫೆ. 26 – 2ನೇ ಟಿ20, ಧರ್ಮಶಾಲಾ

ಫೆ.27 – 3ನೇ ಟಿ20, ಧರ್ಮಶಾಲಾ

ಭಾರತ vs ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ:

ಮಾರ್ಚ್ 4-8 – ಮೊದಲ ಟೆಸ್ಟ್, ಮೊಹಾಲಿ

ಮಾರ್ಚ್ 12-16 – 2ನೇ ಟೆಸ್ಟ್, ಬೆಂಗಳೂರು (ಹಗಲು-ರಾತ್ರಿ)

ಇದನ್ನೂ ಓದಿ: World Record: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಯುವ ಬ್ಯಾಟ್ಸ್​ಮನ್

(IND vs SL: Suryakumar Yadav, Deepak Chahar Ruled Out of T20I Series)

Follow Us
Web contact
Web contact

TV9 Kannada

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ