AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ರೋಹಿತ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸುವುದು ಯಾರು?

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿಯು ಜುಲೈ 27 ರಿಂದ ಪ್ರಾರಂಭವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲಿದೆ.

IND vs WI: ರೋಹಿತ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸುವುದು ಯಾರು?
Team India
TV9 Web
| Edited By: |

Updated on: Jul 25, 2023 | 7:09 PM

Share

India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿ ಜುಲೈ 27 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವುದು ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ತಂಡದಲ್ಲಿ ಮೂವರು ಆರಂಭಿಕ ಬ್ಯಾಟರ್​ಗಳು ಸ್ಥಾನ ಪಡೆದಿದ್ದು, ಇದೀಗ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಲು ಯುವ ಆಟಗಾರ ನಡುವೆ ಪೈಪೋಟಿ ಏರ್ಪಟ್ಟಿದೆ.

ಮೂವರು ಆರಂಭಿಕ ಸ್ಪರ್ಧಿಗಳು:

ಪ್ರಸ್ತುತ ಭಾರತ ಏಕದಿನ ತಂಡದಲ್ಲಿ ಮೂವರು ಆರಂಭಿಕ ಆಟಗಾರರು ಸ್ಥಾನ ಪಡೆದಿದ್ದಾರೆ. ಇಲ್ಲಿ ನಾಯಕ ರೋಹಿತ್ ಶರ್ಮಾ ಇನಿಂಗ್ಸ್​ ಆರಂಭಿಸುವುದು ಖಚಿತ. ಆದರೆ ಮತ್ತೊಂದೆಡೆ ಕಣಕ್ಕಿಳಿಯುವುದು ಯಾರು ಎಂಬುದೇ ಪ್ರಶ್ನೆ. ಏಕೆಂದರೆ ತಂಡದಲ್ಲಿ ಆರಂಭಿಕರಾಗಿ ಶುಭ್​ಮನ್ ಗಿಲ್, ಇಶಾನ್ ಕಿಶನ್ ಹಾಗೂ ರುತುರಾಜ್ ಗಾಯಕ್ವಾಡ್ ಸ್ಥಾನ ಪಡೆದಿದ್ದಾರೆ. ಇಲ್ಲಿ ದ್ವಿಶತಕಗಳನ್ನು ಸಿಡಿಸುವ ಮೂಲಕ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ. ಹೀಗಾಗಿ ರುತುರಾಜ್ ಅವಕಾಶ ವಂಚಿತರಾಗುವುದು ಖಚಿತ ಎನ್ನಬಹುದು.

ಆದರೆ ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಲಿದ್ದಾರೆ ಎಂಬುದೇ ಈಗ ಕುತೂಹಲ. ಏಕೆಂದರೆ ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪರ್ ಕೋಟದಲ್ಲಿ ಆಯ್ಕೆ ಮಾಡಿದರೆ ಸಂಜು ಸ್ಯಾಮ್ಸನ್​ಗೆ ಚಾನ್ಸ್ ಕೈ ತಪ್ಪಲಿದೆ. ಹೀಗಾಗಿ ಶುಭ್​ಮನ್ ಗಿಲ್ ಅವರೊಂದಿಗೆ ರೋಹಿತ್ ಶರ್ಮಾ ಇನಿಂಗ್ಸ್​ ಆರಂಭಿಸುವ ಸಾಧ್ಯತೆಯಿದೆ.

ಮತ್ತೊಂದೆಡೆ ಟೆಸ್ಟ್ ಕ್ರಿಕೆಟ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಸಿಡಿಸಿರುವ ಇಶಾನ್ ಕಿಶನ್ ಅವರ ಫಾರ್ಮ್ ಕೂಡ ಇಲ್ಲಿ ಪರಿಗಣಿಸಬೇಕಾಗುತ್ತದೆ. ಹಾಗಾಗಿ ಆಡುವ ಬಳಗವನ್ನು ಆಯ್ಕೆ ಮಾಡುವುದೇ ನಾಯಕ ಹಾಗೂ ಕೋಚ್ ಮುಂದಿರುವ ದೊಡ್ಡ ಸವಾಲು.

ಇದನ್ನೂ ಓದಿ: ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗದ ಅರ್ಧಶತಕ ಸಿಡಿಸಿದ್ದು ಯಾರು ಗೊತ್ತಾ?

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕಟ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

Follow Us
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ