AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 1st ODI: ವೆಸ್ಟ್ ಇಂಡೀಸ್ ವಿರುದ್ಧ ಜಯ ಸಾಧಿಸಿದ ಟೀಮ್ ಇಂಡಿಯಾ

IND vs WI 1st ODI: ಭಾರತ-ವೆಸ್ಟ್ ಇಂಡೀಸ್ ನಡುವಣ 2ನೇ ಏಕದಿನ ಪಂದ್ಯವು ಜುಲೈ 29 ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿದೆ.

IND vs WI 1st ODI: ವೆಸ್ಟ್ ಇಂಡೀಸ್ ವಿರುದ್ಧ ಜಯ ಸಾಧಿಸಿದ ಟೀಮ್ ಇಂಡಿಯಾ
IND vs WI
TV9 Web
| Edited By: |

Updated on:Jul 27, 2023 | 11:15 PM

Share

West Indies vs India, 1st ODI: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಇನಿಂಗ್ಸ್​ ಆರಂಭಿಸಿದ ವೆಸ್ಟ್ ಇಂಡೀಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಭಾರತೀಯ ಬೌಲರ್​ಗಳು ಯಶಸ್ವಿಯಾಗಿದ್ದರು. 3ನೇ ಓವರ್​ನಲ್ಲಿ ಕೈಲ್ ಮೇಯರ್ಸ್​ (2) ವಿಕೆಟ್ ಕಬಳಿಸುವ ಹಾರ್ದಿಕ್ ಪಾಂಡ್ಯ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಚೊಚ್ಚಲ ಪಂದ್ಯವಾಡಿದ ಮುಖೇಶ್ ಕುಮಾರ್ ಅಲಿಕ್ ಅಥನಾಝ್ ವಿಕೆಟ್ ಕಬಳಿಸಿ ವೈಯುಕ್ತಿಕ ವಿಕೆಟ್ ಖಾತೆ ತೆರೆದರು. ಇದರ ನಡುವೆ ಬ್ರಾಂಡನ್ ಕಿಂಗ್ (2) ಶಾರ್ದೂಲ್ ಠಾಕೂರ್​ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ 4ನೇ ವಿಕೆಟ್​ಗೆ ಜೊತೆಯಾದ ಶಿಮ್ರಾನ್ ಹೆಟ್ಮೆಯರ್ ಹಾಗೂ ಶಾಯ್ ಹೋಪ್ 43 ರನ್​ಗಳ ಜೊತೆಯಾಟವಾಡಿದರು. ಈ ನಾಯಕ ರೋಹಿತ್ ಶರ್ಮಾ ಚೆಂಡನ್ನು ಸ್ಪಿನ್ನರ್ ಜಡೇಜಾ ಕೈಗಿತ್ತರು. ನಾಯಕನ ನಿರೀಕ್ಷೆಯನ್ನು ಹುಸಿಗೊಳಿಸದ ಜಡೇಜಾ ಹೆಟ್ಮೆಯರ್​ (11) ರನ್ನು ಕ್ಲೀನ್ ಬೌಲ್ಡ್ ಮಾಡಿದರು.

ಇದರ ಬೆನ್ನಲೇ ರೋವ್​ಮನ್ ಪೊವೆಲ್ (4) ಹಾಗೂ ರೊಮಾರಿಯೊ ಶೆಫರ್ಡ್ (0) ವಿಕೆಟ್ ಕಬಳಿಸಿ ಜಡೇಜಾ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಈ ಯಶಸ್ಸು ನಡುವೆ ದಾಳಿಗಿಳಿದ ಕುಲ್ದೀಪ್ ಯಾದವ್ ಡೊಮಿನಿಕ್ ಡ್ರೇಕ್ಸ್ (3) ಹಾಗೂ ಯಾನಿಕ್ ಕ್ಯಾರಿಯಾ (3) ಎಲ್​ಬಿ ಬಲೆಗೆ ಬೀಳಿಸಿದರು. ಅಷ್ಟೇ ಅಲ್ಲದೆ ಕ್ರೀಸ್ ಕಚ್ಚಿ ನಿಂತಿದ್ದ ಶಾಯ್ ಹೋಪ್ (43) ವಿಕೆಟ್ ಪಡೆದು ಭಾರತಕ್ಕೆ 9ನೇ ಯಶಸ್ಸು ತಂದುಕೊಟ್ಟರು. ಇನ್ನು ಜೇಡನ್ ಸೀಲ್ಸ್ (0) ಬಂದ ಬೆನ್ನಲ್ಲೇ ಕ್ಯಾಚಿತ್ತರು.

ಇದರೊಂದಿಗೆ ವೆಸ್ಟ್ ಇಂಡೀಸ್ ತಂಡವು 23 ಓವರ್​ಗಳಲ್ಲಿ ಕೇವಲ 114 ರನ್​ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಕುಲ್ದೀಪ್ ಯಾದವ್ 3 ಓವರ್​ಗಳಲ್ಲಿ 4 ವಿಕೆಟ್ ಕಬಳಿಸಿ ಮಿಂಚಿದರೆ, ರವೀಂದ್ರ ಜಡೇಜಾ 3 ವಿಕೆಟ್ ಪಡೆದು ಉತ್ತಮ ಸಾಥ್ ನೀಡಿದರು.

ಇನ್ನು 115 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಪರ ಶುಭ್​ಮನ್ ಗಿಲ್ ಜೊತೆ ರೋಹಿತ್ ಶರ್ಮಾ ಬದಲು ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಿದ್ದರು. 4 ಓವರ್​ಗಳಲ್ಲಿ 18 ರನ್​ಗಳಿಸಿದ್ದ ವೇಳೆ ಶುಭ್​ಮನ್ ಗಿಲ್ (7) ನೀಡಿ ಹೊರನಡೆದರು. ಈ ವೇಳೆ ಬಡ್ತಿ ಪಡೆದು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಇಶಾನ್ ಕಿಶನ್ ಜೊತೆಗೂಡಿ ಉತ್ತಮ ಜೊತೆಯಾಟವಾಡಿದರು.

ಈ ಹಂತದಲ್ಲಿ ದಾಳಿಗಿಳಿದ ಸ್ಪಿನ್ನರ್ ಗುಡಕೇಶ್ ಮೋಟಿ ಎಸೆತವನ್ನು ಗುರುತಿಸುವಲ್ಲಿ ಎಡವಿದ ಸೂರ್ಯಕುಮಾರ್ ಯಾದವ್ (19) ಎಲ್​ಬಿಡಬ್ಲ್ಯೂ ಆಗಿ ನಿರ್ಗಮಿಸಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ (5) ರನೌಟ್ ಆಗಿ ಹೊರ ನಡೆದರು.

ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್ 44 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಆದರೆ ಅರ್ಧಶತಕ ಬೆನ್ನಲ್ಲೇ ಸಿಕ್ಸ್​ ಸಿಡಿಸುವ ಯತ್ನದಲ್ಲಿ ಇಶಾನ್ (52) ಬೌಂಡರಿ ಲೈನ್​ನಲ್ಲಿ ಕ್ಯಾಚ್ ನೀಡಿದರು. ಇನ್ನು ಬಡ್ತಿ ಪಡೆದು 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಶಾರ್ದೂಲ್ ಠಾಕೂರ್ 1 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೋಹಿತ್ ಶರ್ಮಾ (12) ರವೀಂದ್ರ ಜಡೇಜಾ (16) ಜೊತೆಗೂಡಿ 21 ರನ್​ಗಳಿಸುವ ಮೂಲಕ 22.5 ಓವರ್​ಗಳಲ್ಲಿ ಟೀಮ್ ಇಂಡಿಯಾವನ್ನು ಗುರಿಮುಟ್ಟಿಸಿದರು. ಈ ಮೂಲಕ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತು.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಶಾಯ್ ಹೋಪ್ (ನಾಯಕ) , ಕೈಲ್ ಮೇಯರ್ಸ್ , ಬ್ರಾಂಡನ್ ಕಿಂಗ್ , ಅಲಿಕ್ ಅಥಾನಾಝ್ , ಶಿಮ್ರಾನ್ ಹೆಟ್ಮೆಯರ್ , ರೋವ್​ಮನ್ ಪೊವೆಲ್ , ರೊಮಾರಿಯೋ ಶೆಫರ್ಡ್ , ಯಾನಿಕ್ ಕ್ಯಾರಿಯಾ , ಡೊಮಿನಿಕ್ ಡ್ರೇಕ್ಸ್ , ಜೇಡನ್ ಸೀಲ್ಸ್ , ಗುಡಕೇಶ್ ಮೋಟಿ.

ಇದನ್ನೂ ಓದಿ: Ravindra Jadeja: 30 ವರ್ಷಗಳ ಹಳೆಯ ದಾಖಲೆ ಮುರಿದ ರವೀಂದ್ರ ಜಡೇಜಾ

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಶುಭಮನ್ ಗಿಲ್ , ವಿರಾಟ್ ಕೊಹ್ಲಿ , ಇಶಾನ್ ಕಿಶನ್ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ , ಸೂರ್ಯಕುಮಾರ್ ಯಾದವ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್ , ಉಮ್ರಾನ್ ಮಲಿಕ್ , ಮುಖೇಶ್ ಕುಮಾರ್.

Published On - 11:13 pm, Thu, 27 July 23

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ