AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಸಂಜು, ಸೂರ್ಯನಿಗೆ ಕೊನೆಯ ಚಾನ್ಸ್​..!

India vs West Indies 3rd ODI: ಈ ನಿರ್ಣಾಯಕ ಪಂದ್ಯವು ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಾದ ಸೂರ್ಯಕುಮಾರ್ ಯಾದವ್ ಹಾಗೂ ಸಂಜು ಸ್ಯಾಮ್ಸನ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

IND vs WI: ಸಂಜು, ಸೂರ್ಯನಿಗೆ ಕೊನೆಯ ಚಾನ್ಸ್​..!
Sanju Samson-Suryakumar Yadav
TV9 Web
| Edited By: |

Updated on:Jul 31, 2023 | 5:33 PM

Share

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ 3ನೇ ಏಕದಿನ ಪಂದ್ಯವು ನಾಳೆ (ಆಗಸ್ಟ್ 1) ನಡೆಯಲಿದೆ. ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಸರಣಿ ನಿರ್ಣಾಯಕ. ಅಂದರೆ 3 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಗೆಲುವು ದಾಖಲಿಸಿದರೆ, 2ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು 6 ವಿಕೆಟ್​ಗಳ ಜಯ ಸಾಧಿಸಿತ್ತು.

ಇದೀಗ 1-1 ಅಂತರದಿಂದ ಸರಣಿಯು ಸಮಬಲದಲ್ಲಿದ್ದು, ಹೀಗಾಗಿ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಇತ್ತ ಈ ನಿರ್ಣಾಯಕ ಪಂದ್ಯವು ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳಾದ ಸೂರ್ಯಕುಮಾರ್ ಯಾದವ್ ಹಾಗೂ ಸಂಜು ಸ್ಯಾಮ್ಸನ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಕಲೆಹಾಕಿದ್ದು ಕೇವಲ 43 ರನ್​ಗಳು ಮಾತ್ರ. ಇನ್ನು 2ನೇ ಏಕದಿನ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಸಂಜು ಸ್ಯಾಮ್ಸನ್ 9 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ಇದೀಗ ಈ ಇಬ್ಬರು ಆಟಗಾರರಿಗೆ ಮೂರನೇ ಏಕದಿನ ಪಂದ್ಯದಲ್ಲೂ ಅವಕಾಶ ಸಿಗಲಿದೆ. ಆದರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡರೆ ಮಾತ್ರ ಮುಂಬರುವ ಸರಣಿಗಳಲ್ಲಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳಬಹುದು.

ಏಕೆಂದರೆ ಮುಂಬರುವ ಸರಣಿಗಳ ಮೂಲಕ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಬಹುದು. ಈ ಇಬ್ಬರೂ ಕೂಡ ಏಕದಿನ ಕ್ರಿಕೆಟ್​ನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಆಟಗಾರ.

ಇದೀಗ ಟೀಮ್ ಇಂಡಿಯಾ ಏಕದಿನ ವಿಶ್ವಕಪ್​ಗಾಗಿ ನಾಲ್ಕನೇ ಕ್ರಮಾಂಕಕ್ಕೆ ಉತ್ತಮ ಬ್ಯಾಟರ್​ನ ಹುಡುಕಾಟದಲ್ಲಿದೆ. ಈ ಸ್ಥಾನವನ್ನು ತುಂಬಬಲ್ಲ ಆಟಗಾರರಾಗಿ ಇದೀಗ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಹಾಗೂ ಸಂಜು ಸ್ಯಾಮ್ಸನ್​ಗೆ ಅವಕಾಶ ನೀಡಲಾಗುತ್ತಿದೆ. ಆದರೆ ಇಬ್ಬರ ವೈಫಲ್ಯ ಟೀಮ್ ಮ್ಯಾನೇಜ್ಮೆಂಟ್​ನ ಚಿಂತೆಯನ್ನು ಹೆಚ್ಚಿಸಿದೆ.

ಇತ್ತ ಕೆಎಲ್ ರಾಹುಲ್ ತಂಡಕ್ಕೆ ಕಂಬ್ಯಾಕ್ ಮಾಡಿದರೆ 5ನೇ ಕ್ರಮಾಂಕದಲ್ಲಿ ಆಡುವುದು ಖಚಿತ ಎನ್ನಬಹುದು. ಮತ್ತೊಂದೆಡೆ ಶ್ರೇಯಸ್ ಅಯ್ಯರ್ ಕೂಡ ಮಧ್ಯಮ ಕ್ರಮಾಂಕದಲ್ಲಿ ತಮ್ಮ ಸಾಮರ್ಥ್ಯವನ್ನು ನಿರೂಪಿಸಿದ್ದಾರೆ.

ಸದ್ಯ ಕೆಎಲ್​ಆರ್ ಹಾಗೂ ಅಯ್ಯರ್ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದು, ಮುಂಬರುವ ಸರಣಿಗಳ ಮೂಲಕ ವಾಪಾಸ್ಸಾತಿ ಮಾಡುವ ವಿಶ್ವಾಸದಲ್ಲಿದ್ದಾರೆ. ಈ ಇಬ್ಬರ ಆಗಮನದೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಸೂರ್ಯ ಹಾಗೂ ಸ್ಯಾಮ್ಸನ್ ಅವರಿಗೆ ಅವಕಾಶ ಕೈ ತಪ್ಪುವುದು ಖಚಿತ ಎನ್ನಬಹುದು.

ಹೀಗಾಗಿಯೇ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯವು ಸೂರ್ಯಕುಮಾರ್ ಯಾದವ್ ಹಾಗೂ ಸಂಜು ಸ್ಯಾಮ್ಸನ್​ ಪಾಲಿಗೆ ಕೊನೆಯ ಅವಕಾಶ ಎಂದು ವಿಶ್ಲೇಷಿಸಲಾಗುತ್ತಿದೆ. ಹಾಗಾಗಿ ಕಡೆಯ ಚಾನ್ಸ್​ನಲ್ಲಿ ಈ ಇಬ್ಬರು ಆಟಗಾರರು ಮಿಂಚುವ ಮೂಲಕ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಹಾರ್ದಿಕ್ ಪಾಂಡ್ಯ , ಸೂರ್ಯಕುಮಾರ್ ಯಾದವ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಕುಲ್ದೀಪ್ ಯಾದವ್ , ಉಮ್ರಾನ್ ಮಲಿಕ್ , ಮುಖೇಶ್ ಕುಮಾರ್ , ಯುಜ್ವೇಂದ್ರ ಚಾಹಲ್ , ಸಂಜು ಸ್ಯಾಮ್ಸನ್, ಜಯದೇವ್ ಉನಾದ್ಕಟ್, ರುತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್.

Published On - 5:32 pm, Mon, 31 July 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ