AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammad Siraj: ಅದ್ಭುತ ಕ್ಯಾಚ್ ಹಿಡಿದ ಸೂಪರ್​ಮ್ಯಾನ್ ಸಿರಾಜ್

India vs West Indies 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಭೋಜನ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 68 ರನ್​ಗಳಿಸಿದೆ.

Mohammad Siraj: ಅದ್ಭುತ ಕ್ಯಾಚ್ ಹಿಡಿದ ಸೂಪರ್​ಮ್ಯಾನ್ ಸಿರಾಜ್
Mohammad Siraj Catch
TV9 Web
| Edited By: |

Updated on: Jul 12, 2023 | 10:32 PM

Share

India vs West Indies 1st Test: ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಕ್ರೈಗ್​ ಬ್ರಾಥ್​ವೈಟ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ತೇಜ್​ನರೈನ್ ಚಂದ್ರಪಾಲ್ ಹಾಗು ಬ್ರಾಥ್​ವೈಟ್ ಮೊದಲ ವಿಕೆಟ್​ಗೆ 31 ರನ್​ ಪೇರಿಸಿದ್ದರು. ಈ ಹಂತದಲ್ಲಿ ತೇಜ್​ನರೈನ್ (12) ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಅಶ್ವಿನ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು.

ಇದರ ಬೆನ್ನಲ್ಲೇ ಕ್ರೈಗ್​ ಬ್ರಾಥ್​ವೈಟ್ (20) ಕೂಡ ಅಶ್ವಿನ್ ಎಸೆತದಲ್ಲಿ ರೋಹಿತ್ ಶರ್ಮಾಗೆ ಕ್ಯಾಚ್ ನೀಡಿ ಹೊರನಡೆದರು. ಆ ಬಳಿಕ ಬಂದ ರೇಮನ್ ರೀಫರ್ (2) ಶಾರ್ದೂಲ್ ಠಾಕೂರ್ ಎಸೆತದಲ್ಲಿ ಕೀಪರ್​ಗೆ ಕ್ಯಾಚಿತ್ತರು. ಈ ಹಂತದಲ್ಲಿ ಜೊತೆಯಾದ ಜೆರ್ಮೈನ್ ಬ್ಲಾಕ್​ವುಡ್ ಹಾಗೂ ಅಲಿಕ್ ಅಥಾನಾಝೆ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದರು. ಆದರೆ ಜಡೇಜಾ ಎಸೆದ 28ನೇ ಓವರ್​ನ ಕೊನೆಯ ಎಸೆತದಲ್ಲಿ ಬ್ಲಾಕ್​ವುಡ್ ಮಿಡ್​ ಆಫ್​ನತ್ತ ಬೌಂಡರಿ ಬಾರಿಸಲು ಯತ್ನಿಸಿದ್ದರು.

ಆದರೆ 30 ಯಾರ್ಡ್ ಸರ್ಕಲ್​ನಲ್ಲೇ ಫೀಲ್ಡಿಂಗ್​ನಲ್ಲಿದ್ದ ಮೊಹಮ್ಮದ್ ಸಿರಾಜ್ ಓಡಿ ಹೋಗಿ ಗಾಳಿಯಲ್ಲಿ ಹಾರಿ ಅದ್ಭುತವಾಗಿ ಚೆಂಡನ್ನು ಹಿಡಿದರು. ಅಲ್ಲಿಗೆ ಜೆರ್ಮೈನ್ ಬ್ಲಾಕ್​ವುಡ್ (14) ಇನಿಂಗ್ಸ್ ಅಂತ್ಯವಾಯಿತು. ಇದೀಗ ಸಿರಾಜ್ ಅವರ ಈ ಅತ್ಯದ್ಭುತ ಕ್ಯಾಚ್​ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಟೀಮ್ ಇಂಡಿಯಾ ವೇಗಿಯ ಈ ಪ್ರಯತ್ನಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಭೋಜನ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 68 ರನ್​ಗಳಿಸಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕ್ರೈಗ್ ಬ್ರಾಥ್‌ವೈಟ್ (ನಾಯಕ) , ತೇಜ್​ನರೈನ್ ಚಂದ್ರಪಾಲ್ , ರೇಮನ್ ರೀಫರ್ , ಜೆರ್ಮೈನ್ ಬ್ಲಾಕ್‌ವುಡ್ , ಅಲಿಕ್ ಅಥಾನಾಝ್ , ಜೋಶುವಾ ಡಾ ಸಿಲ್ವಾ (ವಿಕೆಟ್) , ಜೇಸನ್ ಹೋಲ್ಡರ್ , ರಹಕೀಮ್ ಕಾರ್ನ್‌ವಾಲ್ , ಅಲ್ಝಾರಿ ಜೋಸೆಫ್ , ಕೆಮರ್ ರೋಚ್ , ಜೋಮೆಲ್ ವಾರಿಕನ್.

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಇಶಾನ್ ಕಿಶನ್ (ವಿಕೆಟ್ ಕೀಪರ್) , ರವಿಚಂದ್ರನ್ ಅಶ್ವಿನ್ , ಶಾರ್ದೂಲ್ ಠಾಕೂರ್ , ಜಯದೇವ್ ಉನಾದ್ಕತ್ , ಮೊಹಮ್ಮದ್ ಸಿರಾಜ್.

Follow Us
Web contact
Web contact

TV9 Kannada

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ