AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 3rd ODI: ಭಾರತ-ವಿಂಡೀಸ್ ನಡುವಣ ಮೂರನೇ ಏಕದಿನ ಪಂದ್ಯ ನಡೆಯುವುದು ಅನುಮಾನ

IND vs WI 3rd ODI Weather Report: ಸರಣಿಯಲ್ಲಿ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾಗೆ ಮೂರನೇ ಪಂದ್ಯ ಔಪಚಾರಿಕ ಎಂಬುದು ಇಲ್ಲಿ ವಿಶೇಷ. ಏಕೆಂದರೆ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆದ ಮೊದಲ 2 ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ.

IND vs WI 3rd ODI: ಭಾರತ-ವಿಂಡೀಸ್ ನಡುವಣ ಮೂರನೇ ಏಕದಿನ ಪಂದ್ಯ ನಡೆಯುವುದು ಅನುಮಾನ
Team India
TV9 Web
| Updated By: ಝಾಹಿರ್ ಯೂಸುಫ್|

Updated on: Jul 27, 2022 | 10:23 AM

Share

ಭಾರತ-ವೆಸ್ಟ್ ಇಂಡೀಸ್ (IND vs WI 3rd ODI) ನಡುವಣ 3ನೇ ಏಕದಿನ ಪಂದ್ಯವು ಇಂದು ನಡೆಯಬೇಕಿದೆ. ಶಿಖರ್ ಧವನ್ ನಾಯಕತ್ವದಲ್ಲಿ ಭಾರತ ತಂಡವು 3 ಪಂದ್ಯಗಳ ಸರಣಿಯ ಮೊದಲ ಎರಡು ಮ್ಯಾಚ್​ಗಳನ್ನು ಗೆಲ್ಲುವ ಮೂಲಕ 2-0 ಮುನ್ನಡೆ ಸಾಧಿಸಿದೆ. ಇದೀಗ ಮೂರನೇ ಪಂದ್ಯವನ್ನೂ ಗೆಲ್ಲುವ ಮೂಲಕ ಭಾರತ ವೆಸ್ಟ್ ಇಂಡೀಸ್ ವಿರುದ್ಧ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ. ಆದರೆ, ಮೂರನೇ ಏಕದಿನ ಪಂದ್ಯದ ವೇಳೆ ಪೋರ್ಟ್ ಆಫ್ ಸ್ಪೇನ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ವರುಣನು ಟೀಮ್ ಇಂಡಿಯಾದ ಕ್ಲೀನ್ ಸ್ವೀಪ್ ಕನಸಿಗೆ ಅಡ್ಡಿಯಾಗಬಹುದು.

ಮೂರನೇ ಪಂದ್ಯ ನಡೆಯಲಿರುವ ಪೋರ್ಟ್​ ಆಫ್ ಸ್ಪೇನ್​ನ ಹವಾಮಾನ ಪರಿಸ್ಥಿತಿ ಬಗ್ಗೆ ಟೀಮ್ ಇಂಡಿಯಾದ ಆಲ್​ರೌಂಡರ್ ರವೀಂದ್ರ ಜಡೇಜಾ ಇನ್​ಸ್ಟಾಗ್ರಾಮ್​ ಮೂಲಕ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯಂತೆ ಮೂರನೇ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ರವೀಂದ್ರ ಜಡೇಜಾ ಕ್ರೀಡಾಂಗಣದ ವೀಡಿಯೊವನ್ನು ಹಂಚಿಕೊಂಡಿದ್ದು, ಜೋರಾಗಿ ಮಳೆಯಾಗುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಅಷ್ಟೇ ಅಲ್ಲದೆ ಮೈದಾನವನ್ನು ಸಂಪೂರ್ಣವಾಗಿ ಕವರ್‌ಗಳಿಂದ ಮುಚ್ಚಲಾಗಿದೆ. ಇದರಿಂದಾಗಿ ಭಾರತ ತಂಡದ ನೆಟ್ ಸೆಷನ್ ಸಹ ರದ್ದಾಗಿದೆ. ಹೀಗಾಗಿ ಮೂರನೇ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಅಭ್ಯಾಸ ನಡೆಸಲಾಗಲಿಲ್ಲ. ಅಂದರೆ ಬಿಡುವಿಲ್ಲದೆ ಮಳೆಯಾಗುತ್ತಿದೆ ಎಂಬುದನ್ನು ರವೀಂದ್ರ ಜಡೇಜಾ ತಿಳಿಸಿದ್ದಾರೆ. ಹೀಗಾಗಿಯೇ 3ನೇ ಏಕದಿನ ಪಂದ್ಯವು ಮಳೆಯ ಕಾರಣ ರದ್ದಾಗುವ ಸಾಧ್ಯತೆಯಿದೆ. ಹಾಗೆಯೇ ಟಿ20 ಸರಣಿಗಾಗಿ ಟ್ರಿನಿಡಾಟ್ ತಲುಪಿರುವ ಕುಲ್ದೀಪ್ ಯಾದವ್ ಕೂಡ ಹೊಟೇಲ್ ಕೊಠಡಿಯಿಂದ ವಿಡಿಯೋ ಹಂಚಿಕೊಂಡಿದ್ದು, ಈ ವಿಡಿಯೋದಲ್ಲೂ ಭಾರೀ ಮಳೆಯಾಗುತ್ತಿರುವುದು ಕಾಣಬಹುದು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಅಕ್ಯುವೆದರ್ ವರದಿಯ ಪ್ರಕಾರ, ಬುಧವಾರದಂದು ಪೋರ್ಟ್ ಆಫ್ ಸ್ಪೇನ್‌ನಲ್ಲಿ ಮಳೆ ಸಾಧ್ಯತೆ ಶೇಕಡಾ 80 ಕ್ಕಿಂತ ಹೆಚ್ಚಿದೆ. ಅಂದರೆ 5 ಮಿ.ಮೀ ಗಿಂತ ಹೆಚ್ಚು ಮಳೆಯಾಗಬಹುದು ಎಂದು ತಿಳಿಸಲಾಗಿದೆ. ಅಷ್ಟೇ ಅಲ್ಲದೆ ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಲಿದೆ ಎಂದು ವರದಿ ಹೇಳಿದೆ. ಹೀಗಾಗಿ ಪಂದ್ಯ ನಡೆಯುವ ನಿರೀಕ್ಷೆ ಕಡಿಮೆ. ಇದಾಗ್ಯೂ  ಮಳೆಯ ಅಡ್ಡಿಯ ನಡುವೆ ಓವರ್​ ಕಡಿತದೊಂದಿಗೆ ಪಂದ್ಯ ನಡೆದರೆ ಬೌಲರ್​ಗಳಿಗೆ ಹೆಚ್ಚಿನ ಸಹಕಾರಿಯಾಗಲಿದೆ.

ಮತ್ತೊಂದೆಡೆ ಸರಣಿಯಲ್ಲಿ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾಗೆ ಮೂರನೇ ಪಂದ್ಯ ಔಪಚಾರಿಕ ಎಂಬುದು ಇಲ್ಲಿ ವಿಶೇಷ. ಏಕೆಂದರೆ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆದ ಮೊದಲ 2 ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಮೂರನೇ ಪಂದ್ಯವು ಮಳೆಯ ಕಾರಣ ರದ್ದಾದರೂ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ.

ಭಾರತ ಏಕದಿನ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್‌), ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ವೆಸ್ಟ್ ಇಂಡೀಸ್ ಏಕದಿನ ತಂಡ ಹೀಗಿದೆ: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮ್ರಾ ಬ್ರೂಕ್ಸ್, ಕೆಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರೆಂಡನ್ ಕಿಂಗ್, ಕೈಲ್ ಮೈಯರ್ಸ್, ಗುಡಕೇಶ್ ಮೋತಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್ ಮತ್ತು ಜೇಡನ್ ಸೀಲ್ಸ್.

ಮೀಸಲು ಆಟಗಾರರು: ರೊಮಾರಿಯೊ ಶೆಫರ್ಡ್, ಹೇಡನ್ ವಾಲ್ಷ್ ಜೂನಿಯರ್.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ