AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ- ಲಂಕಾ 3ನೇ ಟಿ20 ಪಂದ್ಯ; ಬೆಂಚ್ ಕಾದವರಿಗೆ ಸಿಗುತ್ತಾ ಅವಕಾಶ?

IND vs SL: ಮೂರನೇ ಟಿ20 ಪಂದ್ಯಕ್ಕೆ ಗಂಭೀರ್ ಯಾವ ತಂಡವನ್ನು ಕಣಕ್ಕಿಳಿಸುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಏಕೆಂದರೆ ಇಡೀ ಸರಣಿಯಲ್ಲಿ ಅವಕಾಶ ಸಿಗದ ಕೆಲವು ಆಟಗಾರರು ತಂಡದಲ್ಲಿದ್ದಾರೆ. ಹೀಗಾಗಿ ಈಗಾಗಲೇ ಸರಣಿ ಗೆದ್ದಿರುವುದರಿಂದ ಬೆಂಚ್ ಕಾದ ಆಟಗಾರರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗುತ್ತಾ ಎಂಬುದು ಪ್ರಶ್ನೆಯಾಗಿದೆ.

IND vs SL: ಭಾರತ- ಲಂಕಾ 3ನೇ ಟಿ20 ಪಂದ್ಯ; ಬೆಂಚ್ ಕಾದವರಿಗೆ ಸಿಗುತ್ತಾ ಅವಕಾಶ?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Jul 29, 2024 | 6:19 PM

Share

ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಮಂಗಳವಾರ (ಜುಲೈ 30) ನಡೆಯಲಿದೆ. ಈಗಾಗಲೇ ಸರಣಿ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಕೊನೆಯ ಪಂದ್ಯವನ್ನೂ ಗೆದ್ದು ಆತಿಥೇಯರಿಗೆ ಕ್ಲೀನ್ ಸ್ವೀಪ್ ಶಾಕ್ ನೀಡುವ ಗುರಿ ಇಟ್ಟುಕೊಂಡಿದೆ. ಇತ್ತ ತವರಿನಲ್ಲಿ ಟಿ20 ಸರಣಿ ಸೋತಿರುವ ಶ್ರೀಲಂಕಾ ತಂಡ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು 2-1 ಅಂತರದಿಂದ ಕೊನೆಗೊಳಿಸಲು ಪ್ರಯತ್ನಿಸಲಿದೆ. ಇನ್ನು ಮೂರನೇ ಟಿ20 ಪಂದ್ಯಕ್ಕೆ ಗಂಭೀರ್ ಯಾವ ತಂಡವನ್ನು ಕಣಕ್ಕಿಳಿಸುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಏಕೆಂದರೆ ಇಡೀ ಸರಣಿಯಲ್ಲಿ ಅವಕಾಶ ಸಿಗದ ಕೆಲವು ಆಟಗಾರರು ತಂಡದಲ್ಲಿದ್ದಾರೆ. ಹೀಗಾಗಿ ಈಗಾಗಲೇ ಸರಣಿ ಗೆದ್ದಿರುವುದರಿಂದ ಬೆಂಚ್ ಕಾದ ಆಟಗಾರರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗುತ್ತಾ ಎಂಬುದು ಪ್ರಶ್ನೆಯಾಗಿದೆ.

ಸಂಜುಗೆ ಮತ್ತೊಂದು ಅವಕಾಶ?

ಟಾಪ್ ಆರ್ಡರ್ ವಿಚಾರಕ್ಕೆ ಬರುವುದಾದರೆ, ಅನಾರೋಗ್ಯಕ್ಕೀಡಾಗಿರುವ ಶುಭ್​ಮನ್ ಗಿಲ್, ಮೂರನೇ ಟಿ20 ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆಗಳಿವೆ. ಹೀಗಾಗಿ 2ನೇ ಟಿ20 ಪಂದ್ಯದಲ್ಲಿ ಅವರ ಬದಲಿಯಾಗಿ ತಂಡ ಸೇರಿಕೊಂಡಿದ್ದ ಸಂಜು ಸ್ಯಾಮ್ಸನ್​ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಗಳಿವೆ. ಆದರೆ ಎರಡನೇ ಟಿ20 ಪಂದ್ಯದಲ್ಲಿ ಸಂಜು ಸೊನ್ನೆ ಸುತ್ತಿರುವುದರಿಂದ ಅವರ ಸ್ಥಾನಕ್ಕೆ ಅಪಾಯ ಎದುರಾಗಿದೆ. ಅದಾಗ್ಯೂ ಟೀಂ ಮ್ಯಾನೇಜ್ಮೆಂಟ್ ಈಗಾಗಲೇ ಸಂಜುಗೆ ಮತ್ತೊಂದು ಅವಕಾಶ ನೀಡುವುದಾಗಿ ಹೇಳಿದೆ. ಈ ಕಾರಣಕ್ಕಾಗಿ, ಅವರು ಮತ್ತೊಮ್ಮೆ ಟೀಮ್ ಇಂಡಿಯಾದ ಆಡುವ ಹನ್ನೊಂದರಲ್ಲಿ ಕಾಣಿಸಿಕೊಳ್ಳಬಹುದು.

ಖಲೀಲ್​ಗೆ ಅವಕಾಶ ಸಿಗಬಹುದು

ಇದುವರೆಗಿನ ಈ ಸರಣಿಯಲ್ಲಿ ಮೊಹಮ್ಮದ್ ಸಿರಾಜ್ ಪ್ರದರ್ಶನ ವಿಶೇಷವೇನೂ ಆಗಿಲ್ಲ. ಎರಡು ಪಂದ್ಯಗಳಲ್ಲಿ ಕೇವಲ ಒಂದು ವಿಕೆಟ್ ಪಡೆದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಮ್ಯಾನೇಜ್​ಮೆಂಟ್ ಸಿರಾಜ್​ಗೆ ಈ ಪಂದ್ಯದಿಂದ ವಿಶ್ರಾಂತಿ ನೀಡಬಹುದು. ಅವರ ಜಾಗದಲ್ಲಿ ಮತ್ತೊಬ್ಬ ವೇಗಿ ಖಲೀಲ್ ಅಹ್ಮದ್‌ಗೆ ಅವಕಾಶ ನೀಡಬಹುದು.

ಸುಂದರ್​ಗೂ ಅವಕಾಶ?

ಇದುವರೆಗಿನ ಈ ಸರಣಿಯಲ್ಲಿ ಅಕ್ಷರ್ ಪಟೇಲ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಅಗತ್ಯ ಸಮಯದಲ್ಲಿ ಟೀಂ ಇಂಡಿಯಾಗೆ ವಿಕೆಟ್ ತದ್ದುಕೊಟ್ಟಿದ್ದಾರೆ. ಆದಾಗ್ಯೂ ಸರಣಿ ಕೈವಶವಾಗಿರುವುದರಿಂದ ಬೆಂಚ್ ಕಾಯ್ದಿರುವ ಸುಂದರ್​ಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಇದಕ್ಕೆ ಪೂರವಾಗಿ ಸುಂದರ್ ಅವರನ್ನು ಉತ್ತಮ ಆಲ್‌ರೌಂಡರ್ ಆಗಿ ರೂಪಿಸುವುದು ಆಡಳಿತ ಮಂಡಳಿಯ ಮಹತ್ವದ ಗುರಿಯಾಗಿರುವುದರಿಂದ ಸುಂದರ್​ಗೂ ಅವಕಾಶ ಸಿಗಬಹುದು.

ಭಾರತ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ರವಿ ಬಿಷ್ಣೋಯ್, ಖಲೀಲ್ ಅಹ್ಮದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?