AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammad Siraj: ಅದ್ಭುತ ಕ್ಯಾಚ್ ಹಿಡಿದ ಸೂಪರ್​ಮ್ಯಾನ್ ಸಿರಾಜ್

India vs West Indies 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಭೋಜನ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 68 ರನ್​ಗಳಿಸಿದೆ.

Mohammad Siraj: ಅದ್ಭುತ ಕ್ಯಾಚ್ ಹಿಡಿದ ಸೂಪರ್​ಮ್ಯಾನ್ ಸಿರಾಜ್
Mohammad Siraj Catch
TV9 Web
| Edited By: |

Updated on: Jul 12, 2023 | 10:32 PM

Share

India vs West Indies 1st Test: ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಕ್ರೈಗ್​ ಬ್ರಾಥ್​ವೈಟ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ತೇಜ್​ನರೈನ್ ಚಂದ್ರಪಾಲ್ ಹಾಗು ಬ್ರಾಥ್​ವೈಟ್ ಮೊದಲ ವಿಕೆಟ್​ಗೆ 31 ರನ್​ ಪೇರಿಸಿದ್ದರು. ಈ ಹಂತದಲ್ಲಿ ತೇಜ್​ನರೈನ್ (12) ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಅಶ್ವಿನ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು.

ಇದರ ಬೆನ್ನಲ್ಲೇ ಕ್ರೈಗ್​ ಬ್ರಾಥ್​ವೈಟ್ (20) ಕೂಡ ಅಶ್ವಿನ್ ಎಸೆತದಲ್ಲಿ ರೋಹಿತ್ ಶರ್ಮಾಗೆ ಕ್ಯಾಚ್ ನೀಡಿ ಹೊರನಡೆದರು. ಆ ಬಳಿಕ ಬಂದ ರೇಮನ್ ರೀಫರ್ (2) ಶಾರ್ದೂಲ್ ಠಾಕೂರ್ ಎಸೆತದಲ್ಲಿ ಕೀಪರ್​ಗೆ ಕ್ಯಾಚಿತ್ತರು. ಈ ಹಂತದಲ್ಲಿ ಜೊತೆಯಾದ ಜೆರ್ಮೈನ್ ಬ್ಲಾಕ್​ವುಡ್ ಹಾಗೂ ಅಲಿಕ್ ಅಥಾನಾಝೆ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದರು. ಆದರೆ ಜಡೇಜಾ ಎಸೆದ 28ನೇ ಓವರ್​ನ ಕೊನೆಯ ಎಸೆತದಲ್ಲಿ ಬ್ಲಾಕ್​ವುಡ್ ಮಿಡ್​ ಆಫ್​ನತ್ತ ಬೌಂಡರಿ ಬಾರಿಸಲು ಯತ್ನಿಸಿದ್ದರು.

ಆದರೆ 30 ಯಾರ್ಡ್ ಸರ್ಕಲ್​ನಲ್ಲೇ ಫೀಲ್ಡಿಂಗ್​ನಲ್ಲಿದ್ದ ಮೊಹಮ್ಮದ್ ಸಿರಾಜ್ ಓಡಿ ಹೋಗಿ ಗಾಳಿಯಲ್ಲಿ ಹಾರಿ ಅದ್ಭುತವಾಗಿ ಚೆಂಡನ್ನು ಹಿಡಿದರು. ಅಲ್ಲಿಗೆ ಜೆರ್ಮೈನ್ ಬ್ಲಾಕ್​ವುಡ್ (14) ಇನಿಂಗ್ಸ್ ಅಂತ್ಯವಾಯಿತು. ಇದೀಗ ಸಿರಾಜ್ ಅವರ ಈ ಅತ್ಯದ್ಭುತ ಕ್ಯಾಚ್​ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಟೀಮ್ ಇಂಡಿಯಾ ವೇಗಿಯ ಈ ಪ್ರಯತ್ನಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಭೋಜನ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 68 ರನ್​ಗಳಿಸಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕ್ರೈಗ್ ಬ್ರಾಥ್‌ವೈಟ್ (ನಾಯಕ) , ತೇಜ್​ನರೈನ್ ಚಂದ್ರಪಾಲ್ , ರೇಮನ್ ರೀಫರ್ , ಜೆರ್ಮೈನ್ ಬ್ಲಾಕ್‌ವುಡ್ , ಅಲಿಕ್ ಅಥಾನಾಝ್ , ಜೋಶುವಾ ಡಾ ಸಿಲ್ವಾ (ವಿಕೆಟ್) , ಜೇಸನ್ ಹೋಲ್ಡರ್ , ರಹಕೀಮ್ ಕಾರ್ನ್‌ವಾಲ್ , ಅಲ್ಝಾರಿ ಜೋಸೆಫ್ , ಕೆಮರ್ ರೋಚ್ , ಜೋಮೆಲ್ ವಾರಿಕನ್.

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಇಶಾನ್ ಕಿಶನ್ (ವಿಕೆಟ್ ಕೀಪರ್) , ರವಿಚಂದ್ರನ್ ಅಶ್ವಿನ್ , ಶಾರ್ದೂಲ್ ಠಾಕೂರ್ , ಜಯದೇವ್ ಉನಾದ್ಕತ್ , ಮೊಹಮ್ಮದ್ ಸಿರಾಜ್.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ