AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಕೃನಾಲ್ ಪಾಂಡ್ಯ ವರ್ತನೆಯಲ್ಲಿ ಸಖತ್ ಬದಲಾವಣೆ! ಇದು ರಾಹುಲ್ ದ್ರಾವಿಡ್ ಎಫೆಕ್ಟ್ ಎಂದ ನೆಟ್ಟಿಗರು; ವಿಡಿಯೋ

IND vs SL: ಅಚಾನಕ್ಕಾಗಿ ನಡೆದ ತಪ್ಪಿಗೆ ಶ್ರೀಲಂಕಾದ ಕ್ರಿಕೆಟಿಗ ಚಾರಿತ್ ಅಸಲಂಕಾ ಅವರನ್ನು ಭಾರತೀಯ ಆಲ್‌ರೌಂಡರ್ ಕ್ರುನಾಲ್ ಪಾಂಡ್ಯ ತಬ್ಬಿಕೊಂಡು ಕ್ಷಮೆಯಾಚಿಸಿದರು.

IND vs SL: ಕೃನಾಲ್ ಪಾಂಡ್ಯ ವರ್ತನೆಯಲ್ಲಿ ಸಖತ್ ಬದಲಾವಣೆ! ಇದು ರಾಹುಲ್ ದ್ರಾವಿಡ್ ಎಫೆಕ್ಟ್ ಎಂದ ನೆಟ್ಟಿಗರು; ವಿಡಿಯೋ
ಕೃನಾಲ್ ಪಾಂಡ್ಯ
TV9 Web
| Updated By: ಪೃಥ್ವಿಶಂಕರ|

Updated on: Jul 19, 2021 | 7:44 PM

Share

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಅಪರೂಪದ ಘಟನೆ ನಡೆಯಿತು. ಅಚಾನಕ್ಕಾಗಿ ನಡೆದ ತಪ್ಪಿಗೆ ಶ್ರೀಲಂಕಾದ ಕ್ರಿಕೆಟಿಗ ಚಾರಿತ್ ಅಸಲಂಕಾ ಅವರನ್ನು ಭಾರತೀಯ ಆಲ್‌ರೌಂಡರ್ ಕ್ರುನಾಲ್ ಪಾಂಡ್ಯ ತಬ್ಬಿಕೊಂಡು ಕ್ಷಮೆಯಾಚಿಸಿದರು. ಈಗ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. 22 ನೇ ಓವರ್‌ನ ಮೂರನೇ ಎಸೆತದಲ್ಲಿ ಕ್ರುನಾಲ್ ಪಾಂಡ್ಯ ಹಾಗೂ ಅಸಲಂಕಾ ನಡುವೆ ಈ ಘಟನೆ ನಡೆಯಿತು.

ಸ್ಟ್ರೈಕ್‌ನಲ್ಲಿದ್ದ ಡಿಸಿಲ್ವಾ ಕೃನಾಲ್ ಎಸೆದ ಚೆಂಡನ್ನು ಬಲವಾಗಿ ಹೊಡೆದರು. ಕ್ರುನಾಲ್ ನೇರವಾಗಿ ಬಂದ ಚೆಂಡನ್ನು ಹಿಡಿಯಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ನಾನ್​ ಸ್ಟ್ರೈಕರ್​ನಲ್ಲಿದ್ದ ಅಸಲಂಕಾ ಅವರಿಗೆ ಕೃನಾಲ್ ಡಿಕ್ಕಿ ಹೊಡೆದರು. ಕೂಡಲೇ ನೆಲದಿಂದ ಕ್ರುನಾಲ್ ಎದ್ದು ಅಸಲಂಕನನ್ನು ತಬ್ಬಿಕೊಂಡರು. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಕ್ರುನಾಲ್ ಪಾಂಡ್ಯ ಅವರ ಕ್ರೀಡಾ ಮನೋಭಾವಕ್ಕಾಗಿ ಟ್ವಿಟರ್ ವೇದಿಕೆಯಲ್ಲಿ ಅನೇಕ ಕ್ರಿಕೆಟಿಗರು ಪ್ರಶಂಸಿಸಿದ್ದಾರೆ. ಇದು ರಾಹುಲ್ ದ್ರಾವಿಡ್ ಪರಿಣಾಮ ಎಂದು ಇನ್ನೂ ಕೆಲವರು ಹೇಳಿಕೊಂಡಿದ್ದಾರೆ. ರಾಹುಲ್ ದ್ರಾವಿಡ್ ಪ್ರಸ್ತುತ ಟೀಂ ಇಂಡಿಯಾದ ತರಬೇತುದಾರರಾಗಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯ.

ಕ್ರುನಾಲ್ ಭಾರತೀಯ ಶಿಬಿರದ ಪ್ರಮುಖ ಬೌಲರ್ ಕ್ರುನಾಲ್ ತಮ್ಮ 10 ಓವರ್ಗಳ ಕೋಟಾವನ್ನು ಆರ್ಥಿಕ ದರದಲ್ಲಿ ಪೂರ್ಣಗೊಳಿಸಿದರು. ಪ್ರತಿ ಓವರ್‌ಗೆ ಕೇವಲ ಮೂರು ರನ್ ನೀಡಿದರು. ಕೇವಲ 26 ರನ್ ಬಿಟ್ಟುಕೊಟ್ಟು ಒಂದು ವಿಕೆಟ್ ಪಡೆದರು. ಇದು ಆತಿಥೇಯ ತಂಡವನ್ನು ಬ್ಯಾಕ್‌ಫೂಟ್‌ಗೆ ತಳ್ಳಿತು. ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಒಂಬತ್ತು ವಿಕೆಟ್‌ಗೆ 262 ರನ್ ಗಳಿಸಿತು. ಇದಕ್ಕೆ ಪ್ರತ್ಯುತ್ತರವಾಗಿ ಭಾರತ ಮೂರು ವಿಕೆಟ್‌ಗಳ ನಷ್ಟಕ್ಕೆ 36.4 ಓವರ್‌ಗಳಲ್ಲಿ ಗುರಿ ತಲುಪಿತು. ಭಾರತ ಪರ ನಾಯಕ ಶಿಖರ್ ಧವನ್ ಅಜೇಯ 86 ರನ್ ಗಳಿಸಿದರೆ, ಇಶಾಂತ್ ಕಿಶನ್ 59 ರನ್ ಗಳಿಸಿದರು. ಕುಲದೀಪ್ ಎರಡು ವಿಕೆಟ್ ಪಡೆದರು.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು