AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಸಿರಾಜ್, ಬುಮ್ರಾ ಬೆಂಕಿ ಬೌಲಿಂಗ್: 265 ಎಸೆತಗಳಲ್ಲಿ ವಿಂಡೀಸ್ ಆಲೌಟ್

India vs West Indies, 1st Test: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಭರ್ಜರಿ ಬೌಲಿಂಗ್ ಪ್ರದರ್ಶನದೊಂದಿಗೆ ಕೇವಲ 265  ಎಸೆತಗಳಲ್ಲಿ ವಿಂಡೀಸ್ ಪಡೆಯನ್ನು ಆಲೌಟ್ ಮಾಡಿದೆ.

IND vs WI: ಸಿರಾಜ್, ಬುಮ್ರಾ ಬೆಂಕಿ ಬೌಲಿಂಗ್: 265 ಎಸೆತಗಳಲ್ಲಿ ವಿಂಡೀಸ್ ಆಲೌಟ್
Ind Vs Wi
ಝಾಹಿರ್ ಯೂಸುಫ್
|

Updated on: Oct 02, 2025 | 2:04 PM

Share

ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ವೆಸ್ಟ್ ಇಂಡೀಸ್ ತಂಡವು ಅಲ್ಪ ಮೊತ್ತಕ್ಕೆ ಕುಸಿದಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್ ತಂಡದ ನಾಯಕ ರೋಸ್ಟನ್ ಚೇಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ವೆಸ್ಟ್ ಇಂಡೀಸ್ ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ‌.

ಆರಂಭಿಕ ಆಟಗಾರ ತೇಜ್​ನರೈನ್ ಚಂದ್ರಪಾಲ್ (0) ರನ್ನು ಶೂನ್ಯಕ್ಕೆ ಔಟ್ ಮಾಡಿ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಜಾನ್ ಕ್ಯಾಂಪ್​ಬೆಲ್ (8) ವಿಕೆಟ್ ಕಬಳಿಸುವಲ್ಲಿ ಬುಮ್ರಾ ಯಶಸ್ವಿಯಾದರು.

ಆ ಬಳಿಕ ಬಂದ ಬ್ರಾಂಡನ್ ಕಿಂಗ್ (13) ಹಾಗೂ ಅಲಿಕ್ ಅಥನಾಝ್​ಗೆ (12) ಮೊಹಮ್ಮದ್ ಸಿರಾಜ್ ಪೆವಿಲಿಯನ್ ಹಾದಿ ತೋರಿಸಿದರು. ಇದರ ಬೆನ್ನಲ್ಲೇ ಶೈ ಹೋಪ್ (26) ವಿಕೆಟ್ ಪಡೆಯುವಲ್ಲಿ ಕುಲ್ದೀಪ್ ಯಾದವ್ ಯಶಸ್ವಿಯಾದರು.

ಈ ಹಂತದಲ್ಲಿ ಜಸ್ಟಿನ್ ಗ್ರೀವ್ಸ್ 32 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ಇದಾಗ್ಯೂ ವೆಸ್ಟ್ ಇಂಡೀಸ್ ಪಡೆಯನ್ನು 44.1 ಓವರ್​​ಗಳಲ್ಲಿ 162 ರನ್ ಗಳಿಗೆ ಆಲೌಟ್ ಮಾಡುವಲ್ಲಿ ಟೀಮ್ ಇಂಡಿಯಾ ಬೌಲರ್‌ಗಳು ಯಶಸ್ವಿಯಾಗಿದ್ದಾರೆ.

ಟೀಮ್ ಇಂಡಿಯಾ ಪರ 14 ಓವರ್‌ಗಳಲ್ಲಿ 40 ರನ್ ನೀಡಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿದರೆ, ಜಸ್ ಪ್ರೀತ್ ಬುಮ್ರಾ 14 ಓವರ್‌ಗಳಲ್ಲಿ 42 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು. ಇನ್ನು ಕುಲ್ದೀಪ್ ಯಾದವ್ 2 ವಿಕೆಟ್ ಕಬಳಿಸಿದರು.

ಭಾರತ ಪ್ಲೇಯಿಂಗ್ ಇಲೆವೆನ್: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಅಭಿಷೇಕ್ ಅಬ್ಬರಕ್ಕೆ ವಿರಾಟ್ ಕೊಹ್ಲಿಯ ಸಾರ್ವಕಾಲಿಕ ರ‍್ಯಾಂಕಿಂಗ್ ಷೇಕ್ ಷೇಕ್ 

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ತೇಜ್ನರೈನ್ ಚಂದ್ರಪಾಲ್, ಜಾನ್​ ಕ್ಯಾಂಪ್​ಬೆಲ್, ಅಲಿಕ್ ಅಥನಾಝ್, ಬ್ರಾಂಡನ್ ಕಿಂಗ್, ಶೈ ಹೋಪ್ (ವಿಕೆಟ್ ಕೀಪರ್), ರೋಸ್ಟನ್ ಚೇಸ್ (ನಾಯಕ), ಜಸ್ಟಿನ್ ಗ್ರೀವ್ಸ್, ಜೋಮೆಲ್ ವಾರಿಕನ್, ಖಾರಿ ಪಿಯರೆ, ಜೋಹಾನ್ ಲೇನ್, ಜೇಡನ್ ಸೀಲ್ಸ್.

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ