AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammad Siraj: ಅದ್ಭುತ ಕ್ಯಾಚ್ ಹಿಡಿದ ಸೂಪರ್​ಮ್ಯಾನ್ ಸಿರಾಜ್

India vs West Indies 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಭೋಜನ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 68 ರನ್​ಗಳಿಸಿದೆ.

Mohammad Siraj: ಅದ್ಭುತ ಕ್ಯಾಚ್ ಹಿಡಿದ ಸೂಪರ್​ಮ್ಯಾನ್ ಸಿರಾಜ್
Mohammad Siraj Catch
TV9 Web
| Edited By: |

Updated on: Jul 12, 2023 | 10:32 PM

Share

India vs West Indies 1st Test: ಡೊಮಿನಿಕಾದ ವಿಂಡ್ಸರ್ ಪಾರ್ಕ್​ ಮೈದಾನದಲ್ಲಿ ಭಾರತ-ವೆಸ್ಟ್ ಇಂಡೀಸ್ ನಡುವಣ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಕ್ರೈಗ್​ ಬ್ರಾಥ್​ವೈಟ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ತೇಜ್​ನರೈನ್ ಚಂದ್ರಪಾಲ್ ಹಾಗು ಬ್ರಾಥ್​ವೈಟ್ ಮೊದಲ ವಿಕೆಟ್​ಗೆ 31 ರನ್​ ಪೇರಿಸಿದ್ದರು. ಈ ಹಂತದಲ್ಲಿ ತೇಜ್​ನರೈನ್ (12) ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಅಶ್ವಿನ್ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು.

ಇದರ ಬೆನ್ನಲ್ಲೇ ಕ್ರೈಗ್​ ಬ್ರಾಥ್​ವೈಟ್ (20) ಕೂಡ ಅಶ್ವಿನ್ ಎಸೆತದಲ್ಲಿ ರೋಹಿತ್ ಶರ್ಮಾಗೆ ಕ್ಯಾಚ್ ನೀಡಿ ಹೊರನಡೆದರು. ಆ ಬಳಿಕ ಬಂದ ರೇಮನ್ ರೀಫರ್ (2) ಶಾರ್ದೂಲ್ ಠಾಕೂರ್ ಎಸೆತದಲ್ಲಿ ಕೀಪರ್​ಗೆ ಕ್ಯಾಚಿತ್ತರು. ಈ ಹಂತದಲ್ಲಿ ಜೊತೆಯಾದ ಜೆರ್ಮೈನ್ ಬ್ಲಾಕ್​ವುಡ್ ಹಾಗೂ ಅಲಿಕ್ ಅಥಾನಾಝೆ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದರು. ಆದರೆ ಜಡೇಜಾ ಎಸೆದ 28ನೇ ಓವರ್​ನ ಕೊನೆಯ ಎಸೆತದಲ್ಲಿ ಬ್ಲಾಕ್​ವುಡ್ ಮಿಡ್​ ಆಫ್​ನತ್ತ ಬೌಂಡರಿ ಬಾರಿಸಲು ಯತ್ನಿಸಿದ್ದರು.

ಆದರೆ 30 ಯಾರ್ಡ್ ಸರ್ಕಲ್​ನಲ್ಲೇ ಫೀಲ್ಡಿಂಗ್​ನಲ್ಲಿದ್ದ ಮೊಹಮ್ಮದ್ ಸಿರಾಜ್ ಓಡಿ ಹೋಗಿ ಗಾಳಿಯಲ್ಲಿ ಹಾರಿ ಅದ್ಭುತವಾಗಿ ಚೆಂಡನ್ನು ಹಿಡಿದರು. ಅಲ್ಲಿಗೆ ಜೆರ್ಮೈನ್ ಬ್ಲಾಕ್​ವುಡ್ (14) ಇನಿಂಗ್ಸ್ ಅಂತ್ಯವಾಯಿತು. ಇದೀಗ ಸಿರಾಜ್ ಅವರ ಈ ಅತ್ಯದ್ಭುತ ಕ್ಯಾಚ್​ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಟೀಮ್ ಇಂಡಿಯಾ ವೇಗಿಯ ಈ ಪ್ರಯತ್ನಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಭೋಜನ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 68 ರನ್​ಗಳಿಸಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕ್ರೈಗ್ ಬ್ರಾಥ್‌ವೈಟ್ (ನಾಯಕ) , ತೇಜ್​ನರೈನ್ ಚಂದ್ರಪಾಲ್ , ರೇಮನ್ ರೀಫರ್ , ಜೆರ್ಮೈನ್ ಬ್ಲಾಕ್‌ವುಡ್ , ಅಲಿಕ್ ಅಥಾನಾಝ್ , ಜೋಶುವಾ ಡಾ ಸಿಲ್ವಾ (ವಿಕೆಟ್) , ಜೇಸನ್ ಹೋಲ್ಡರ್ , ರಹಕೀಮ್ ಕಾರ್ನ್‌ವಾಲ್ , ಅಲ್ಝಾರಿ ಜೋಸೆಫ್ , ಕೆಮರ್ ರೋಚ್ , ಜೋಮೆಲ್ ವಾರಿಕನ್.

ಟೀಮ್ ಇಂಡಿಯಾ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಅಜಿಂಕ್ಯ ರಹಾನೆ , ರವೀಂದ್ರ ಜಡೇಜಾ , ಇಶಾನ್ ಕಿಶನ್ (ವಿಕೆಟ್ ಕೀಪರ್) , ರವಿಚಂದ್ರನ್ ಅಶ್ವಿನ್ , ಶಾರ್ದೂಲ್ ಠಾಕೂರ್ , ಜಯದೇವ್ ಉನಾದ್ಕತ್ , ಮೊಹಮ್ಮದ್ ಸಿರಾಜ್.

Follow Us
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ