IND vs WI: ಟಿ20 ಸರಣಿಗೆ ಟ್ರೆನಿಡಾಡ್ ತಲುಪಿದ ರೋಹಿತ್ ಪಡೆ; ಕನ್ನಡಿಗ ರಾಹುಲ್ ಮಾತ್ರ ನಾಪತ್ತೆ!

IND vs WI: ಟ್ರಿನಿಡಾಡ್‌ಗೆ ಬಂದಿಳಿದ ಟೀಂ ಇಂಡಿಯಾದಲ್ಲಿ ರಾಹುಲ್ ಕಾಣಿಸಿಕೊಂಡಿಲ್ಲ. ಹೀಗಾಗಿ ಟಿ20 ಸರಣಿಗೆ ರಾಹುಲ್ ಲಭ್ಯತೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ.

IND vs WI: ಟಿ20 ಸರಣಿಗೆ ಟ್ರೆನಿಡಾಡ್ ತಲುಪಿದ ರೋಹಿತ್ ಪಡೆ; ಕನ್ನಡಿಗ ರಾಹುಲ್ ಮಾತ್ರ ನಾಪತ್ತೆ!
Team India
Follow us
| Updated By: ಪೃಥ್ವಿಶಂಕರ

Updated on: Jul 26, 2022 | 6:29 PM

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಭಾರತ ಗೆದ್ದುಕೊಂಡಿದೆ. ಮೊದಲ ಎರಡು ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಸದ್ಯಕ್ಕೆ ಇನ್ನೂ ಒಂದು ಏಕದಿನ ಪಂದ್ಯ ಬಾಕಿ ಉಳಿದಿದ್ದು, ಬುಧವಾರ ನಡೆಯಲಿದೆ. ಇದಾದ ಬಳಿಕ ಐದು ಪಂದ್ಯಗಳ ಟಿ20 ಸರಣಿಯೂ ನಡೆಯಲಿದ್ದು, ಇದಕ್ಕಾಗಿ ತಂಡ ಟ್ರಿನಿಡಾಡ್ ತಲುಪಿದೆ. ಬಿಸಿಸಿಐ ತನ್ನ ಟ್ವಿಟ್ಟರ್ ಖಾತೆಯಲ್ಲಿ ರೋಹಿತ್ ಶರ್ಮಾ, ರಿಷಬ್ ಪಂತ್, ಭುವನೇಶ್ವರ್ ಕುಮಾರ್ ಮತ್ತು ಆರ್ ಅಶ್ವಿನ್ (Rohit Sharma, Rishabh Pant , Bhuvneshwar Kumar and R Ashwin) ಕಾಣಿಸಿಕೊಂಡಿರುವ ವೀಡಿಯೊವನ್ನು ಪೋಸ್ಟ್ ಮಾಡಿದೆ. ಆದರೆ, ಟ್ರಿನಿಡಾಡ್‌ಗೆ ಬಂದಿಳಿದ ಟೀಂ ಇಂಡಿಯಾದಲ್ಲಿ ರಾಹುಲ್ (KL Rahul) ಕಾಣಿಸಿಕೊಂಡಿಲ್ಲ. ಹೀಗಾಗಿ ಟಿ20 ಸರಣಿಗೆ ರಾಹುಲ್ ಲಭ್ಯತೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇತ್ತೀಚೆಗೆ ಇಂಜುರಿಯಿಂದ ಗುಣಮುಖರಾಗಿದ್ದ ರಾಹುಲ್, ಫಿಟ್ನೇಸ್ ಪರೀಕ್ಷೆಯಲ್ಲಿ ಪಾಸಾಗಿ ತಂಡವನ್ನು ಸೇರಿಕೊಳ್ಳುವುದರಲ್ಲಿದ್ದರು. ಆದರೆ ಅಷ್ಟರಲ್ಲಿ ಕೊರೊನಾ ಸೋಂಕಿನಿಂದಾಗಿ ರಾಹುಲ್ ವಿಂಡೀಸ್​ಗೆ ತೆರಳುವುದು ಕೊಂಚ ತಡವಾಗಿತ್ತು.

ಲಗೇಜ್ ಇಲ್ಲದೆ ಟ್ರಿನಿಡಾಡ್ ತಲುಪಿದರಾ ಪಂತ್

ಇದನ್ನೂ ಓದಿ
Image
ಕೊನೆಯ ಓವರ್​ನಲ್ಲಿ 26 ರನ್ ಬಾರಿಸಿ ತಂಡಕ್ಕೆ ಅದ್ಭುತ ಗೆಲುವು ತಂದಿತ್ತ ನಂ.1 ಟಿ20 ಬೌಲರ್..! ವಿಡಿಯೋ ನೋಡಿ
Image
Retired number: 10, 64, 77; ಕ್ರಿಕೆಟ್​ನಲ್ಲಿ ಈ ನಂಬರ್​ಗಳ ಜರ್ಸಿಗೂ ಸಿಕ್ಕಿದೆ ಶಾಶ್ವತ ನಿವೃತ್ತಿ! ಕಾರಣವೇನು ಗೊತ್ತಾ?
Image
IND vs WI: ತಂಡದಿಂದ ಹೊರಗಿದ್ದ ಆಟಗಾರ ಇದೀಗ ಧೋನಿ-ಕೊಹ್ಲಿಯನ್ನು ಹಿಂದಿಕ್ಕಿ, ಇತಿಹಾಸ ಸೃಷ್ಟಿಸಲಿದ್ದಾನೆ!

ವಾಸ್ತವವಾಗಿ ನಾಯಕ ರೋಹಿತ್ ಶರ್ಮಾ, ಆರ್.ಅಶ್ವಿನ್, ಭುವನೇಶ್ವರ್ ಕುಮಾರ್, ದಿನೇಶ್ ಕಾರ್ತಿಕ್ ಎಲ್ಲರ ಕೈಯಲ್ಲೂ ಲಗೇಜ್​ಗಳಿದ್ದವು. ಎಲ್ಲರೂ ದೊಡ್ಡ ಬ್ಯಾಗ್​ಗಳೊಂದಿಗೆ ಟ್ರಿನಿಡಾಡ್ ತಲುಪಿದರು ಆದರೆ ಪಂತ್ ಅವರ ಕೈಯಲ್ಲಿ ಏನೂ ಇರಲಿಲ್ಲ. ಅವರ ಕೈಯಲ್ಲಿ ಜಾಕೆಟ್ ಮತ್ತು ಅವರ ಭುಜದ ಮೇಲೆ ಒಂದು ಸಣ್ಣ ಬ್ಯಾಗ್ ಮಾತ್ರ ಇತ್ತು.

ಪಂತ್‌ಗೆ ಟಿ20 ಸರಣಿ ಮಹತ್ವದ್ದಾಗಿದೆ

ವೆಸ್ಟ್ ಇಂಡೀಸ್ ವಿರುದ್ಧದ ಟಿ 20 ಸರಣಿಯು ರಿಷಬ್ ಪಂತ್ ಅವರಿಗೆ ಬಹಳ ಮುಖ್ಯವಾಗಿದೆ. ಏಕೆಂದರೆ ಪಂತ್, ಈ ಸ್ವರೂಪದಲ್ಲಿ ಸತತ ವೈಫಲ್ಯ ಅನುಭವಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಎರಡು ಟಿ20 ಪಂದ್ಯಗಳಲ್ಲಿ ಅವರು ಕೇವಲ 26 ಮತ್ತು 1 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. T20Iಗಳಲ್ಲಿ, ಪಂತ್ 44 ಇನ್ನಿಂಗ್ಸ್‌ಗಳಲ್ಲಿ ಕೇವಲ 22.58 ಸರಾಸರಿಯಲ್ಲಿ 768 ರನ್ ಗಳಿಸಿದ್ದಾರೆ. ಅಲ್ಲದೆ, ಪಂತ್ ಅವರ ಸ್ಟ್ರೈಕ್ ರೇಟ್ ಕೂಡ 125 ಕ್ಕಿಂತ ಕಡಿಮೆಯಾಗಿದೆ. ಟಿ 20 ನಲ್ಲಿ ಅವರ ಸ್ಥಾನಕ್ಕೆ ಅಪಾಯವಿರುವುದರಿಂದ ವೆಸ್ಟ್ ಇಂಡೀಸ್ ಸರಣಿಯಲ್ಲಿ ಪಂತ್ ತನ್ನನ್ನು ತಾನು ಸಾಬೀತುಪಡಿಸಬೇಕಾಗಿದೆ. ದಿನೇಶ್ ಕಾರ್ತಿಕ್ ಕೂಡ ವಿಕೆಟ್ ಕೀಪರ್ ಆಗಿ ತಂಡವನ್ನು ಪ್ರವೇಶಿಸಿದ್ದು, ಮಧ್ಯಮ ಕ್ರಮಾಂಕದಲ್ಲಿ ಇತರ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯ ಜುಲೈ 29 ರಂದು ಟ್ರಿನಿಡಾಡ್‌ನಲ್ಲಿ ನಡೆಯಲಿದೆ. ಇದಾದ ನಂತರ ಎರಡನೇ ಟಿ20 ಆಗಸ್ಟ್ 1 ರಂದು ಸೇಂಟ್ ಕಿಟ್ಸ್, ಮೂರನೇ ಟಿ20 ಪಂದ್ಯ ಆಗಸ್ಟ್ 2 ರಂದು ನಡೆಯಲಿದೆ. ನಾಲ್ಕನೇ ಟಿ20 ಪಂದ್ಯ ಆಗಸ್ಟ್ 6 ರಂದು ಅಮೆರಿಕದ ಲಾಂಡರ್‌ಹಿಲ್‌ನಲ್ಲಿ ಮತ್ತು ಐದನೇ ಟಿ20 ಪಂದ್ಯ ಆಗಸ್ಟ್ 7 ರಂದು ನಡೆಯಲಿದೆ.

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು