AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಅರ್ಷದೀಪ್ ಸಿಂಗ್ 2 ವಿಕೆಟ್ ಪಡೆದ ಆ ಓವರ್ ಟೀಂ ಇಂಡಿಯಾ ಸೋಲಿಗೆ ಕಾರಣವಾಯ್ತು..!

Arshdeep Singh: ಮೇಲ್ನೋಟಕ್ಕೆ ಹಾರ್ದಿಕ್ ಪಡೆಯ ಸೋಲಿಗೆ ತಂಡದ ಹೀನಾಯ ಬ್ಯಾಟಿಂಗ್ ಪ್ರದರ್ಶನವೇ ಕಾರಣವಾಗಿದ್ದರೂ, ಬೌಲಿಂಗ್​ನಲ್ಲಿ ಅರ್ಷದೀಪ್ ಸಿಂಗ್ ಬೌಲ್ ಮಾಡಿದ 19ನೇ ಓವರ್​ ಕೂಡ ಒಂದರ್ಥದಲ್ಲಿ ಕಾರಣವಾಯ್ತು.

IND vs WI: ಅರ್ಷದೀಪ್ ಸಿಂಗ್ 2 ವಿಕೆಟ್ ಪಡೆದ ಆ ಓವರ್ ಟೀಂ ಇಂಡಿಯಾ ಸೋಲಿಗೆ ಕಾರಣವಾಯ್ತು..!
ಅರ್ಷದೀಪ್ ಸಿಂಗ್
ಪೃಥ್ವಿಶಂಕರ
|

Updated on:Aug 04, 2023 | 7:10 AM

Share

ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಹಾಗೂ ಏಕದಿನ ಸರಣಿಯ ಮೊದಲ ಪಂದ್ಯವನ್ನು ಗೆಲ್ಲುವುದರೊಂದಿಗೆ ಎರಡೂ ಸರಣಿಯಲ್ಲೂ ಶುಭಾರಂಭ ಮಾಡಿದ್ದ ಟೀಂ ಇಂಡಿಯಾಕ್ಕೆ (India vs West Indies), ಟಿ20 ಸರಣಿಯಲ್ಲಿ ನಿರೀಕ್ಷಿತ ಶುಭಾರಂಭ ಸಿಗಲಿಲ್ಲ. ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಮೈದಾನದಲ್ಲಿ (Brian Lara Stadium, Trinidad) ನಡೆದ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನೀಡಿದ 150 ರನ್​ಗಳ ಸುಲಭ ಗುರಿ ಬೆನ್ನಟ್ಟುವಲ್ಲಿ ಎಡವಿದ ಭಾರತ 4 ರನ್​ಗಳ ಸೋಲು ಅನುಭವಿಸುವಂತ್ತಾಗಿದೆ. ಟಾಸ್ ಸೋತು ಮೊದಲು ಬೌಲಿಂಗ್ ಮಾಡಿದ ಟೀಂ ಇಂಡಿಯಾ (Team India), ವಿಂಡೀಸ್ ದಾಂಡಿಗರನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಆದರೆ ಈ ಗುರಿ ಬೆನ್ನಟ್ಟಿದ ಯುವ ಪಡೆಗೆ ಸುಲಭ ಗುರಿ ಮುಟ್ಟಲು ಸಾಧ್ಯವಾಗಲಿಲ್ಲ. ಮೇಲ್ನೋಟಕ್ಕೆ ಹಾರ್ದಿಕ್ ಪಡೆಯ ಸೋಲಿಗೆ ತಂಡದ ಹೀನಾಯ ಬ್ಯಾಟಿಂಗ್ ಪ್ರದರ್ಶನವೇ ಕಾರಣವಾಗಿದ್ದರೂ, ಬೌಲಿಂಗ್​ನಲ್ಲಿ ಅರ್ಷದೀಪ್ ಸಿಂಗ್ (Arshdeep Singh) ಬೌಲ್ ಮಾಡಿದ 19ನೇ ಓವರ್​ ಕೂಡ ಒಂದರ್ಥದಲ್ಲಿ ಕಾರಣವಾಯ್ತು.

ಹಳೆಯ ತಪ್ಪನ್ನು ತಿದ್ದಿಕೊಳ್ಳದ ಅರ್ಷದೀಪ್

ವಾಸ್ತವವಾಗಿ ಈ ಐದು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ ಹಿರಿಯ ಆಟಗಾರರು ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ಹಲವು ಯುವ ಪ್ರತಿಭೆಗಳಿಗೆ ಈ ಸರಣಿಯಲ್ಲಿ ಅವಕಾಶ ನೀಡಲಾಗುತ್ತಿದೆ. ನಿರೀಕ್ಷೆಯಂತೆ ಮೊದಲ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ ಮತ್ತು ಮುಖೇಶ್ ಕುಮಾರ್​ಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿತು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಈ ಇಬ್ಬರು ತಮ್ಮ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸಿದರು. ಆದರೆ ಟೀಂ ಇಂಡಿಯಾದಲ್ಲಿ ಹಲವು ಅವಕಾಶಗಳ ಹೊರತಾಗಿಯೂ ಡೆತ್ ಓವರ್​ನಲ್ಲಿ ತಪ್ಪಿನ ಮೇಲೆ ತಪ್ಪುಗಳನ್ನು ಮಾಡುತ್ತಿರುವ ಅರ್ಷದೀಪ್ ಸಿಂಗ್ ಮಾತ್ರ ತಮ್ಮ ಹಳೆಯ ತಪ್ಪನ್ನು ತಿದ್ದಿಕೊಳ್ಳುವ ಗೊಜಿಗೆ ಹೊದಂತೆ ತೋರುತ್ತಿಲ್ಲ.

IND vs SL: ಹ್ಯಾಟ್ರಿಕ್ ನೋಬಾಲ್, ಒಂದೇ ಎಸೆತದಲ್ಲಿ 14 ರನ್! ಬೇಡದ ವಿಶ್ವ ದಾಖಲೆ ಬರೆದ ಅರ್ಷದೀಪ್ ಸಿಂಗ್

ವಾಸ್ತವವಾಗಿ ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ವೇಗಿಗಳು ಆರಂಭದಿಂದಲೂ ಸುಲಭವಾಗಿ ರನ್ ಕಲೆಹಾಕಲು ಅವಕಾಶ ನೀಡಲಿಲ್ಲ. ಆಗಾಗ್ಗೆ ವಿಂಡೀಸ್ ಪಡೆಯ ವಿಕೆಟ್ ಉರುಳಿಸುತ್ತ ರನ್ ವೇಗಕ್ಕೆ ಕಡಿವಾಣ ಹಾಕುವಲ್ಲಿ ಟೀಂ ಇಂಡಿಯಾ ಯುವ ಪಡೆ ಯಶಸ್ವಿ ಕೂಡ ಆಯಿತು. ಆದರೆ ಅರ್ಷದೀಪ್ ಸಿಂಗ್ ಬೌಲ್ ಮಾಡಿದ 19ನೇ ಓವರ್ ಟೀಂ ಇಂಡಿಯಾ ಪಾಲಿಗೆ ಸೋಲಿನ ದುಸ್ವಪ್ನವಾಯಿತು.​

ಒಂದು ಓವರ್‌ನಲ್ಲಿ 10 ಎಸೆತಗಳು

ವಾಸ್ತವವಾಗಿ, 18 ನೇ ಓವರ್‌ ಆಗುವಷ್ಟರಲ್ಲಿ ವೆಸ್ಟ್ ಇಂಡೀಸ್ ತಂಡ 4 ವಿಕೆಟ್‌ ಕಳೆದುಕೊಂಡು 134 ರನ್ ಕಲೆಹಾಕಿತ್ತು. ಇದಾದ ನಂತರ 19ನೇ ಓವರ್‌ ಬೌಲಿಂಗ್‌ ಮಾಡುವ ಜವಾಬ್ದಾರಿಯನ್ನು ಅರ್ಷದೀಪ್‌ಗೆ ನೀಡಲಾಯಿತು. ಆದರೆ ಡೆತ್ ಓವರ್​ಗಳಲ್ಲಿ ಸತತ ವೈಡ್ ಹಾಗೂ ನೋ ಬಾಲ್​ಗಳಿಗೆ ಹೆಸರುವಾಸಿಯಾಗಿರುವ ಅರ್ಷದೀಪ್, ಈ ಪಂದ್ಯದಲ್ಲೂ ತಮ್ಮ 6 ಎಸೆತದ ಓವರ್‌ನಲ್ಲಿ ಒಟ್ಟು 10 ಎಸೆತಗಳನ್ನು ಎಸೆದರು. ಇದರಲ್ಲಿ ಬರೋಬ್ಬರಿ 4 ವೈಡ್‌ಗಳನ್ನು ಬೌಲ್ ಮಾಡಿದರು. ಇದರಲ್ಲಿ ಇನ್ನೊಂದು ಬೇಸರದ ಸಂಗತಿಯೆಂದರೆ, ತಮ್ಮ ಓವರ್​ನ ಮೊದಲ ಎಸೆತದಲ್ಲೇ ಸ್ಫೋಟಕ ಬ್ಯಾಟರ್​ ಶಿಮ್ರಾನ್ ಹೆಟ್ಮೆಯರ್​ನ್ನು ಬಲಿ ಹಾಕಿದ ಅರ್ಷದೀಪ್ ಸಿಂಗ್, ವಿಂಡೀಸ್ ಬೌಲರ್ ರೊಮಾರಿಯೋ ಶೆಫರ್ಡ್ ಎದುರು 4 ವೈಡ್ ಬಾಲ್ ಎಸೆದಿದ್ದು ತಂಡದ ಸೋಲಿಗೆ ಪ್ರಮುಖ ಕಾರಣವಾಯ್ತು.

2 ವಿಕೆಟ್ ಕೂಡ ಪಡೆದರು

ಅರ್ಷದೀಪ್ ಸಿಂಗ್ ಎಸೆದ 19ನೇ ಓವರ್​ನಲ್ಲಿ 4 ವೈಡ್ ಬಂದ ಹೊರತಾಗಿಯೂ, ಈ ಓವರ್​ನಲ್ಲಿ ಅವರು ಶಿಮ್ರಾನ್ ಹೆಟ್ಮೆಯರ್ ಮತ್ತು ರೋವ್‌ಮನ್ ಪೊವೆಲ್ ಅವರನ್ನು ಸಹ ಔಟ್ ಮಾಡಿದರು. ಆದರೆ ಫೆಬ್ರುವರಿ ನಂತರ ಟೀಂ ಇಂಡಿಯಾಕ್ಕೆ ವಾಪಸಾದ ಅರ್ಷದೀಪ್ ಸಿಂಗ್ ಎಸೆದ ಆ ದುಬಾರಿ 4 ವೈಡ್​ಗಳು ಟೀಂ ಇಂಡಿಯಾವನ್ನು ಸೋಲಿನ ದವಡೆಗೆ ಥಳಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:07 am, Fri, 4 August 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ