AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ‘ನಮಗೆ ಐಷಾರಾಮಿ ಸೌಕರ್ಯ ಬೇಕಿಲ್ಲ, ಆದರೆ..’; ವಿಂಡೀಸ್ ಬೋರ್ಡ್ ವಿರುದ್ಧ ಹಾರ್ದಿಕ್ ಅಸಮಾಧಾನ

Hardik Pandya: ಇದೀಗ ಐದು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ಸಜ್ಜಾಗುತ್ತಿದ್ದು, ಈ ನಡುವೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ವಿಂಡೀಸ್ ಮಂಡಳಿಯ ವಿರುದ್ಧ ಹರಿಹಾಯ್ದಿದ್ದಾರೆ.

IND vs WI: ‘ನಮಗೆ ಐಷಾರಾಮಿ ಸೌಕರ್ಯ ಬೇಕಿಲ್ಲ, ಆದರೆ..’; ವಿಂಡೀಸ್ ಬೋರ್ಡ್ ವಿರುದ್ಧ ಹಾರ್ದಿಕ್ ಅಸಮಾಧಾನ
ಹಾರ್ದಿಕ್ ಪಾಂಡ್ಯ
ಪೃಥ್ವಿಶಂಕರ
|

Updated on:Aug 02, 2023 | 11:34 AM

Share

ಟ್ರಿನಿಡಾಡ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ (Team India)  200 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಮೂರನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಎಲ್ಲ ವಿಭಾಗದಲ್ಲೂ ಅದ್ಭುತ ಪ್ರದರ್ಶನ ನೀಡುವಲ್ಲಿ ಭಾರತ ಯುವ ಪಡೆ (India vs West Indies) ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 50 ಓವರ್​​ಗಳಲ್ಲಿ ನಾಲ್ಕು ಆಟಗಾರರ ಅರ್ಧಶತಕದ ನೆರವಿನಿಂದ 351 ರನ್ ದಾಖಲಿಸಿತು. ಈ ಗುರಿ ಬೆನ್ನಟ್ಟಿದ ವಿಂಡೀಸ್ ಪಡೆ, ಟೀಂ ಇಂಡಿಯಾ ವೇಗಿಗಳ ದಾಳಿಗೆ ನಲುಗಿ 151 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಟೀಂ ಇಂಡಿಯಾ ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಇದೀಗ ಐದು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ ಸಜ್ಜಾಗುತ್ತಿದ್ದು, ಈ ನಡುವೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya), ವಿಂಡೀಸ್ ಮಂಡಳಿಯ ವಿರುದ್ಧ ಹರಿಹಾಯ್ದಿದ್ದಾರೆ.

ನಮಗೆ ಯಾವುದೇ ಐಷಾರಾಮಿ ಸೌಕರ್ಯ ಬೇಡ

ವಾಸ್ತವವಾಗಿ ಮೂರನೇ ಏಕದಿನ ಪಂದ್ಯ ಮುಗಿದ ಬಳಿಕ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬಳಿ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿನ ಸೌಲಭ್ಯಗಳ ಬಗ್ಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಹಾರ್ದಿಕ್, ಇದು ಅತ್ಯುತ್ತಮವಾದ ಸ್ಥಳಗಳಲ್ಲಿ ಒಂದಾಗಿದೆ ಎಂದರು. ಆದರೆ ಆ ಬಳಿಕ ವಿಂಡೀಸ್ ಮಂಡಳಿಯ ವೈಫಲ್ಯಗಳ ಮಾತನಾಡಲಾರಂಭಿಸಿದ ಪಾಂಡ್ಯ, ‘ನಾವು ಕಳೆದ ವರ್ಷ ವಿಂಡೀಸ್ ಪ್ರವಾಸ ಮಾಡಿದ್ದಾಗಲೂ ನಮಗೆ ವಿಂಡೀಸ್ ಕ್ರಿಕೆಟ್ ಮಂಡಳಿ ಉತ್ತಮ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲವಾಗಿತ್ತು. ಇದೀಗ ಈ ಸರಣಿಯಲ್ಲೂ ಆ ವೈಫಲ್ಯ ಮುಂದುವರೆದಿದೆ. ವೆಸ್ಟ್ ಇಂಡೀಸ್ ಬೋರ್ಡ್ ಈ ಬಗ್ಗೆ ಕಾಳಜಿ ವಹಿಸಬೇಕಿದೆ. ನಮಗೆ ಯಾವುದೇ ಐಷಾರಾಮಿ ಸೌಕರ್ಯ ಬೇಡ. ಆದರೆ ಕನಿಷ್ಠ ಪಕ್ಷ ಮೂಲ ಸೌಕರ್ಯಗಳನ್ನಾದರೂ ಸರಿಯಾಗಿ ಕಲ್ಪಿಸಬೇಕು’ ಎಂದು ಪಾಂಡ್ಯ ಹೇಳಿದ್ದಾರೆ.

IND vs WI: 6 ಆಟಗಾರರು ಔಟ್, ಐವರು ಇನ್; ಭಾರತ ಟಿ20 ತಂಡದಲ್ಲಾಗಿರುವ ಬದಲಾವಣೆಗಳಿವು

ನಾಲ್ಕು ಗಂಟೆಗಳಷ್ಟು ವಿಳಂಬ

ವಾಸ್ತವವಾಗಿ ಪ್ರಯಾಣದ ವಿಚಾರದಲ್ಲಿ ವಿಂಡೀಸ್ ಮಂಡಳಿಯ ವಿರುದ್ಧ ಪಾಂಡ್ಯ ಗರಂ ಆದರು. ಏಕದಿನ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಟ್ರಿನಿಡಾಡ್‌ನಿಂದ ಬಾರ್ಬಡೋಸ್‌ಗೆ ತಡರಾತ್ರಿ ವಿಮಾನ ಪ್ರಯಾಣ ಮಾಡಬೇಕಿತ್ತು. ಆದರೆ ವಿಮಾನ ನಿಗದಿತ ಸಮಯಕ್ಕೆ ಹಾರದೆ, ಸುಮಾರು ನಾಲ್ಕು ಗಂಟೆಗಳಷ್ಟು ವಿಳಂಬವಾಯಿತು. ಇದರಿಂದ ಟೀಂ ಇಂಡಿಯಾ ಆಟಗಾರರು ನಾಲ್ಕು ತಾಸುಗಳನ್ನು ವಿಮಾನ ನಿಲ್ದಾಣದಲ್ಲೇ ಕಳೆಯಬೇಕಾಯಿತು. ಇದರಿಂದ ಅಸಮಾಧಾನಗೊಂಡಿದ್ದ ಭಾರತೀಯ ಕ್ರಿಕೆಟಿಗರು ಈ ಬಗ್ಗೆ ಬಿಸಿಸಿಐ ಬಳಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.

ಅಂತಿಮ ಪಂದ್ಯದಲ್ಲಿ ಅಬ್ಬರಿಸಿದ ಪಾಂಡ್ಯ

ಟ್ರಿನಿಡಾಡ್‌ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ವೆಸ್ಟ್ ಇಂಡೀಸ್ ಬೌಲರ್‌ಗಳನ್ನು ಸರಿಯಾಗಿ ಚೆಂಡಾಡಿದರು. ಪಾಂಡ್ಯರ ಈ ಸ್ಫೋಟಕ ಬ್ಯಾಟಿಂಗ್ ನೆರವಿನಿಂದಾಗಿ ಟೀಂ ಇಂಡಿಯಾ ವಿಂಡೀಸ್ ವಿರುದ್ಧ 351 ರನ್​ಗಳ ಬೃಹತ್ ಟಾರ್ಗೆಟ್ ಸೆಟ್ ಮಾಡಿತು. ಆರಂಭದಲ್ಲಿ ನಿದಾನಗತಿಯ ಬ್ಯಾಟಿಂಗ್ ಮಾಡಿದ ಪಾಂಡ್ಯ ಆ ಬಳಿಕ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಪ್ರಾರಂಭಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 52 ಎಸೆತಗಳನ್ನು ಎದುರಿಸಿದ ಪಾಂಡ್ಯ 5 ಭರ್ಜರಿ ಸಿಕ್ಸರ್ ಮತ್ತು 4 ಬೌಂಡರಿ ಒಳಗೊಂಡಂತೆ ಅಜೇಯ 70 ರನ್ ಸಿಡಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:32 am, Wed, 2 August 23

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ