AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 3 ವರ್ಷಗಳಲ್ಲಿ ಎರಡನೇ ಸಲ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಟೀಂ ಇಂಡಿಯಾದ ತ್ರಿಮೂರ್ತಿಗಳು..!

IND vs SL: 14 ಜುಲೈ 2022 ರಂದು ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಈ ಮೂವರೂ ಕೊನೆಯ ಬಾರಿ ಒಟ್ಟಿಗೆ ಆಡಿದ್ದರು.

IND vs SL: 3 ವರ್ಷಗಳಲ್ಲಿ ಎರಡನೇ ಸಲ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಟೀಂ ಇಂಡಿಯಾದ ತ್ರಿಮೂರ್ತಿಗಳು..!
ಟೀಂ ಇಂಡಿಯಾ
TV9 Web
| Edited By: |

Updated on:Jan 08, 2023 | 6:15 PM

Share

ಭಾರತ ಮತ್ತು ಶ್ರೀಲಂಕಾ (India Vs Sri Lanka) ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಅಂತ್ಯಗೊಂಡಿದ್ದು, ಉಭಯ ದೇಶಗಳ ನಡುವಿನ ಏಕದಿನ ಸರಣಿ ಜನವರಿ 10 ರಿಂದ ಆರಂಭವಾಗಲಿದೆ. ಏಕದಿನ ಸರಣಿಯೂ 3 ಪಂದ್ಯಗಳನ್ನು ಒಳಗೊಂಡಿದ್ದು, ಈ ಸರಣಿಯೊಂದಿಗೆ ಟೀಂ ಇಂಡಿಯಾ (Team India) ಈ ವರ್ಷ ನಡೆಯಲ್ಲಿರುವ ಏಕದಿನ ವಿಶ್ವಕಪ್​ನ ತಯಾರಿ ಆರಂಭಿಸಲಿದೆ.​ ಗುವಾಹಟಿಯಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಏಕೆಂದರೆ 3 ವರ್ಷಗಳಲ್ಲಿ ಎರಡನೇ ಬಾರಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ (Rohit Sharma , Virat Kohli and Jasprit Bumrah) ಒಟ್ಟಿಗೆ ಏಕದಿನ ಪಂದ್ಯಗಳನ್ನು ಆಡಲಿದ್ದಾರೆ. ಈ ಮೂವರು ಆಟಗಾರರು ಒಂದಿಲ್ಲೊಂದು ಕಾರಣದಿಂದಾಗಿ ಕಳೆದ ಮೂರು ವರ್ಷಗಳಲ್ಲಿ ಒಟ್ಟಾಗಿ ಒಂದಕ್ಕಿಂತ ಹೆಚ್ಚು ಪಂದ್ಯಗಳನ್ನು ಆಡಲು ಸಾಧ್ಯವಾಗಿರಲಿಲ್ಲ. ಆದರೆ ಲಂಕಾ ವಿರುದ್ಧದ ಸರಣಿಯಲ್ಲಿ ಈ ಮೂವರು ದಿಗ್ಗಜರು ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ.

14 ಜುಲೈ 2022 ರಂದು ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಈ ಮೂವರೂ ಕೊನೆಯ ಬಾರಿ ಒಟ್ಟಿಗೆ ಆಡಿದ್ದರು. ಅದಕ್ಕೂ ಮೊದಲು, 2020 ರ ಜನವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ವಾಂಖೆಡೆಯಲ್ಲಿ ನಡೆದ ಪಂದ್ಯಲ್ಲಿ ಮೂವರು ಒಟ್ಟಿಗೆ ಆಡಿದ್ದರು. ಅದರಲ್ಲೂ ಈ ಪಂದ್ಯದ ವಿಶೇಷವೆನೆಂದರೆ, 2019ರ ಸೆಪ್ಟೆಂಬರ್​ನಲ್ಲಿ ಇಂಜುರಿಗೆ ತುತ್ತಾಗಿದ್ದ ಬುಮ್ರಾ ಕೆಲವು ತಿಂಗಳುಗಳ ಕಾಲ ಟೀಂ ಇಂಡಿಯಾದಿಂದ ಹೊರಗಿದ್ದರು. ಆದರೆ 2020 ರಲ್ಲಿ ಮತ್ತೆ ತಂಡಕ್ಕೆ ಮರಳಿದ್ದ ಬುಮ್ರಾ, ಕೊಹ್ಲಿ ಹಾಗೂ ರೋಹಿತ್ ಜೊತೆಗೂಡಿ ಆಸ್ಟ್ರೇಲಿಯಾ ವಿರುದ್ಧ ಪಂದ್ಯವನ್ನಾಡಿದ್ದರು.

IND vs SL: ಬಾಲ್ ಅಲ್ಲ, ಬುಲೆಟ್; ಉಮ್ರಾನ್ ಬೆಂಕಿ ಚೆಂಡಿಗೆ ಮೀಟರ್ ದೂರ ಹಾರಿದ ಸ್ಟಂಪ್! ವಿಡಿಯೋ ನೋಡಿ

ಸತತ ಇಂಜುರಿಗೆ ತುತ್ತಾಗಿದ್ದ ಬುಮ್ರಾ

ಅದೊಂದು ಪಂದ್ಯವನ್ನಾಡಿದ ಬಳಿಕ ಮತ್ತೆ ಇಂಜುರಿಗೊಳಗಾದ ಬುಮ್ರಾ ಅವರನ್ನು 2021 ರ ಜನವರಿಯಲ್ಲಿ ಮತ್ತೆ ತಂಡದಿಂದ ಕೈಬಿಡಲಾಯಿತು. ಇದರ ನಂತರ, ಬುಮ್ರಾ ಮತ್ತೆ ತಂಡಕ್ಕೆ ಎಂಟ್ರಿಕೊಟ್ಟಿದ್ದು, 2022ರ ಜುಲೈನಲ್ಲಿ. ಇಂಗ್ಲೆಂಡ್​ನ ಈ ಪ್ರವಾಸದಲ್ಲಿ ರೋಹಿತ್ ಕೊಹ್ಲಿಯೊಂದಿಗೆ 4 ಪಂದ್ಯಗಳನ್ನು ಆಡಿದ ಬುಮ್ರಾ ಬೆನ್ನಿನಲ್ಲಿ ಕಾಣಿಸಿಕೊಂಡ ನೋವಿನಿಂದಾಗಿ ಮತ್ತೆ ತಂಡದಿಂದ ಹೊರಗುಳಿಯಬೇಕಾಯಿತು. ಆ ಬಳಿಕ 2022 ರ ಸೆಪ್ಟೆಂಬರ್​ನಲ್ಲಿ ಚೇತರಿಸಿಕೊಂಡು ತಂಡಕ್ಕೆ ಮರಳಿದ ಬುಮ್ರಾ, ಆಸ್ಟ್ರೇಲಿಯಾ ವಿರುದ್ಧ 2 ಟಿ20 ಪಂದ್ಯಗಳನ್ನು ಆಡಿ ಮತ್ತೆ ಇಂಜುರಿಗೊಂಡರು. ಇದೀಗ 5 ತಿಂಗಳ ನಂತರ ಬುಮ್ರಾ ಮತ್ತೆ ತಂಡಕ್ಕೆ ವಾಪಸ್ ಬರಲು ಸಿದ್ಧತೆ ನಡೆಸಿದ್ದಾರೆ.

ಏಕದಿನ ಸರಣಿಯಲ್ಲಿ ಮೂವರು ಒಟ್ಟಿಗೆ

ಇತ್ತೀಚೆಗಷ್ಟೇ ಬಿಸಿಸಿಐ ಶ್ರೀಲಂಕಾ ವಿರುದ್ಧದ ಏಕದಿನ ತಂಡಕ್ಕೆ ಬುಮ್ರಾ ಅವರನ್ನು ಕೊನೆಯ ಗಳಿಗೆಯಲ್ಲಿ ತಂಡಕ್ಕೆ ಆಯ್ಕೆ ಮಾಡಿತು. ಹೀಗಿರುವಾಗ ಬುಮ್ರಾ ಮೈದಾನಕ್ಕೆ ಇಳಿಯುವುದು ನಿಶ್ಚಿತ ಎಂಬ ನಂಬಿಕೆ ಇದೆ. ಅಲ್ಲದೆ ಎನ್​ಸಿಎ ಕೂಡ ಬುಮ್ರಾ ಪುರ್ಣ ಫಿಟ್ ಆಗಿದ್ದಾರೆ ಎಂಬ ಸಿಗ್ನಲ್ ನೀಡಿರುವುದು ಕೂಡ ಬಿಸಿಸಿಐಗೆ ಕೊಂಚ ನಿರಾಳತೆ ತಂದಿದೆ. ಬುಮ್ರಾ ಅವರೊಂದಿಗೆ ರೋಹಿತ್ ಮತ್ತು ಕೊಹ್ಲಿ ಕೂಡ ಈ ಸರಣಿಯಿಂದ ತಂಡಕ್ಕೆ ಮರಳಲಿದ್ದಾರೆ. ಈ ಹಿಂದೆ ನಡೆದ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಗಾಯಗೊಂಡಿದ್ದರು. ಹೀಗಾಗಿ ಅವರನ್ನುಟೆಸ್ಟ್ ಹಾಗೂ ಲಂಕಾ ವಿರುದ್ಧದ ಟಿ20 ಸರಣಿಯಿಂದ ಹೊರಗಿಡಲಾಗಿತ್ತು. ಇತ್ತ ಬಾಂಗ್ಲಾ ಪ್ರವಾಸ ಮುಗಿಸಿ ಬಂದಿದ್ದ ಕೊಹ್ಲಿಗೂ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಇಂಜುರಿಯಿಂದ ಚೇತರಿಸಿಕೊಂಡು ಬಂದಿರುವ ರೋಹಿತ್ ಹಾಗೂ ಬುಮ್ರಾ, ಇತ್ತ ವಿಶ್ರಾಂತಿ ಪಡೆದು ತಂಡಕ್ಕೆ ಎಂಟ್ರಿಕೊಟ್ಟಿರುವ ಕೊಹ್ಲಿ ಈ ಸರಣಿಯಲ್ಲಿ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Sun, 8 January 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ