AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಕನ್ನಡಿಗ ಕೆಎಲ್ ರಾಹುಲ್​ಗೆ ಕೊರೊನಾ ಸೋಂಕು..! ವಿಂಡೀಸ್ ಪ್ರವಾಸಕ್ಕೆ ಗೈರು?

IND vs WI: ಒಂದೆರಡು ದಿನಗಳಲ್ಲಿ ಫಿಟ್ನೆಸ್ ಪರೀಕ್ಷೆಗೆ ರಾಹುಲ್ ಒಳಗಾಗಬೇಕಿತ್ತು. ಆದರೀಗ ಕೊರೊನಾ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿರುವುದರಿಂದ ಅವರು ವೆಸ್ಟ್ ಇಂಡೀಸ್‌ಗೆ ಪ್ರಯಾಣಿಸುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ.

IND vs WI: ಕನ್ನಡಿಗ ಕೆಎಲ್ ರಾಹುಲ್​ಗೆ ಕೊರೊನಾ ಸೋಂಕು..! ವಿಂಡೀಸ್ ಪ್ರವಾಸಕ್ಕೆ ಗೈರು?
ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಐಪಿಎಲ್ 2022 ರಿಂದ ಕ್ರಿಕೆಟ್‌ನಿಂದ ದೂರವಿದ್ದಾರೆ. ಕೆಎಲ್ ರಾಹುಲ್ ಇಂಗ್ಲೆಂಡ್ ಪ್ರವಾಸದ ಮೊದಲು ಗಾಯಗೊಂಡು ಶಸ್ತ್ರಚಿಕಿತ್ಸೆಗಾಗಿ ಜರ್ಮನಿಗೆ ಹೋಗಬೇಕಾಯಿತು. ಅದೇ ಸಮಯದಲ್ಲಿ, ಅವರು ವೆಸ್ಟ್ ಇಂಡೀಸ್ ವಿರುದ್ಧದ T20 ಸರಣಿಯ ಮೊದಲು ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈಗ ಅವರು ಮೊದಲ ಮೂರು T20 ಪಂದ್ಯಗಳಿಗೆ ಅಲಭ್ಯ ಎಂಬ ಸುದ್ದಿ ಹೊರಬಿದ್ದಿದೆ.
TV9 Web
| Edited By: |

Updated on:Jul 21, 2022 | 9:12 PM

Share

ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್​ (KL Rahul)ಗೆ ಕೊರೊನಾ ಸೋಂಕು ತಗುಲಿದೆ. ಮಾಧ್ಯಮ ವರದಿಗಳ ಪ್ರಕಾರ, ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳುವ ಮೊದಲ ನೆಡೆಸಲಾದ ಕೋವಿಡ್ ಪರೀಕ್ಷೆಯಲ್ಲಿ ಅವರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ರಾಹುಲ್ ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಬೆಂಗಳೂರಿನ ಎನ್‌ಸಿಎಯಲ್ಲಿ ತರಬೇತಿಯನ್ನು ಪುನರಾರಂಭಿಸಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ಪ್ರವಾಸಕ್ಕಾಗಿ ಕೆಎಲ್ ರಾಹುಲ್​ಗೆ T20I ತಂಡದಲ್ಲಿ ಅವಕಾಶ ನೀಡಲಾಗಿತ್ತು. ಈಗ ಒಂದೆರಡು ದಿನಗಳಲ್ಲಿ ಫಿಟ್ನೆಸ್ ಪರೀಕ್ಷೆಗೆ ರಾಹುಲ್ ಒಳಗಾಗಬೇಕಿತ್ತು. ಆದರೀಗ ಕೊರೊನಾ ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿರುವುದರಿಂದ ಅವರು ವೆಸ್ಟ್ ಇಂಡೀಸ್‌ಗೆ ಪ್ರಯಾಣಿಸುತ್ತಾರೋ ಅಥವಾ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಶುಕ್ರವಾರದಿಂದ ಆರಂಭವಾಗಲಿದೆ. ಇದಕ್ಕೂ ಮುನ್ನವೇ ರಾಹುಲ್‌ ಸೋಂಕಿಗೆ ಒಳಗಾಗಿದ್ದಾರೆ . ರಾಹುಲ್‌ಗೆ ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದರೂ, ಅವರು ಟಿ20 ಸರಣಿಯ ಭಾಗವಾಗಿದ್ದಾರೆ. ಈ ಎರಡೂ ತಂಡಗಳು ಜುಲೈ 29 ರಿಂದ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿವೆ. ಕೆಎಲ್ ರಾಹುಲ್ ಈ ವಾರ ವೆಸ್ಟ್ ಇಂಡೀಸ್‌ಗೆ ತೆರಳಬೇಕಿತ್ತು, ಆದರೆ ಈಗ ಅವರು ಟಿ 20 ಐ ಸರಣಿಯಿಂದ ಹೊರಗುಳಿಯಬಹುದು ಎಂದು ತೋರುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ರಾಹುಲ್ ಅವರನ್ನು ಟೀಮ್ ಇಂಡಿಯಾದ ನಾಯಕರನ್ನಾಗಿ ಮಾಡಲಾಯಿತು ಆದರೆ ಗಾಯದ ಕಾರಣದಿಂದ ತಂಡದಿಂದ ಹೊರಗುಳಿದಿದ್ದರು.

ಈ ಸರಣಿಯಲ್ಲಿ ರಾಹುಲ್ ಆಡಬಹುದು

ಇದನ್ನೂ ಓದಿ
Image
ಬಿಸಿಸಿಐನಲ್ಲಿ ದಾದಾ- ಜೈ ಶಾ ಪಾರುಪತ್ಯ; ಮೇಲ್ಮನವಿ ವಿಚಾರಣೆ ಒಂದು ವಾರ ಮುಂದೂಡಿದ ಸುಪ್ರೀಂ ಕೋರ್ಟ್
Image
IND vs WI: ಹೊಸಬರಿಗೆ ಹೆಚ್ಚಿನ ಅವಕಾಶ; ಕೆರಿಬಿಯನ್ ದೈತ್ಯರನ್ನು ಮಣಿಸುವ ಧವನ್ ಪಡೆಯ ಸಂಭಾವ್ಯ XI ಹೀಗಿದೆ
Image
WI vs IND: ಭಾರತ-ವಿಂಡೀಸ್ ಪಂದ್ಯ ಯಾವ ಚಾನೆಲ್​ನಲ್ಲಿ ನೇರಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ

ಐಪಿಎಲ್-2022 ರಿಂದ ರಾಹುಲ್ ಕ್ರಿಕೆಟ್ ಆಡಿಲ್ಲ. ಅವರು ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದರು. ಆ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಆಡಲು ಸಾಧ್ಯವಾಗಲಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ರಾಹುಲ್ ಆಡಲು ಸಾಧ್ಯವಾಗದಿದ್ದರೆ ಜಿಂಬಾಬ್ವೆ ವಿರುದ್ಧ ಆಡುವುದನ್ನು ಕಾಣಬಹುದು.

5 ಟಿ20 ಪಂದ್ಯಗಳ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಕುಲ್ದೀಪ್ ಯಾದವ್*, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

*ಕೆಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ಸೇರ್ಪಡೆ ಅವರ ಫಿಟ್‌ನೆಸ್‌ ಮೇಲೆ ಅವಲಂಬಿತವಾಗಿರುತ್ತದೆ.

Published On - 8:35 pm, Thu, 21 July 22

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ