AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI ODI: ಇಂದು ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಏಕದಿನ: ಭಾರತದ ಆಡುವ ಬಳಗವೇ ರೋಚಕ

India vs West Indies 1st ODI: ಕೆರಿಬಿಯನ್ನರ ನಾಡಿಗೆ ಪ್ರವಾಸ ಬೆಳೆಸಿರುವ ಟೀಮ್ ಇಂಡಿಯಾ ಇಂದು ಮೊದಲ ಏಕದಿನ ಪಂದ್ಯವನ್ನು ಆಡಲಿದೆ. ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್​ ಓವಲ್​ನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ.

IND vs WI ODI: ಇಂದು ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಏಕದಿನ: ಭಾರತದ ಆಡುವ ಬಳಗವೇ ರೋಚಕ
IND vs WI 2nd ODI
TV9 Web
| Updated By: Vinay Bhat|

Updated on: Jul 22, 2022 | 8:07 AM

Share

ಇಂಗ್ಲೆಂಡ್ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿರುವ ಭಾರತ ಕ್ರಿಕೆಟ್ ತಂಡ ಇದೀಗ ಮತ್ತೊಂದು ಕದನಕ್ಕೆ ತಯಾರಾಗುತ್ತಿದೆ. ಆಂಗ್ಲರ ನಾಡಿನಿಂದ ಕೆರಿಬಿಯನ್ನರ ನಾಡಿಗೆ ಪ್ರವಾಸ ಬೆಳೆಸಿರುವ ಟೀಮ್ ಇಂಡಿಯಾ (Team India) ಇಂದು ಮೊದಲ ಏಕದಿನ ಪಂದ್ಯವನ್ನು ಆಡಲಿದೆ. ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್​ ಓವಲ್​ನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಭಾರತದ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಯುವ ಪಡೆ ಈ ಸರಣಿಯಲ್ಲಿ ಕಣಕ್ಕಿಳಿಯಲಿದೆ. ರೋಹಿತ್‌ ಶರ್ಮ (Rohit Sharma) ಅವರ ಅನುಪಸ್ಥಿತಿಯಲ್ಲಿ ಏಕದಿನ ಸರಣಿಗೆ ತಂಡದ ನಾಯಕತ್ವವನ್ನು ಶಿಖರ್‌ ಧವನ್‌ (Shikhar Dhawan) ಅವರು ವಹಿಸಿಕೊಂಡಿದ್ದಾರೆ. ರವೀಂದ್ರ ಜಡೇಜಾ ಉಪ ನಾಯಕನಾಗಿದ್ದಾರೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ, ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಯುವ ಪಡೆಯಿಂದ ಕೂಡಿರುವ ಭಾರತದ ಆಡುವ ಬಳಗ ಹೇಗಿರಲಿದೆ ಎಂಬುದು ಕುತೂಹಲ. ಧವನ್ ಜೊತೆ ಇಶಾನ್ ಕಿಶನ್, ಶುಭ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್ ತಂಡದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಆವೇಶ್ ಖಾನ್, ಪ್ರಸಿದ್ಧ ಕೃಷ್ಣ ಮತ್ತು ಆರ್ಷದೀಪ್ ಸಿಂಗ್ ಅವರಿಗೆ ಈ ಸರಣಿ ಅಗ್ನಿಪರೀಕ್ಷೆ ಎನ್ನಬಹುದು. ವಿಕೆಟ್‌ಕೀಪರ್ ಸಂಜು ಸ್ಯಾಮ್ಸನ್ ಅವರಿಗೂ ಅಂತಿಮ ಹನ್ನೊಂದರಲ್ಲಿ ಕಣಕ್ಕಿಳಿಯುವ ಅವಕಾಶ ಸಿಗುವ ಸಾಧ್ಯತೆ ಇದೆ.

ಇತ್ತ ವಿಂಡೀಸ್ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸಲಿದ್ದಾರೆ. ಇತ್ತೀಚೆಗಷ್ಟೆ ಬಾಂಗ್ಲಾದೇಶ ವಿರುದ್ದ 3-0 ಅಂತರದಿಂದ ಸರಣಿ ಸೋತಿರುವ ವೆಸ್ಟ್ ಇಂಡೀಸ್​ ಅನುಭವಿ ಆಟಗಾರರನ್ನು ತಂಡಕ್ಕೆ ಕರೆಸಿಕೊಂಡಿದೆ. ಅದರಂತೆ ಜೇಸನ್ ಹೋಲ್ಡರ್ ಟೀಮ್ ಇಂಡಿಯಾ ವಿರುದ್ದ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ತಂಡದಿಂದ ಆ್ಯಂಡರ್ಸನ್ ಫಿಲಿಪ್ ಹಾಗೂ ರೊಮಾರಿಯೊ ಶೆಫರ್ಡ್ ಅನ್ನು ಕೈಬಿಡಲಾಗಿದೆ. ಇನ್ನು ತಂಡದಲ್ಲಿ ಟ್ರಂಪ್ ಕಾರ್ಡ್ ಆಗಿ ರೋವ್ಮನ್ ಪೊವೆಲ್ ಇದ್ದು, ಟೀಮ್ ಇಂಡಿಯಾ ವಿರುದ್ದ ಹೇಗೆ ಪ್ರದರ್ಶನ ನೀಡಲಿದ್ದಾರೆ ಕಾದು ನೋಡಬೇಕಿದೆ.

ಇದನ್ನೂ ಓದಿ
Image
Neeraj Chopra: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್ ಫೈನಲ್​​ಗೆ ನೀರಜ್ ಚೋಪ್ರಾ: ಇತಿಹಾಸ ನಿರ್ಮಿಸುತ್ತಾರ ಚಿನ್ನದ ಹುಡುಗ
Image
Asia Cup2022: ಏಷ್ಯಾ ಕಪ್ ಆಯೋಜನೆಗೆ ಅಧಿಕೃತ ಸ್ಥಳ ನಿಗದಿ! ಗಂಗೂಲಿ ನೀಡಿದ್ರು ಬಿಗ್​ ಅಪ್​ಡೇಟ್
Image
Virat Kohli: ಕ್ರಿಕೆಟ್​ಗೆ ಬ್ರೇಕ್; ಮಡದಿಯೊಂದಿಗೆ ಈ ರೊಮ್ಯಾಂಟಿಕ್ ಸಿಟಿಯಲ್ಲಿ ಒಂದು ತಿಂಗಳು ಕಳೆಯಲಿದ್ದಾರೆ ಕೊಹ್ಲಿ
Image
CWG 2022: ಕಾಮನ್‌ವೆಲ್ತ್ ಗೇಮ್ಸ್ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಮಹಿಳಾ ಸ್ಟಾರ್ ಕ್ರಿಕೆಟರ್​ಗೆ ಕೊರೊನಾ

ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವೆ ನಡೆಯಲಿರುವ 137ನೇ ಅಂತರರಾಷ್ಟ್ರೀಯ ಏಕದಿನ ಪಂದ್ಯ ಇದಾಗಿದ್ದು, ಈ ಪೈಕಿ ಟೀಮ್ ಇಂಡಿಯಾ 67 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದ್ದರೆ, ವಿಂಡೀಸ್ 63 ಪಂದ್ಯಗಳಲ್ಲಿ ಗೆದ್ದಿದೆ, 4 ಪಂದ್ಯಗಳು ಯಾವುದೇ ಫಲಿತಾಂಶ ಕಂಡಿಲ್ಲ. ಉಳಿದ 2 ಪಂದ್ಯಗಳು ಡ್ರಾನಲ್ಲಿ ಮುಕ್ತಾಯಗೊಂಡಿವೆ.

ಭಾರತ ತಂಡ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್‌), ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ವೆಸ್ಟ್ ಏಕದಿನ ತಂಡ: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮ್ರಾ ಬ್ರೂಕ್ಸ್, ಕೆಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರೆಂಡನ್ ಕಿಂಗ್, ಕೈಲ್ ಮೈಯರ್ಸ್, ಗುಡಕೇಶ್ ಮೋತಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್ ಮತ್ತು ಜೇಡನ್ ಸೀಲ್ಸ್.

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್