AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL 3rd T20: ಸತತ 12ನೇ ಟಿ20 ಪಂದ್ಯ ಗೆದ್ದು ಬೀಗಿದ ಭಾರತ: ನಾಯಕ ರೋಹಿತ್​ರಿಂದ ದಾಖಲೆ ಮೇಲೆ ದಾಖಲೆ

India vs Sri Lanka T20: ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಬಳಿಕ ಇದೀಗ ಅಂದುಕೊಂಡಂತೆ ಶ್ರೀಲಂಕಾ ವಿರುದ್ಧದ ಸರಣಿಯನ್ನೂ 3-0 ಅಂತರದಿಂದ ವೈಟ್​ವಾಷ್ ಮಾಡಿ ಪರಾಕ್ರಮ ಮೆರೆದಿದೆ. ಈ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಖಾತೆಗೂ ದಾಖಲೆಗಳ ಪಟ್ಟಿ ಸೇರಿದೆ.

IND vs SL 3rd T20: ಸತತ 12ನೇ ಟಿ20 ಪಂದ್ಯ ಗೆದ್ದು ಬೀಗಿದ ಭಾರತ: ನಾಯಕ ರೋಹಿತ್​ರಿಂದ ದಾಖಲೆ ಮೇಲೆ ದಾಖಲೆ
IND vs SL 3rd T20
TV9 Web
| Updated By: Vinay Bhat|

Updated on: Feb 28, 2022 | 7:21 AM

Share

ಕಳೆದ ವರ್ಷ ಐಸಿಸಿ ಟಿ20 ವಿಶ್ವಕಪ್​ನಲ್ಲಿ ಲೀಗ್ ಹಂತದಲ್ಲಿ ನಿರ್ಗಮಿಸಿದ್ದೆ ತಡ ಭಾರತ ತಂಡ ನಂತರ ನಡೆದ ಒಂದೇ ಒಂದು ಟಿ20 ಪಂದ್ಯದಲ್ಲಿ ಸೋಲದೆ ದಾಖಲೆ ಬರೆಯುತ್ತಿದೆ. ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಬಳಿಕ ಇದೀಗ ಅಂದುಕೊಂಡಂತೆ ಶ್ರೀಲಂಕಾ (India vs Sri Lanka) ವಿರುದ್ಧದ ಸರಣಿಯನ್ನೂ 3-0 ಅಂತರದಿಂದ ವೈಟ್​ವಾಷ್ ಮಾಡಿ ಪರಾಕ್ರಮ ಮೆರೆದಿದೆ. ಈ ಮೂಲಕ ರೋಹಿತ್ ಶರ್ಮಾ (Rohit Sharma) ನಾಯಕತ್ವದ ಖಾತೆಗೂ ದಾಖಲೆಗಳ ಪಟ್ಟಿ ಸೇರಿದೆ. ಭಾನುವಾರ ಧರ್ಮಶಾಲದ ಹಿಮಾಚಲ ಪ್ರದೇಶ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಮೂರನೇ ಟಿ20 ಕದನದಲ್ಲೂ ಟೀಮ್ ಇಂಡಿಯಾ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಮಿಂಚಿ 6 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿತು. ಶ್ರೇಯಸ್ ಅಯ್ಯರ್ (Shreyas Iyer) ಬ್ಯಾಟಿಂಗ್​ನಲ್ಲಿ ಮತ್ತೊಮ್ಮೆ ಅಬ್ಬರಿಸಿ ಹ್ಯಾಟ್ರಿಕ್ ಅರ್ಧಶತಕ ಸಿಡಿಸಿದರೆ ಬೌಲರ್​ಗಳು ಹೆಚ್ಚು ರನ್ ಬಿಟ್ಟುಕೊಡದೆ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿ ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ ಪ್ರಶಸ್ತಿ ಬಾಜಿಕೊಂಡರು.

ಟಾಸ್ ಗೆದ್ದ ಬ್ಯಾಟಿಂಗ್‌ ಆಯ್ದುಕೊಂಡ ಶ್ರೀಲಂಕಾ ನಿರ್ಧಾರವನ್ನು ಭಾರತೀಯ ಬೌಲರ್​ಗಳು ಆರಂಭದಲ್ಲೇ ತಲೆಕೆಳಗಾಗಿಸಿದರು. ಸಿರಾಜ್‌ ಮೊದಲ ಓವರ್‌ನಲ್ಲೇ ಗುಣತಿಲಕ ವಿಕೆಟ್‌ ಕಿತ್ತರು. ಆವೇಶ್‌ ಖಾನ್‌ ಕೂಡ ಹಿಂದುಳಿಯಲಿಲ್ಲ. ತಮ್ಮ ಮೊದಲ ಓವರ್‌ನಲ್ಲೇ ಕಳೆದ ಪಂದ್ಯದ ಹೀರೋ ನಿಸ್ಸಂಕ ಅವರಿಗೆ ಪೆವಿಲಿಯನ್‌ ಹಾದಿ ತೋರಿಸಿದರು. ಆವೇಶ್‌ ತಮ್ಮ ದ್ವಿತೀಯ ಓವರ್‌ನಲ್ಲಿ ಚರಿತ ಅಸಲಂಕ ಅವರನ್ನು ಕೀಪರ್‌ ಸ್ಯಾಮ್ಸನ್‌ ಕೈಗೆ ಕ್ಯಾಚ್‌ ಕೊಡಿಸಿದರು. ಪವರ್‌ ಪ್ಲೇ ವೇಳೆ ಲಂಕಾ 3 ವಿಕೆಟಿಗೆ ಕೇವಲ 18 ರನ್‌ ಗಳಿಸಿ ಕುಂಟುತ್ತಿತ್ತು. ಈ ಅವಧಿಯಲ್ಲಿ ಭಾರತ ಎದುರಾಳಿಗೆ ಬಿಟ್ಟುಕೊಟ್ಟಿದ್ದು ಕೇವಲ ಒಂದು ಬೌಂಡರಿಯನ್ನಷ್ಟೆ. ಇದು ಭಾರತ ಪವರ್ ಪ್ಲೇನಲ್ಲಿ ಬಿಟ್ಟುಕೊಟ್ಟ ಅತಿ ಕಡಿಮೆ ರನ್ ಆಯಿತು.

ನಂತರ ರವಿ ಬಿಷ್ಣೋಯಿ ಕೂಡ ಮೊದಲ ಓವರ್‌ನಲ್ಲೇ ವಿಕೆಟ್‌ ಬೇಟೆಯಾಡಿದರು. ಜನಿತ್‌ ಲಿಯನಗೆ ಬೌಲ್ಡ್‌ ಆಗಿ ನಿರ್ಗಮಿಸಿದರು. ಅರ್ಧ ಹಾದಿ ಕ್ರಮಿಸುವಾಗ ಲಂಕಾ 43ಕ್ಕೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಸಂದರ್ಭ ತಂಡಕ್ಕೆ ಮತ್ತೆ ಆಸರೆಯಾಗಿದ್ದು 5ನೇ ವಿಕೆಟಿಗೆ ದಿನೇಶ್‌ ಚಂಡಿಮಾಲ್‌ ಮತ್ತು ನಾಯಕ ದಸುನ್‌ ಶಣಕ. ಇವರು ಒಂದಿಷ್ಟು ಪ್ರತಿರೋಧ ಒಡ್ಡಿದರು. ಚಂಡಿಮಾಲ್‌ 25 ರನ್ನಿಗೆ ನಿರ್ಗಮಿಸಿದರೂ ಶಣಕ ಕೊನೆಯ ಹಂತದಲ್ಲಿ ಮುನ್ನುಗ್ಗಿ ಬಾರಿಸಲಾರಂಭಿಸಿದರು. 15 ಓವರ್‌ ಅಂತ್ಯಕ್ಕೆ 5 ವಿಕೆಟ್‌ ನಷ್ಟಕ್ಕೆ 78 ರನ್‌ ಮಾಡಿದ್ದ ಶ್ರೀಲಂಕಾ, ಶಣಕ ಸಾಹಸದಿಂದ ಡೆತ್‌ ಓವರ್‌ಗಳಲ್ಲಿ ಯಾವುದೇ ವಿಕೆಟ್‌ ಕಳದುಕೊಳ್ಳದೆ 68 ರನ್‌ ಪೇರಿಸುವಲ್ಲಿ ಯಶಸ್ವಿಯಾಯಿತು.

6ನೇ ವಿಕೆಟಿಗೆ 47 ಎಸೆತಗಳಿಂದ 86 ರನ್‌ ಹರಿದು ಬಂತು. ಶಣಕ 38 ಎಸೆತ ಎದುರಿಸಿ ಅಜೇಯ 74 ರನ್‌ ಬಾರಿಸಿದರು. 9 ಬೌಂಡರಿ, 2 ಸಿಕ್ಸರ್‌ ಸಿಡಿಸಿ ಗೌರವಯುತ ಮೊತ್ತವೊಂದನ್ನು ದಾಖಲಿಸುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ಶ್ರೀಲಂಕಾ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 146 ರನ್ ಬಾರಿಸಿತು. ಭಾರತ ಪರ ಆವೇಶ್ 2 ವಿಕೆಟ್ ಕಿತ್ತರೆ, ಸಿರಾಜ್, ಹರ್ಷಲ್, ಕುಲ್ದೀಪ್ ಮತ್ತಿ ರವಿ ತಲಾ 1 ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಭಾರತ ತಂಡದ ಆರಂಭವೂ ಚೆನ್ನಾಗಿರಲಿಲ್ಲ. 51 ರನ್‌ಗಳಿಗೇ ಎರಡು ವಿಕೆಟ್ ಕಳೆದುಕೊಂಡಿತು. ಆದರೆ, ಅಮೋಘ ಲಯದಲ್ಲಿರುವ ಮುಂಬೈಕರ್ ಶ್ರೇಯಸ್ (ಅಜೇಯ 73; 45ಎ, 9ಬೌಂಡರಿ, 1ಸಿಕ್ಸರ್) ಮತ್ತೆ ಮಿಂಚಿದರು. ಎದುರಾಳಿ ಬೌಲರ್‌ಗಳ ಬೆವರಿಳಿಸಿದರು. ರವೀಂದ್ರ ಜಡೇಜ (ಅಜೇಯ22) ಕೂಡ ಮಿಂಚಿದರು. ಇದರಿಂದಾಗಿ ತಂಡವು 19 ಎಸೆತಗಳು ಬಾಕಿಯಿರುವಾಗಲೇ ಜಯಿಸಿತು. ಶ್ರೇಯಸ್ ಈ ಸರಣಿಯಲ್ಲಿ 200ಕ್ಕೂ ಹೆಚ್ಚು ರನ್‌ ಗಳಿಸಿದ ಸಾಧನೆ ಮಾಡಿದರು.

ಈ ಮೂಲಕ ಮತ್ತೊಂದು ವೈಟ್ ವಾಷ್ ಸಾಧನೆ ಮಾಡಿದ ಟೀಮ್ ಇಂಡಿಯಾ ಸತತ 12ನೇ ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ ಜಯ ಸಾಧಿಸಿತು. ಈ ಜಯದೊಂದಿಗೆ ಈ ಹಿಂದೆ ಸತತ 12 ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಅಫ್ಘಾನಿಸ್ತಾನದ ದಾಖಲೆಯನ್ನು ಟೀಮ್ ಇಂಡಿಯಾ ಸರಿದೂಗಿಸಿತು.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಸಚಿನ್ ಬಾಲ್ಯ ಸೇಹಿತ ವಿನೋದ್ ಕಾಂಬ್ಳಿಯನ್ನು ಬಂಧಿಸಿದ ಮುಂಬೈ ಪೊಲೀಸರು..!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ