AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟೀಮ್ ಇಂಡಿಯಾದಲ್ಲಿ ಕೊರೊನಾ: ಹೊಸ ಅಪ್ಡೇಟ್ ಏನು?, ಪಂದ್ಯ ನಡೆಯುತ್ತಾ, ಇಲ್ವಾ?: ಇಲ್ಲಿದೆ ಮಾಹಿತಿ

India vs West Indies: ಕೋವಿಡ್‌ ಸೋಂಕು ಕಾಣಿಸಿಕೊಂಡ ಆಟಗಾರರಾದ ಶಿಖರ್ ಧವನ್‌, ರುತುರಾಜ್ ಗಾಯಕ್ವಾಡ್ ಮತ್ತು ಶ್ರೇಯಸ್ ಅಯ್ಯರ್ ಅವರ ಆರ್‌ಟಿ-ಪಿಸಿಆರ್ ವರದಿ ಕೂಡ ನೆಗೆಟಿವ್ ಬಂದಿದೆ. ಆದರೆ, ಬೇಸರದ ಸಂಗತಿ ಎಂದರೆ ಇವರು ಏಕದಿನ ಸರಣಿಗೆ ಲಭ್ಯ ಇರುವುದಿಲ್ಲ.

IND vs WI: ಟೀಮ್ ಇಂಡಿಯಾದಲ್ಲಿ ಕೊರೊನಾ: ಹೊಸ ಅಪ್ಡೇಟ್ ಏನು?, ಪಂದ್ಯ ನಡೆಯುತ್ತಾ, ಇಲ್ವಾ?: ಇಲ್ಲಿದೆ ಮಾಹಿತಿ
Rohit Sharma and Virat Kohli
TV9 Web
| Edited By: |

Updated on: Feb 04, 2022 | 7:37 AM

Share

ಭಾರತೀಯ ಕ್ರಿಕೆಟ್ ರಂಗದಲ್ಲಿ ಎಬ್ಬಿದ್ದ ಕೊರೊನಾ (Corona virus) ಆತಂಕ ಇದೀಗ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ವೆಸ್ಟ್ ಇಂಡೀಸ್ (India vs West Indies) ವಿರುದ್ಧ ಫೆಬ್ರವರಿ 6 ರಂದು ಅಹ್ಮದಾಬಾದ್​ನಲ್ಲಿ ನಡೆಯಬೇಕಿರುವ ಮೊದಲ ಏಕದಿನ ಪಂದ್ಯ ನಿಗದಿ ಮಾಡಿದ ಸಮಯದಂದೇ ಜರುಗಲಿದೆ. ಸ್ಥಗಿತಗೊಂಡಿದ್ದ ಪ್ಯಾಕ್ರೀಸ್ ಸೆಷನ್ ಮತ್ತೆ ಶುರುವಾಗಿದ್ದು ರೋಹಿತ್ ಪಡೆ ಮೈದಾನದಲ್ಲಿ ಬೆವರಿಳಿಸುತ್ತಿದೆ. ಕೋವಿಡ್‌ ಸೋಂಕು ಕಾಣಿಸಿಕೊಂಡ ಆಟಗಾರರಾದ ಶಿಖರ್ ಧವನ್‌ (Shikhar Dhwan), ರುತುರಾಜ್ ಗಾಯಕ್ವಾಡ್ ಮತ್ತು ಶ್ರೇಯಸ್ ಅಯ್ಯರ್ ಅವರ ಆರ್‌ಟಿ-ಪಿಸಿಆರ್ ವರದಿ ಕೂಡ ನೆಗೆಟಿವ್ ಬಂದಿದೆ. ಆದರೆ, ಬೇಸರದ ಸಂಗತಿ ಎಂದರೆ ಇವರು ಏಕದಿನ ಸರಣಿಗೆ ಲಭ್ಯ ಇರುವುದಿಲ್ಲ. ಒಂದು ವಾರ ಪ್ರತ್ಯೇಕವಾಸದಲ್ಲಿ ಇರಬೇಕಾದ ಅವರ ಆರ್‌ಟಿ-ಪಿಸಿಆರ್‌ ವರದಿ ನೆಗೆಟಿವ್ ಆದರೆ ಮಾತ್ರ ವಿಂಡೀಸ್ ವಿರುದ್ಧದ ಟಿ20 ಸರಣಿಗೆ ಲಭ್ಯರಿರುತ್ತಾರೆ ಎಂದು ವರದಿಯಾಗಿದೆ. ಟೀಮ್ ಇಂಡಿಯಾ ಕ್ಯಾಂಪ್​ನಲ್ಲಿಲ್ಲದ ಅಕ್ಷರ್ ಪಟೇಲ್​ಗೆ ಕೂಡ ಕೋವಿಡ್ ಪಾಸಿಟಿವ್ ಕಂಡುಬಂದಿತ್ತು. ಇವರುಕೂಡ ಗುಣಮುಖರಾಗುತ್ತಿದ್ದಾರೆ. ಅಂತೆಯೆ ಭಾರತ ಏಕದಿನ ತಂಡಕ್ಕೆ ಮಯಾಂಕ್ ಅಗರ್ವಾಲ್ ಮತ್ತು ವಿಕೆಟ್ ಕೀಪರ್, ಬ್ಯಾಟರ್ ಇಶಾನ್ ಕಿಶನ್ ಸೇರ್ಪಡೆಯಾಗಿದ್ದಾರೆ.

ಮಯಾಂಕ್ ಗುರುವಾರ ತಂಡವನ್ನು ಸೇರಿಕೊಂಡಿದ್ದಾರೆ. ನಿಯಮದ ಪ್ರಕಾರ ಅವರು ಮೂರು ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್‌ನಲ್ಲಿ ಇರಬೇಕಾಗಿದೆ. ಹೀಗಾಗಿ ನೇರವಾಗಿ ಪಂದ್ಯಕ್ಕೆ ಲಭ್ಯ ಇರುತ್ತಾರೆ. ಇಶಾನ್ ಕಿಶನ್ ಕೂಡ ಇದೇ ನಿಯಮ ಅನುಸರಿಸಲಿದ್ದಾರೆ. ಕೆಎಲ್ ರಾಹುಲ್ ಅವರಿಗೆ ಸಹೋದರಿಯ ವಿವಾಹದ ಕಾರಣ ಮೊದಲ ಏಕದಿನ ದಿನದಿಂದ ಹೊರಗುಳಿದಿದ್ದು, ಎರಡನೇ ಪಂದ್ಯಕ್ಕೆ ತಂಡ ಸೇರಿಕೊಳ್ಳಲಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ನಿಗದಿ ಪಡಿಸಿದಂತೆ ಪಂದ್ಯ ನಡೆಯಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗಾಗಿ ಅಹ್ಮದಾಬಾದ್​ಗೆ ತೆರಳುವ ಮುನ್ನ ಮನೆಯಲ್ಲಿ ಭಾರತದ ಎಲ್ಲ ಆಟಗಾರರಿಗೆ ಆರ್​ಟಿಪಿಸಿಆರ್ ಟೆಸ್ಟ್ ಮಾಡಿಸುವಂತೆ ಸೂಚಿಸಲಾಗಿತ್ತು. ಅದರಲ್ಲಿ ಎಲ್ಲರಿಗೂ ನೆಗೆಟಿವ್ ಬಂದಿತ್ತು. ನಂತರ ಜ. 31 ಸೋಮವಾರ ನಡೆಸಿದ ಆರ್​ಟಿಪಿಸಿಆರ್ ಟೆಸ್ಟ್​ನಲ್ಲಿ ಮೊದಲು ಧವನ್ ಮತ್ತು ನವ್​ದೀಪ್ ಸೈನಿಗೆ ಪಾಸಿಟಿವ್ ಬಂದಿದೆ. ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಮತ್ತು ಮತ್ತೊಬ್ಬರಿಗೆ ಕೊರೊನಾ ದೃಢಪಟ್ಟಿದೆ. ಫೆ. 1 ರಂದು ರುತುರಾಜ್ ಗಾಯಕ್ವಾಡ್​ಗೆ ಫೆ. 2 ರಂದು ಶ್ರೇಯಸ್ ಅಯ್ಯರ್ ಮತ್ತು ಸ್ಫೋಟರ್ಸ್ ಮಸಾಜ್ ಥೆರಪಿಯವರಾದ ರಾಜೀವ್ ಕುಮಾರ್​ಗೆ ಪಾಸಿಟಿವ್ ಕಂಡುಬಂದಿತ್ತು.

ಚೇತರಿಸಿಕೊಳ್ಳುತ್ತಿರುವ ಧವನ್:

ಕೊರೊನಾ ಪಾಸಿಟಿವ್ ಕಂಡುಬಂದ ನಂತರ ಶಿಖರ್ ಧವನ್ ಅವರು ತಮ್ಮ ಆರೋಗ್ಯದ ಕುರಿತ ಅಪ್ಡೇಟ್ ನೀಡಿದ್ದಾರೆ. ‘ನಿಮ್ಮ ಶುಭಾಶಯಗಳಿಗಾಗಿ ಎಲ್ಲರಿಗೂ ಧನ್ಯವಾದಗಳು. ನಾನು ಚೆನ್ನಾಗಿಯೇ ಇದ್ದೇನೆ ಮತ್ತು ಎಲ್ಲರ ಪ್ರೀತಿಯಿಂದ ವಿನಮ್ರನಾಗಿದ್ದೇನೆ’ ಎಂದು ಭಾರತದ ಓಪನರ್ ಧವನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:

ಫೆಬ್ರವರಿ 6 – 1 ನೇ ODI, ಅಹ್ಮದಾಬಾದ್

ಫೆಬ್ರವರಿ 9 – 2 ನೇ ODI, ಅಹ್ಮದಾಬಾದ್

ಫೆಬ್ರವರಿ 11 – 3 ನೇ ODI, ಅಹ್ಮದಾಬಾದ್

IND vs WI ODI: ಟೀಮ್ ಇಂಡಿಯಾದಲ್ಲಿ ಕೊರೋನಾತಂಕ: ತಂಡಕ್ಕೆ ಮತ್ತಿಬ್ಬರು ಆಟಗಾರರ ಆಯ್ಕೆ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ